AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​

Oorigobba Raaja ಹಾಡಿನಲ್ಲಿ ಪವರ್​ಸ್ಟಾರ್ ಪುನೀತ್​ ರಾಜಕುಮಾರ್​ ಭರ್ಜರಿ ಸ್ಟೆಪ್​ ಹಾಕಿದ್ದರೆ, ನಾಯಕಿ ಸಯೇಷಾ ಸೆಹಗಲ್​ ಕೂಡ ಅಷ್ಟೇ ಮಿಂಚಿದ್ದಾರೆ.

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​
ಊರಿಗೊಬ್ಬ ರಾಜಾ..ಹಾಡಿನ ದೃಶ್ಯ
Lakshmi Hegde
|

Updated on:Feb 25, 2021 | 4:28 PM

Share

ಪವರ್​ಸ್ಟಾರ್ ಪುನೀತ್​ ರಾಜ್​ಕುಮಾರ್​ (Puneeth Rajkumar)​ ಅಭಿನಯದ, ಬಹುನಿರೀಕ್ಷಿತ ಸಿನಿಮಾ ಯುವರತ್ನ (Yuvarathnaa)ದ ‘ಊರಿಗೊಬ್ಬ ರಾಜಾ, ಆ ರಾಜಂಗೊಬ್ಬಳು ರಾಣಿ’ ಹಾಡು ಇಂದು ಬಿಡುಗಡೆಯಾಗಿದೆ. ಹೊಂಬಾಳೆ ಫಿಲ್ಮ್ಸ್​​ನ ಯೂಟ್ಯೂಬ್ ಚಾನೆಲ್​ನಲ್ಲಿ, 3.40 ಸೆಕೆಂಡ್​ಗಳ ಹಾಡು ಬಿಡುಗಡೆಯಾಗಿದ್ದು, ಪವರ್​ ಸ್ಟಾರ್​ ಪುನೀತ್​ ಅವರು ಅಷ್ಟೇ ಪವರ್​ಫುಲ್​ ಆಗಿ ಸ್ಟೆಪ್​ ಹಾಕಿದ್ದಾರೆ. ಊರಿಗೊಬ್ಬ ರಾಜ ಹಾಡಿನ ಸಾಹಿತ್ಯವನ್ನು ಚಿತ್ರ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಅವರೇ ರಚಿಸಿದ್ದು, ತಮನ್.ಎಸ್​ ಸಂಗೀತ ನೀಡಿದ್ದಾರೆ. ರಮ್ಯಾ ಬೆಹರಾ ಜೊತೆಗೆ ಪುನೀತ್​ ರಾಜ್​ಕುಮಾರ್ ಅವರೇ ಧ್ವನಿಯಾಗಿದ್ದು ವಿಶೇಷ.

ಇನ್ನು ಈ ಊರಿಗೊಬ್ಬ ರಾಜ ಹಾಡಿನಲ್ಲಿ ಪುನೀತ್ ರಾಜಕುಮಾರ್ ಜತೆಗೆ ನಾಯಕಿ ಸಯೇಷಾ ಸೆಹಗಲ್​ ಕೂಡ ಅಷ್ಟೇ ಮಸ್ತ್​ ಆಗಿ ಹೆಜ್ಜೆ ಹಾಕಿದ್ದಾರೆ. ಯುವರತ್ನ (Yuvarathnaa) ಏಪ್ರಿಲ್​ 1ರಂದು ಬಿಡುಗಡೆಯಾಗಲಿದ್ದು, ಇಂದು ಕನ್ನಡ ಮತ್ತು ತೆಲುಗಿನಲ್ಲಿ ಊರಿಗೊಬ್ಬ ರಾಜ, ಆ ರಾಜಂಗೊಬ್ಬಳು ರಾಣಿ, ಇಬ್ರೂ ಮದುವೆ ಆದ್ರೆ ಹಾಲು-ಜೇನು ಹಾಡು ರಿಲೀಸ್ ಆಗಿದೆ. ಜಾನಿಯವರ ಕೊರಿಯಾಗ್ರಫಿ ಕರಾಮತ್ತು ಇದರಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಕನ್ನಡದಲ್ಲಿ ಹಾಡು ಬಿಡುಗಡೆಯಾಗಿ ಅರ್ಧಗಂಟೆಯಲ್ಲೇ ಲಕ್ಷಕ್ಕೂ ಅಧಿಕ ವೀವ್ಸ್​ ಕಂಡಿದೆ (37 ನಿಮಿಷದಲ್ಲಿ 141,491 ವೀವ್ಸ್​).  ತೆಲುಗು ಭಾಷೆಯಲ್ಲೂ ಊರಿಕೊಕ್ಕ ರಾಜಾ ಬಿಡುಗಡೆಯಾಗಿದೆ. ಕನ್ನಡ ಹಾಡು ರಿಲೀಸ್ ಆದ ಬಳಿಕ ಬಿಡುಗಡೆಯಾಗಿದ್ದು, ಇದೂ ಕೂಡ 50 ನಿಮಿಷದಲ್ಲಿ 60 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ.

ಇದನ್ನೂ ಓದಿ: ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ ಪ್ರೊಮೊ ರಿಲೀಸ್

Published On - 4:03 pm, Thu, 25 February 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ