AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​

Oorigobba Raaja ಹಾಡಿನಲ್ಲಿ ಪವರ್​ಸ್ಟಾರ್ ಪುನೀತ್​ ರಾಜಕುಮಾರ್​ ಭರ್ಜರಿ ಸ್ಟೆಪ್​ ಹಾಕಿದ್ದರೆ, ನಾಯಕಿ ಸಯೇಷಾ ಸೆಹಗಲ್​ ಕೂಡ ಅಷ್ಟೇ ಮಿಂಚಿದ್ದಾರೆ.

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​
ಊರಿಗೊಬ್ಬ ರಾಜಾ..ಹಾಡಿನ ದೃಶ್ಯ
Lakshmi Hegde
|

Updated on:Feb 25, 2021 | 4:28 PM

Share

ಪವರ್​ಸ್ಟಾರ್ ಪುನೀತ್​ ರಾಜ್​ಕುಮಾರ್​ (Puneeth Rajkumar)​ ಅಭಿನಯದ, ಬಹುನಿರೀಕ್ಷಿತ ಸಿನಿಮಾ ಯುವರತ್ನ (Yuvarathnaa)ದ ‘ಊರಿಗೊಬ್ಬ ರಾಜಾ, ಆ ರಾಜಂಗೊಬ್ಬಳು ರಾಣಿ’ ಹಾಡು ಇಂದು ಬಿಡುಗಡೆಯಾಗಿದೆ. ಹೊಂಬಾಳೆ ಫಿಲ್ಮ್ಸ್​​ನ ಯೂಟ್ಯೂಬ್ ಚಾನೆಲ್​ನಲ್ಲಿ, 3.40 ಸೆಕೆಂಡ್​ಗಳ ಹಾಡು ಬಿಡುಗಡೆಯಾಗಿದ್ದು, ಪವರ್​ ಸ್ಟಾರ್​ ಪುನೀತ್​ ಅವರು ಅಷ್ಟೇ ಪವರ್​ಫುಲ್​ ಆಗಿ ಸ್ಟೆಪ್​ ಹಾಕಿದ್ದಾರೆ. ಊರಿಗೊಬ್ಬ ರಾಜ ಹಾಡಿನ ಸಾಹಿತ್ಯವನ್ನು ಚಿತ್ರ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಅವರೇ ರಚಿಸಿದ್ದು, ತಮನ್.ಎಸ್​ ಸಂಗೀತ ನೀಡಿದ್ದಾರೆ. ರಮ್ಯಾ ಬೆಹರಾ ಜೊತೆಗೆ ಪುನೀತ್​ ರಾಜ್​ಕುಮಾರ್ ಅವರೇ ಧ್ವನಿಯಾಗಿದ್ದು ವಿಶೇಷ.

ಇನ್ನು ಈ ಊರಿಗೊಬ್ಬ ರಾಜ ಹಾಡಿನಲ್ಲಿ ಪುನೀತ್ ರಾಜಕುಮಾರ್ ಜತೆಗೆ ನಾಯಕಿ ಸಯೇಷಾ ಸೆಹಗಲ್​ ಕೂಡ ಅಷ್ಟೇ ಮಸ್ತ್​ ಆಗಿ ಹೆಜ್ಜೆ ಹಾಕಿದ್ದಾರೆ. ಯುವರತ್ನ (Yuvarathnaa) ಏಪ್ರಿಲ್​ 1ರಂದು ಬಿಡುಗಡೆಯಾಗಲಿದ್ದು, ಇಂದು ಕನ್ನಡ ಮತ್ತು ತೆಲುಗಿನಲ್ಲಿ ಊರಿಗೊಬ್ಬ ರಾಜ, ಆ ರಾಜಂಗೊಬ್ಬಳು ರಾಣಿ, ಇಬ್ರೂ ಮದುವೆ ಆದ್ರೆ ಹಾಲು-ಜೇನು ಹಾಡು ರಿಲೀಸ್ ಆಗಿದೆ. ಜಾನಿಯವರ ಕೊರಿಯಾಗ್ರಫಿ ಕರಾಮತ್ತು ಇದರಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಕನ್ನಡದಲ್ಲಿ ಹಾಡು ಬಿಡುಗಡೆಯಾಗಿ ಅರ್ಧಗಂಟೆಯಲ್ಲೇ ಲಕ್ಷಕ್ಕೂ ಅಧಿಕ ವೀವ್ಸ್​ ಕಂಡಿದೆ (37 ನಿಮಿಷದಲ್ಲಿ 141,491 ವೀವ್ಸ್​).  ತೆಲುಗು ಭಾಷೆಯಲ್ಲೂ ಊರಿಕೊಕ್ಕ ರಾಜಾ ಬಿಡುಗಡೆಯಾಗಿದೆ. ಕನ್ನಡ ಹಾಡು ರಿಲೀಸ್ ಆದ ಬಳಿಕ ಬಿಡುಗಡೆಯಾಗಿದ್ದು, ಇದೂ ಕೂಡ 50 ನಿಮಿಷದಲ್ಲಿ 60 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ.

ಇದನ್ನೂ ಓದಿ: ಯುವ ಪೀಳಿಗೆಯನ್ನು ಸೆಳೆಯುವ ಯುವರತ್ನ ಚಿತ್ರದ ‘ಪವರ್ ಆಫ್ ಯೂತ್’ ಹಾಡಿನ ಪ್ರೊಮೊ ರಿಲೀಸ್

Published On - 4:03 pm, Thu, 25 February 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್