AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಚಿತ್ರಕ್ಕೆ ಬೇರೆ ಬೇರೆ ಥಿಯೇಟರ್​ನಲ್ಲಿ ಡಿಫರೆಂಟ್ ಕ್ಲೈಮ್ಯಾಕ್ಸ್? ಸ್ಪಷ್ಟನೆ ನೀಡಿದ ಉಪೇಂದ್ರ

ಉಪೇಂದ್ರ ಅವರ ನಟನೆಯ ‘ಯುಐ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಟ್ರೇಲರ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಉಪೇಂದ್ರ ಅವರ ಸಿನಿಮಾದಲ್ಲಿ ಏನೆಲ್ಲ ಇರಬಹುದು ಎಂದು ಊಹಿಸಿಕೊಂಡು ತಲೆಕೆರೆದುಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಚಿತ್ರದ ಬಗ್ಗೆ ವದಂತಿ ಹಬ್ಬಿಸಿದ್ದರು.

‘ಯುಐ’ ಚಿತ್ರಕ್ಕೆ ಬೇರೆ ಬೇರೆ ಥಿಯೇಟರ್​ನಲ್ಲಿ ಡಿಫರೆಂಟ್ ಕ್ಲೈಮ್ಯಾಕ್ಸ್? ಸ್ಪಷ್ಟನೆ ನೀಡಿದ ಉಪೇಂದ್ರ
ಉಪೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 21, 2024 | 7:43 PM

Share

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಈ ವಾರವರೇ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಭಿನ್ನವಾಗಿ ಬರಲಿದೆ ಎಂಬ ಸ್ಪಷ್ಟ ಚಿತ್ರಣ ಅಭಿಮಾನಿಗಳಿಗೆ ಸಿಕ್ಕಿದೆ. ಹೀಗಿರುವಾಗಲೇ ‘ಯುಐ’ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಸಾಕಷ್ಟು ವದಂತಿ ಹಬ್ಬಿತ್ತು. ಇದಕ್ಕೆ ಉಪೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ಇದನ್ನು ಒಪ್ಪಿಕೊಂಡ್ರಾ? ಅಥವಾ ಅಲ್ಲಗಳೆದರಾ ಎಂಬ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಉತ್ತರ ಇದೆ.

ಉಪೇಂದ್ರ ಅವರ ನಟನೆಯ ‘ಯುಐ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಟ್ರೇಲರ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಉಪೇಂದ್ರ ಅವರ ಸಿನಿಮಾದಲ್ಲಿ ಏನೆಲ್ಲ ಇರಬಹುದು ಎಂದು ಊಹಿಸಿಕೊಂಡು ತಲೆಕೆರೆದುಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಚಿತ್ರದ ಬಗ್ಗೆ ವದಂತಿ ಹಬ್ಬಿಸಿದ್ದರು.

‘ಯಐ ಚಿತ್ರಕ್ಕೆ ಎರಡು ಕ್ಲೈಮ್ಯಾಕ್ಸ್ ಇರಲಿದ್ದು, ಒಂದೊಂದು ಥಿಯೇಟರ್​ನಲ್ಲಿ ಒಂದೊಂದು ಕ್ಲೈಮ್ಯಾಕ್ಸ್ ಬಿತ್ತರ ಆಗಲಿದೆ. ಪ್ರೇಕ್ಷಕರಿಗೆ ಬೇರೆ ಬೇರೆಯದೇ ಆದ ಕ್ಲೈಮ್ಯಾಕ್ಸ್ ನೋಡ ಸಿಗಲಿದೆ’ ಎನ್ನುವ ವದಂತಿ ಇತ್ತು. ಇದು ಅಸಾಧ್ಯ ಎಂಬ ಮಾತನ್ನು ಉಪೇಂದ್ರ ಹೇಳಿದ್ದಾರೆ.

‘ಎರಡು ಕ್ಲೈಮ್ಯಾಕ್ಸ್ ಎಂಬ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ. ಸಿನಿಮಾಗೆ ಒಂದೇ ಕ್ಲೈಮ್ಯಾಕ್ಸ್ ಇದೆ. ಕಂಟೆಂಟ್ ಉತ್ತಮವಾಗಿದೆ. ಹೀಗಾಗಿ, ನೀವು ಸಿನಿಮಾನ ಎರಡು ಬಾರಿ ನೋಡಬೇಕು ಎಂದನಿಸುತ್ತದೆ’ ಎಂದು ಉಪೇಂದ್ರ ಹೇಳಿದ್ದಾರೆ. ಉಪ್ಪಿ ಯಾವಾಗಲೂ ಭಿನ್ನ ಸಿನಿಮಾಗಳನ್ನು ಮಾಡುತ್ತಾರೆ. ಈ ಕಾರಣಕ್ಕೆ ಇದು ನಿಜ ಇದ್ದರೂ ಇರಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ.

ಓಪನಿಂಗ್ ದೃಶ್ಯ ಹೇಗಿರುತ್ತದೆ ಎಂಬ ಬಗ್ಗೆಯೂ ಅವರು ಹಿಂಟ್ ಕೊಟ್ಟಿದ್ದಾರೆ. ‘ಓಪನಿಂಗ್ ದೃಶ್ಯವೇ ಪ್ರೇಕ್ಷಕರಿಗೆ ಶಾಕಿಂಗ್ ಆಗಿರಲಿದೆ’ ಎಂದು ಉಪೇಂದ್ರ ಭವಿಷ್ಯ ನುಡಿದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಓಪನಿಂಗ್ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಜೋರಾಗಿದೆ.

ಇದನ್ನೂ ಓದಿ: ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅನ್ನು ಭೇಟಿಯಾದ ನಟ ಉಪೇಂದ್ರ

‘ಯುಐ’ ಸಿನಿಮಾ ಪ್ರಚಾರಕ್ಕಾಗಿ ಉಪೇಂದ್ರ ಅವರು ನಾನಾ ಕಡೆಗಳಿಗೆ ತೆರಳುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಅಲ್ಲಿನವರಿಗೂ ಸಿನಿಮಾ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Wed, 18 December 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು