AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಚಿತ್ರಕ್ಕೆ ಬೇರೆ ಬೇರೆ ಥಿಯೇಟರ್​ನಲ್ಲಿ ಡಿಫರೆಂಟ್ ಕ್ಲೈಮ್ಯಾಕ್ಸ್? ಸ್ಪಷ್ಟನೆ ನೀಡಿದ ಉಪೇಂದ್ರ

ಉಪೇಂದ್ರ ಅವರ ನಟನೆಯ ‘ಯುಐ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಟ್ರೇಲರ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಉಪೇಂದ್ರ ಅವರ ಸಿನಿಮಾದಲ್ಲಿ ಏನೆಲ್ಲ ಇರಬಹುದು ಎಂದು ಊಹಿಸಿಕೊಂಡು ತಲೆಕೆರೆದುಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಚಿತ್ರದ ಬಗ್ಗೆ ವದಂತಿ ಹಬ್ಬಿಸಿದ್ದರು.

‘ಯುಐ’ ಚಿತ್ರಕ್ಕೆ ಬೇರೆ ಬೇರೆ ಥಿಯೇಟರ್​ನಲ್ಲಿ ಡಿಫರೆಂಟ್ ಕ್ಲೈಮ್ಯಾಕ್ಸ್? ಸ್ಪಷ್ಟನೆ ನೀಡಿದ ಉಪೇಂದ್ರ
ಉಪೇಂದ್ರ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Dec 21, 2024 | 7:43 PM

Share

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಈ ವಾರವರೇ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಭಿನ್ನವಾಗಿ ಬರಲಿದೆ ಎಂಬ ಸ್ಪಷ್ಟ ಚಿತ್ರಣ ಅಭಿಮಾನಿಗಳಿಗೆ ಸಿಕ್ಕಿದೆ. ಹೀಗಿರುವಾಗಲೇ ‘ಯುಐ’ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಸಾಕಷ್ಟು ವದಂತಿ ಹಬ್ಬಿತ್ತು. ಇದಕ್ಕೆ ಉಪೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ಇದನ್ನು ಒಪ್ಪಿಕೊಂಡ್ರಾ? ಅಥವಾ ಅಲ್ಲಗಳೆದರಾ ಎಂಬ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಉತ್ತರ ಇದೆ.

ಉಪೇಂದ್ರ ಅವರ ನಟನೆಯ ‘ಯುಐ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಟ್ರೇಲರ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಉಪೇಂದ್ರ ಅವರ ಸಿನಿಮಾದಲ್ಲಿ ಏನೆಲ್ಲ ಇರಬಹುದು ಎಂದು ಊಹಿಸಿಕೊಂಡು ತಲೆಕೆರೆದುಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಚಿತ್ರದ ಬಗ್ಗೆ ವದಂತಿ ಹಬ್ಬಿಸಿದ್ದರು.

‘ಯಐ ಚಿತ್ರಕ್ಕೆ ಎರಡು ಕ್ಲೈಮ್ಯಾಕ್ಸ್ ಇರಲಿದ್ದು, ಒಂದೊಂದು ಥಿಯೇಟರ್​ನಲ್ಲಿ ಒಂದೊಂದು ಕ್ಲೈಮ್ಯಾಕ್ಸ್ ಬಿತ್ತರ ಆಗಲಿದೆ. ಪ್ರೇಕ್ಷಕರಿಗೆ ಬೇರೆ ಬೇರೆಯದೇ ಆದ ಕ್ಲೈಮ್ಯಾಕ್ಸ್ ನೋಡ ಸಿಗಲಿದೆ’ ಎನ್ನುವ ವದಂತಿ ಇತ್ತು. ಇದು ಅಸಾಧ್ಯ ಎಂಬ ಮಾತನ್ನು ಉಪೇಂದ್ರ ಹೇಳಿದ್ದಾರೆ.

‘ಎರಡು ಕ್ಲೈಮ್ಯಾಕ್ಸ್ ಎಂಬ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ. ಸಿನಿಮಾಗೆ ಒಂದೇ ಕ್ಲೈಮ್ಯಾಕ್ಸ್ ಇದೆ. ಕಂಟೆಂಟ್ ಉತ್ತಮವಾಗಿದೆ. ಹೀಗಾಗಿ, ನೀವು ಸಿನಿಮಾನ ಎರಡು ಬಾರಿ ನೋಡಬೇಕು ಎಂದನಿಸುತ್ತದೆ’ ಎಂದು ಉಪೇಂದ್ರ ಹೇಳಿದ್ದಾರೆ. ಉಪ್ಪಿ ಯಾವಾಗಲೂ ಭಿನ್ನ ಸಿನಿಮಾಗಳನ್ನು ಮಾಡುತ್ತಾರೆ. ಈ ಕಾರಣಕ್ಕೆ ಇದು ನಿಜ ಇದ್ದರೂ ಇರಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ.

ಓಪನಿಂಗ್ ದೃಶ್ಯ ಹೇಗಿರುತ್ತದೆ ಎಂಬ ಬಗ್ಗೆಯೂ ಅವರು ಹಿಂಟ್ ಕೊಟ್ಟಿದ್ದಾರೆ. ‘ಓಪನಿಂಗ್ ದೃಶ್ಯವೇ ಪ್ರೇಕ್ಷಕರಿಗೆ ಶಾಕಿಂಗ್ ಆಗಿರಲಿದೆ’ ಎಂದು ಉಪೇಂದ್ರ ಭವಿಷ್ಯ ನುಡಿದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಓಪನಿಂಗ್ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಜೋರಾಗಿದೆ.

ಇದನ್ನೂ ಓದಿ: ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅನ್ನು ಭೇಟಿಯಾದ ನಟ ಉಪೇಂದ್ರ

‘ಯುಐ’ ಸಿನಿಮಾ ಪ್ರಚಾರಕ್ಕಾಗಿ ಉಪೇಂದ್ರ ಅವರು ನಾನಾ ಕಡೆಗಳಿಗೆ ತೆರಳುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಅಲ್ಲಿನವರಿಗೂ ಸಿನಿಮಾ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Wed, 18 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ