AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಳು ಸಿನಿಮಾ ಕದ್ದು ಕಲಾಸಿಪಾಳ್ಯ ಮಾಡಿದ್ದೆ’; ಓಂ ಪ್ರಕಾಶ್ ರಾವ್ ಓಪನ್ ಹೇಳಿಕೆ

ಓಂ ಪ್ರಕಾಶ್ ರಾವ್ ಅವರು ತಮ್ಮ ಸೂಪರ್ ಹಿಟ್ ಸಿನಿಮಾ ‘ಕಲಾಸಿಪಾಳ್ಯ’ದ ಕಥೆ ಕದ್ದಿದ್ದು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಬಿಡುಗಡೆಗೂ ಮೊದಲು ಈ ವಿಷಯವನ್ನು ಹಂಚಿಕೊಂಡಿದ್ದಾಗಿ ಅವರು ಹೇಳಿದ್ದಾರೆ. ಈ ಚಿತ್ರ ದರ್ಶನ್ ಮತ್ತು ರಕ್ಷಿತಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. 2004ರಲ್ಲಿ ಸಿನಿಮಾ ತೆರೆಗೆ ಬಂದಿತ್ತು.

‘ಏಳು ಸಿನಿಮಾ ಕದ್ದು ಕಲಾಸಿಪಾಳ್ಯ ಮಾಡಿದ್ದೆ’; ಓಂ ಪ್ರಕಾಶ್ ರಾವ್ ಓಪನ್ ಹೇಳಿಕೆ
ಓಂ ಪ್ರಕಾಶ್-ದರ್ಶನ್
ರಾಜೇಶ್ ದುಗ್ಗುಮನೆ
|

Updated on: Sep 17, 2025 | 8:47 AM

Share

‘ಕಲಾಸಿಪಾಳ್ಯ’ ಸಿನಿಮಾ 2004ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ದರ್ಶನ್ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ಸ್ಟಾರ್​ಡಂ ತಂದುಕೊಟ್ಟಿದ್ದು ಇದೇ ಚಿತ್ರ. ‘ಅಪ್ಪು’ ಸಿನಿಮಾ ಮೂಲಕ ಗಮನ ಸೆಳೆದಿದ್ದ ರಕ್ಷಿತಾ ಅವರು ಈ ಚಿತ್ರದಿಂದ ಮತ್ತಷ್ಟು ಬೇಡಿಕೆ ಹೆಚ್ಚಿಸಿಕೊಂಡರು. ಈ ಚಿತ್ರವನ್ನು ಓಂ ಪ್ರಕಾಶ್ ರಾವ್ (Om Prakash Ra0) ನಿರ್ದೇಶನ ಮಾಡಿದ್ದರು. ಈ ಚಿತ್ರದ ಬಗ್ಗೆ ಅವರೇ ಮಾತನಾಡಿದ್ದಾರೆ. ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಿದ್ದರಿಂದ ಅವರು ಕಥೆಯನ್ನು ಕದಿಯಬೇಕಾಯಿತಂತೆ.

‘ನ್ಯೂಸೋ ನ್ಯೂಸು’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಓಂ ಪ್ರಕಾಶ್ ರಾವ್ ಮಾತನಾಡಿದ್ದಾರೆ. ‘ಜನರು, ಮಾಧ್ಯಮದವರ ಎದುರು ಸುಳ್ಳು ಹೇಳಲ್ಲ. ಸಿನಿಮಾ ಫ್ಲಾಪ್ ಆದರೆ ಫ್ಲಾಪ್ ಅಂತ ಒಪ್ಪಿಕೊಳ್ಳುತ್ತೇನೆ. ಕೆಲವು ಸಿನಿಮಾಗಳು ರಿಲೀಸ್ ಆಗುವ ಮೊದಲೇ ಫ್ಲಾಪ್ ಆಗುವ ಸೂಚನೆ ಸಿಕ್ಕರೆ ನಾನು ಅದನ್ನು ಮೊದಲೇ ಹೇಳುತ್ತಿದ್ದೆ’ ಎಂದಿದ್ದಾರೆ ಅವರು.

‘ಕಲಾಸಿಪಾಳ್ಯ ಏಳು ಸಿನಿಮಾದ ಕಥೆ ಕದ್ದು ಮಾಡಿದ್ದೆ. ಆಗ ನಾನು ಸಾಹುಕಾರ ಸಿನಿಮಾ ಶೂಟಿಂಗ್ ಮಾಡುತ್ತಾ ಇದ್ದಿದ್ದರಿಂದ ಸಮಯ ಇರಲಿಲ್ಲ. ನಾನು ಸಿನಿಮಾ ರಿಲೀಸ್​ಗೂ ಮೊದಲೇ ಈ ವಿಚಾರ ಹೇಳಿಕೊಂಡೆ. ಯಾರು ಇದನ್ನು ಒಪ್ಪಿಕೊಳ್ಳುತ್ತಾರೆ ನೀವೇ ಹೇಳಿ’ ಎಂದು ಓಂ ಪ್ರಕಾಶ್ ರಾವ್ ಪ್ರಶ್ನೆ ಮಾಡಿದ್ದಾರೆ.

‘ಬೆರಕೆ ಸೊಪ್ಪಿನ ಸಾರು, ಜನರಿಗೆ ಇಷ್ಟ ಆಗುತ್ತದೆ ಎಂದು ಹೇಳಿದ್ದೆ. ಹಾಗೆಯೇ ಆಯ್ತು. ಸಿನಿಮಾ ಬ್ಲಾಕ್​​ಬಸ್ಟರ್ ಆಯ್ತು. ದರ್ಶನ್​ಗೆ, ರಕ್ಷಿತಾ ಸ್ಟಾರ್​​ಡಂ ತಂದುಕೊಟ್ಟ ಚಿತ್ರ ಇದು. ನಾನು ಜೀವನದಲ್ಲಿ ಸಣ್ಣ ಪುಟ್ಟ ಸುಳ್ಳು ಹೇಳಿರಬಹುದು, ಆದರೆ, ದೊಡ್ಡ ಸುಳ್ಳುಗಳನ್ನು ಪ್ರೇಕ್ಷಕರಿಗೆ ಹೇಳೋದಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 6 ಸಿನಿಮಾ ಮಾಡಿದರೂ ದರ್ಶನ್ ನನ್ನ ಬಳಿ ಕಥೆ ಕೇಳಿಲ್ಲ: ಓಂ ಪ್ರಕಾಶ್ ರಾವ್

ಓಂ ಪ್ರಕಾಶ್ ರಾವ್ ಅವರು ಇತ್ತೀಚೆಗೆ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಮಾಡಿದರು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಅವರು ಕೆಲ ವರ್ಷ ಕನ್ನಡ ಚಿತ್ರರಂಗದಿಂದ ದೂರ ಇದ್ದರು. ಈಗ ಅವರು ಮತ್ತೆ ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ