AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಚಿತ್ರಕ್ಕೆ ಬೇರೆ ಬೇರೆ ಥಿಯೇಟರ್​ನಲ್ಲಿ ಡಿಫರೆಂಟ್ ಕ್ಲೈಮ್ಯಾಕ್ಸ್? ಸ್ಪಷ್ಟನೆ ನೀಡಿದ ಉಪೇಂದ್ರ

ಉಪೇಂದ್ರ ಅವರ ನಟನೆಯ ‘ಯುಐ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಟ್ರೇಲರ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಉಪೇಂದ್ರ ಅವರ ಸಿನಿಮಾದಲ್ಲಿ ಏನೆಲ್ಲ ಇರಬಹುದು ಎಂದು ಊಹಿಸಿಕೊಂಡು ತಲೆಕೆರೆದುಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಚಿತ್ರದ ಬಗ್ಗೆ ವದಂತಿ ಹಬ್ಬಿಸಿದ್ದರು.

‘ಯುಐ’ ಚಿತ್ರಕ್ಕೆ ಬೇರೆ ಬೇರೆ ಥಿಯೇಟರ್​ನಲ್ಲಿ ಡಿಫರೆಂಟ್ ಕ್ಲೈಮ್ಯಾಕ್ಸ್? ಸ್ಪಷ್ಟನೆ ನೀಡಿದ ಉಪೇಂದ್ರ
ಉಪೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 21, 2024 | 7:43 PM

Share

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಈ ವಾರವರೇ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಭಿನ್ನವಾಗಿ ಬರಲಿದೆ ಎಂಬ ಸ್ಪಷ್ಟ ಚಿತ್ರಣ ಅಭಿಮಾನಿಗಳಿಗೆ ಸಿಕ್ಕಿದೆ. ಹೀಗಿರುವಾಗಲೇ ‘ಯುಐ’ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಸಾಕಷ್ಟು ವದಂತಿ ಹಬ್ಬಿತ್ತು. ಇದಕ್ಕೆ ಉಪೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ಇದನ್ನು ಒಪ್ಪಿಕೊಂಡ್ರಾ? ಅಥವಾ ಅಲ್ಲಗಳೆದರಾ ಎಂಬ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಉತ್ತರ ಇದೆ.

ಉಪೇಂದ್ರ ಅವರ ನಟನೆಯ ‘ಯುಐ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಟ್ರೇಲರ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಉಪೇಂದ್ರ ಅವರ ಸಿನಿಮಾದಲ್ಲಿ ಏನೆಲ್ಲ ಇರಬಹುದು ಎಂದು ಊಹಿಸಿಕೊಂಡು ತಲೆಕೆರೆದುಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಚಿತ್ರದ ಬಗ್ಗೆ ವದಂತಿ ಹಬ್ಬಿಸಿದ್ದರು.

‘ಯಐ ಚಿತ್ರಕ್ಕೆ ಎರಡು ಕ್ಲೈಮ್ಯಾಕ್ಸ್ ಇರಲಿದ್ದು, ಒಂದೊಂದು ಥಿಯೇಟರ್​ನಲ್ಲಿ ಒಂದೊಂದು ಕ್ಲೈಮ್ಯಾಕ್ಸ್ ಬಿತ್ತರ ಆಗಲಿದೆ. ಪ್ರೇಕ್ಷಕರಿಗೆ ಬೇರೆ ಬೇರೆಯದೇ ಆದ ಕ್ಲೈಮ್ಯಾಕ್ಸ್ ನೋಡ ಸಿಗಲಿದೆ’ ಎನ್ನುವ ವದಂತಿ ಇತ್ತು. ಇದು ಅಸಾಧ್ಯ ಎಂಬ ಮಾತನ್ನು ಉಪೇಂದ್ರ ಹೇಳಿದ್ದಾರೆ.

‘ಎರಡು ಕ್ಲೈಮ್ಯಾಕ್ಸ್ ಎಂಬ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ. ಸಿನಿಮಾಗೆ ಒಂದೇ ಕ್ಲೈಮ್ಯಾಕ್ಸ್ ಇದೆ. ಕಂಟೆಂಟ್ ಉತ್ತಮವಾಗಿದೆ. ಹೀಗಾಗಿ, ನೀವು ಸಿನಿಮಾನ ಎರಡು ಬಾರಿ ನೋಡಬೇಕು ಎಂದನಿಸುತ್ತದೆ’ ಎಂದು ಉಪೇಂದ್ರ ಹೇಳಿದ್ದಾರೆ. ಉಪ್ಪಿ ಯಾವಾಗಲೂ ಭಿನ್ನ ಸಿನಿಮಾಗಳನ್ನು ಮಾಡುತ್ತಾರೆ. ಈ ಕಾರಣಕ್ಕೆ ಇದು ನಿಜ ಇದ್ದರೂ ಇರಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ.

ಓಪನಿಂಗ್ ದೃಶ್ಯ ಹೇಗಿರುತ್ತದೆ ಎಂಬ ಬಗ್ಗೆಯೂ ಅವರು ಹಿಂಟ್ ಕೊಟ್ಟಿದ್ದಾರೆ. ‘ಓಪನಿಂಗ್ ದೃಶ್ಯವೇ ಪ್ರೇಕ್ಷಕರಿಗೆ ಶಾಕಿಂಗ್ ಆಗಿರಲಿದೆ’ ಎಂದು ಉಪೇಂದ್ರ ಭವಿಷ್ಯ ನುಡಿದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಓಪನಿಂಗ್ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಜೋರಾಗಿದೆ.

ಇದನ್ನೂ ಓದಿ: ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅನ್ನು ಭೇಟಿಯಾದ ನಟ ಉಪೇಂದ್ರ

‘ಯುಐ’ ಸಿನಿಮಾ ಪ್ರಚಾರಕ್ಕಾಗಿ ಉಪೇಂದ್ರ ಅವರು ನಾನಾ ಕಡೆಗಳಿಗೆ ತೆರಳುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಅಲ್ಲಿನವರಿಗೂ ಸಿನಿಮಾ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Wed, 18 December 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ