AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದಾಗ ಅಣ್ಣಾವ್ರು ಬಂದು ತಲೆ ಸವರಿದ್ರು’; ಹಳೇ ಘಟನೆ ನೆನೆದ ಜಗ್ಗೇಶ್

1992ರಲ್ಲಿ ರಿಲೀಸ್ ಆದ ‘ತರ್ಲೆ ನನ್ಮಗ’ ಸಿನಿಮಾ ಮೂಲಕ ಅವರು ಹೀರೋ ಆದರು ಜಗ್ಗೇಶ್. ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು.

‘ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದಾಗ ಅಣ್ಣಾವ್ರು ಬಂದು ತಲೆ ಸವರಿದ್ರು’; ಹಳೇ ಘಟನೆ ನೆನೆದ ಜಗ್ಗೇಶ್
ಜಗ್ಗೇಶ್
ರಾಜೇಶ್ ದುಗ್ಗುಮನೆ
|

Updated on: Apr 24, 2024 | 12:57 PM

Share

ವರನಟ ಡಾ. ರಾಜ್​ಕುಮಾರ್ (Dr Rajkumar) ಹಾಗೂ ಜಗ್ಗೇಶ್ ಕುಟುಂಬದ ನಡುವೆ ಒಳ್ಳೆಯ ಬಾಂಧವ್ಯ ಇದೆ. ರಾಜ್​ಕುಮಾರ್ ಜೊತೆ ಜಗ್ಗೇಶ್ ಒಳ್ಳೆಯ ಒಡನಾಟ ಹೊಂದಿದ್ದರು. ಪುನೀತ್ ರಾಜ್​ಕುಮಾರ್ ಜೊತೆಯೂ ಅವರಿಗೆ ಉತ್ತಮ ಬಾಂಧವ್ಯ ಇತ್ತು. ಅಣ್ಣಾವ್ರ ಜನ್ಮದಿನ ಹಿನ್ನೆಲೆಯಲ್ಲಿ ಜಗ್ಗೇಶ್ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ಅಣ್ಣಾವ್ರ ಸಮಾಧಿಗೆ ಅವರು ನಮಿಸಿದ್ದಾರೆ. ಆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಜಗ್ಗೇಶ್ ಹಳೆಯ ಘಟನೆ ಒಂದನ್ನು ನೆನಪಿಸಿಕೊಂಡಿದ್ದಾರೆ.

ಜಗ್ಗೇಶ್ ಅವರು ಹಾಸ್ಯ ಕಲಾವಿದರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. 1992ರಲ್ಲಿ ರಿಲೀಸ್ ಆದ ‘ತರ್ಲೆ ನನ್ಮಗ’ ಸಿನಿಮಾ ಮೂಲಕ ಅವರು ಹೀರೋ ಆದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು.

‘ನಾನು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ. ಮಣಿಪಾಲ್ ಆಸ್ಪತ್ರೆಗೆ ನನ್ನನ್ನು ಅಡ್ಮಿಟ್ ಮಾಡಿದ್ದರು. ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ, ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗಬಾರದು ಎಂದು ಕಿವಿಮಾತು ಹೇಳಿದ್ದರು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟಿದ್ದು ರಾಜ್​ಕುಮಾರ್. ಅಣ್ಣಾವ್ರ ಆಶೀರ್ವಾದ ನಂತರ ನನ್ನ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆದವು’ ಎಂದು ರಾಜ್​ಕುಮಾರ್ ಸಹಾಯ ನೆನಪಿಸಿಕೊಂಡರು ಜಗ್ಗೇಶ್.

ಇದನ್ನೂ ಓದಿ: ರಾಜ್​ಕುಮಾರ್​ನ ಶರ್ಟ್​ಲೆಸ್​ ಆಗಿ ನೋಡಬೇಕು ಎಂದು ಹಠ ಹಿಡಿದಿದ್ದ ಕಾಲೇಜು ಹುಡುಗಿಯರು 

‘ನಮ್ಮ ತಂದೆ ಹಾಗು ರಾಜ್​ಕುಮಾರ್ ಮೂಗು ಸೇಮ್ ಇದೆ. ನನಗೆ ರಾಜಣ್ಣ ಅಂದ್ರೆ ಪಂಚಪ್ರಾಣ. ನಾನು ಅವರಲ್ಲಿ ತಂದೆಯ ವಾತ್ಸಲ್ಯ ಕಂಡೆ. ನಾನು ಹೊಸದಾಗಿ ಮನೆ ಕಟ್ಟಿದೀನಿ ಬರಬೇಕು ಎಂದೆ. ಬೆಳಿಗ್ಗೆ 11 ಗಂಟೆಗೆ ಬಂದರು. ಮಧ್ಯಾಹ್ನ 3 ಗಂಟೆವರೆಗೂ ಕೂತು ಮಾತನಾಡಿದ್ದರು. ಅನೇಕ ನೆನಪುಗಳು, ಒಡನಾಟ ಇವೆ. ರಾಜ್​ಕುಮಾರ್ ಕೊನೆಯ ಜರ್ನಿಯಲ್ಲಿ ನಾನಿದ್ದೆ. ಅವರ ಮೃತದೇಹದ ಜೊತೆಗೆ ನಾನು ಇಡೀ ದಿನ ಇದ್ದೆ’ ಎಂದು ಜಗ್ಗೇಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು