AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನ್ನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್​​ಫುಲ್ ಪ್ರದರ್ಶನ ಆಗುತ್ತಾ ಇದೆ ಎಂದರು ರಿಷಬ್​ ಶೆಟ್ಟಿ.

ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ
‘ಗರುಡ ಗಮನ ವೃಷಭ ವಾಹನ’ ಚಿತ್ರದ ಪೋಸ್ಟರ್
TV9 Web
| Edited By: |

Updated on: Nov 27, 2021 | 10:09 PM

Share

‘ಗರುಡ ಗಮನ ವೃಷಭ ವಾಹನ’ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ ರಾಜ್ಯ ಪ್ರವಾಸ ಆರಂಭಿಸಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಜೊತೆ ಕೂಳಿತು ಚಿತ್ರತಂಡ ಸಿನಿಮಾದ ಕ್ಲೈಮ್ಯಾಕ್ಸ್ ವೀಕ್ಷಣೆ ಮಾಡಿದೆ. ಸಿನಿಮಾ ಮುಗಿದ ನಂತರ ನೂರಾರು ಪ್ರೇಕ್ಷಕರು ನಟ ನಿರ್ದೇಶಕ ರಾಜ್ ಬಿ. ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಈ ವೇಳೆ  ಚಿತ್ರತಂಡ ಪರಭಾಷೆಯಿಂದ ಸಿನಿಮಾಗೆ ಬೇಡಿಕೆ ಬರುತ್ತಿರುವ ವಿಚಾರವನ್ನು ಬಹಿರಂಗ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಟ ರಿಷಬ್ ಶೆಟ್ಟಿ, ‘ಎರಡನೇ ವಾರದಲ್ಲಿ ಥಿಯೇಟರ್​ಗಳ ಸಂಖ್ಯೆ ಹೆಚ್ಚುತ್ತಿದೆ. ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ವಿತರಕರು ಚಿತ್ರ ರಿಲೀಸ್ ಮಾಡುತ್ತಿದ್ದಾರೆ. ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್​​ಫುಲ್ ಪ್ರದರ್ಶನ ಆಗುತ್ತಾ ಇದೆ. ಜನ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಭಿನ್ನ ರೀತಿಯ ಚಿತ್ರವನ್ನು ಇಷ್ಟಪಡುತ್ತಾರೆ’ ಎಂಬುದು ಸಾಬೀತಾಗಿದೆ ಎಂದಿದ್ದಾರೆ.

‘ಬೇರೆ ಬೇರೆ ಭಾಷೆಗಳಿಂದ ಡಬ್ಬಿಂಗ್ ರೈಟ್ಸ್​ ಹಾಗೂ ರಿಮೇಕ್​​ಗೆ ಬೇಡಿಕೆ ಬರುತ್ತಿದೆ. ಮುಂದಿನ ವಾರದಲ್ಲಿ ಈ ಬಗ್ಗೆ ಮಾತುಕತೆ ನಡೆಯಲಿದೆ. ನಾವು ಬಹಳಷ್ಟು ಕಷ್ಟಪಟ್ಟು ಚಿತ್ರವನ್ನು ತಯಾರು ಮಾಡಿದ್ದೇವೆ. ಕೆಲ ವ್ಯಕ್ತಿಗಳು ಮೊಬೈಲ್​​ನಲ್ಲಿ ಶೂಟಿಂಗ್ ಮಾಡಿ ಪೈರಸಿ ಮಾಡಿ ಮಾಡಿಬಿಟ್ಟಿದ್ದಾರೆ. ಚಿತ್ರ ಬಿಡುಗಡೆಗೆ ಮುನ್ನವೇ ನಾವು ಕಾನೂನು ರೀತಿಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಪೈರಸಿ ಚಿತ್ರಗಳನ್ನು ನೋಡಬೇಡಿ. ಥಿಯೇಟರ್​​ಗೆ ಬಂದು ಶ್ರಮಕ್ಕೆ ಬೆಂಬಲ ಕೊಡಿ’ ಎಂದು ರಾಜ್ ಬಿ. ಶೆಟ್ಟಿ ಮನವಿ ಮಾಡಿದರು.

‘ಮುಂದಿನ ಪ್ರಾಜೆಕ್ಟ್ ಬಗ್ಗೆ ಸದ್ಯ ಯಾವುದೇ ಯೋಚನೆ ಇಲ್ಲ. ತಿರುಗಾಟ ಮುಗಿಸಿ 15 ದಿನ ರಿಲೀಫ್ ಮಾಡಿಕೊಳ್ಳಬೇಕಾಗಿದೆ. ಮಂಗಳೂರಿನಲ್ಲಿ ಗೆಳೆಯರ ಜೊತೆ ವಾಲಿಬಾಲ್ ಆಡುತ್ತೇನೆ’ ಎಂದು ರಾಜ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ‘ಪುನೀತ್‌ ರಾಜ್​​ಕುಮಾರ್‌ ಇಲ್ಲ ಅನ್ನೋದನ್ನ ನನಗೆ ನಂಬೋಕೆ ಆಗ್ತಿಲ್ಲ’: ರಿಷಬ್​ ಶೆಟ್ಟಿ

‘ರಿಷಬ್​ಗೆ ಹೀರೋಯಿನ್​ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್​ ಬಿ. ಶೆಟ್ಟಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ