ದರ್ಶನ್ ಭೇಟಿಯಾಗಲು ಅನುಮತಿ ಇರುವುದು ಈ ಏಳು ಜನರಿಗೆ ಮಾತ್ರ

Darshan Thoogudeepa: ದರ್ಶನ್​ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆಯೇ ಅಗತ್ಯ ಪರೀಕ್ಷೆಗಳನ್ನು ಮಾಡಲಾಗಿದೆ. ಆಸ್ಪತ್ರೆಯಲ್ಲಿ ದರ್ಶನ್ ಅನ್ನು ಭೇಟಿ ಮಾಡಲು ಕೇವಲ ಏಳು ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ದರ್ಶನ್ ಭೇಟಿಯಾಗಲು ಅನುಮತಿ ಇರುವುದು ಈ ಏಳು ಜನರಿಗೆ ಮಾತ್ರ
ದರ್ಶನ್
Follow us
ಮಂಜುನಾಥ ಸಿ.
|

Updated on: Nov 02, 2024 | 2:33 PM

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಬೆನ್ನು ನೋವಿನ ಚಿಕಿತ್ಸೆಗೆಂದು ಆರು ವಾರಗಳ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಜಾಮೀನು ದೊರೆತ ಮೊದಲೆರಡು ಮನೆಯಲ್ಲಿ ಕಳೆದ ನಟ ದರ್ಶನ್ ಮೂರನೇ ದಿನ ಅಂದರೆ ನಿನ್ನೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಹಲವು ಪರೀಕ್ಷೆಗಳನ್ನು ದರ್ಶನ್​ಗೆ ಬಿಜಿಎಸ್ ವೈದ್ಯರು ಮಾಡಿದ್ದು, ನಿನ್ನೆಯೇ ಆಸ್ಪತ್ರೆಗೆ ದಾಖಲು ಮಾಡಿಕೊಂಡಿದ್ದರು.

ಇಂದಿನಿಂದ ದರ್ಶನ್​ಗೆ ವಿವಿಧ ಚಿಕಿತ್ಸೆಗಳು ಪ್ರಾರಂಭ ಆಗಿವೆ. ಅಲ್ಲದೆ ಆಸ್ಪತ್ರೆಯಲ್ಲಿ ದರ್ಶನ್​ಗಾಗಿ ಕೆಲವು ನಿಯಮಗಳನ್ನು ಸಹ ರೂಪಿಸಲಾಗಿವೆ. ವಿಶೇಷವಾಗಿ ದರ್ಶನ್ ಅನ್ನು ಬರುವ ಯಾರಿಗೂ ಸಹ ಪ್ರವೇಶ ಇರುವುದಿಲ್ಲ. ಕೇವಲ ಏಳು ಜನರಿಗೆ ಹೊರತುಪಡಿಸಿ ಇನ್ಯಾರಿಗೂ ಸಹ ದರ್ಶನ್ ಅನ್ನು ಭೇಟಿ ಮಾಡುವ ಅವಕಾಶ ಇರುವುದಿಲ್ಲ. ಈ ವಿಷಯವನ್ನು ದರ್ಶನ್ ಕುಟುಂಬದವರೇ ಆಸ್ಪತ್ರೆಯವರಿಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್, ತಾಯಿ ಮೀನಮ್ಮ, ಸಹೋದರ ದಿನಕರ್ ತೂಗುದೀಪ್, ದರ್ಶನ್ ಆಪ್ತ ಧನ್ವೀರ್ ಹಾಗೂ ವಕೀಲರನ್ನು ಬಿಟ್ಟರೆ ಇನ್ಯಾರೂ ಸಹ ದರ್ಶನ್ ಅನ್ನು ಭೇಟಿ ಮಾಡುವಂತಿಲ್ಲ ಎನ್ನಲಾಗಿದೆ. ದರ್ಶನ್​ಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ, ಅದರ ಜೊತೆಗೆ ಭೇಟಿಗೆ ಹೆಚ್ಚು ಜನ ಬಂದರೆ ಆಸ್ಪತ್ರೆಯಲ್ಲಿ ಇತರ ರೋಗಿಗಳಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸಮಸ್ಯೆ ಆಗುತ್ತದೆ, ಭದ್ರತೆ ಸಮಸ್ಯೆಯೂ ಇರುತ್ತದೆಯಾದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ:ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

ಕುಟುಂಬದವರ ಹೊರತಾಗಿ ಧನ್ವೀರ್​ಗೆ ಮಾತ್ರವೇ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ವಿಜಯಲಕ್ಷ್ಮಿ ಅವರ ಜೊತೆಗೆ ಧನ್ವೀರ್ ನಿಂತಿದ್ದು, ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಕೆಲ ಭಾರಿ ವಿಜಯಲಕ್ಷ್ಮಿ ಅವರ ಜೊತೆಗೆ ದರ್ಶನ್ ಭೇಟಿಗೆ ಧನ್ವೀರ್ ಸಹ ಬಳ್ಳಾರಿಗೆ ಬಂದಿದ್ದರು. ಧನ್ವೀರ್ ಅನ್ನು ದರ್ಶನ್ ಸಹೋದರನೆಂದೇ ಪರಿಗಣಿಸಿರುವ ಕಾರಣ ಅವರಿಗೂ ಸಹ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ.

ಇನ್ನು ದರ್ಶನ್​ಗೆ ಎಲ್​1-ಎಲ್​5 ಸಮಸ್ಯೆ ಇದ್ದು, ಇದೇ ಕಾರಣಕ್ಕೆ ತೀವ್ರ ಬೆನ್ನುನೋವು ಹಾಗೂ ಎಡಗಾಲಿನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಎಡಗಾಲು ಸ್ಪರ್ಷಜ್ಞಾನ ಕಳೆದುಕೊಳ್ಳುತ್ತಿದ್ದು ಇದೇ ಕಾರಣಕ್ಕೆ ಶೀಘ್ರವಾಗಿ ದರ್ಶನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ದರ್ಶನ್​ಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾ ಅಥವಾ ಫಿಸಿಯೋಥೆರಪಿನಾ ಎನ್ನುವುದು ಇನ್ನು 48 ಗಂಟೆಗಳಲ್ಲಿ ನಿರ್ಧಾರ ಆಗಲಿದೆ. ವೈದ್ಯರು ದರ್ಶನ್​ಗೆ ಮಾಡಿರುವ ಪರೀಕ್ಷಾ ವರದಿಗಳನ್ನು ಪರಾಮರ್ಶೆ ಮಾಡುತ್ತಿದ್ದು, ಕುಟುಂಬದ ಜೊತೆಗೆ ಹಾಗೂ ರೋಗಿ ದರ್ಶನ್​ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್