AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನ್ನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್​​ಫುಲ್ ಪ್ರದರ್ಶನ ಆಗುತ್ತಾ ಇದೆ ಎಂದರು ರಿಷಬ್​ ಶೆಟ್ಟಿ.

ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ
‘ಗರುಡ ಗಮನ ವೃಷಭ ವಾಹನ’ ಚಿತ್ರದ ಪೋಸ್ಟರ್
TV9 Web
| Edited By: |

Updated on: Nov 27, 2021 | 10:09 PM

Share

‘ಗರುಡ ಗಮನ ವೃಷಭ ವಾಹನ’ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ ರಾಜ್ಯ ಪ್ರವಾಸ ಆರಂಭಿಸಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಜೊತೆ ಕೂಳಿತು ಚಿತ್ರತಂಡ ಸಿನಿಮಾದ ಕ್ಲೈಮ್ಯಾಕ್ಸ್ ವೀಕ್ಷಣೆ ಮಾಡಿದೆ. ಸಿನಿಮಾ ಮುಗಿದ ನಂತರ ನೂರಾರು ಪ್ರೇಕ್ಷಕರು ನಟ ನಿರ್ದೇಶಕ ರಾಜ್ ಬಿ. ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಈ ವೇಳೆ  ಚಿತ್ರತಂಡ ಪರಭಾಷೆಯಿಂದ ಸಿನಿಮಾಗೆ ಬೇಡಿಕೆ ಬರುತ್ತಿರುವ ವಿಚಾರವನ್ನು ಬಹಿರಂಗ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಟ ರಿಷಬ್ ಶೆಟ್ಟಿ, ‘ಎರಡನೇ ವಾರದಲ್ಲಿ ಥಿಯೇಟರ್​ಗಳ ಸಂಖ್ಯೆ ಹೆಚ್ಚುತ್ತಿದೆ. ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ವಿತರಕರು ಚಿತ್ರ ರಿಲೀಸ್ ಮಾಡುತ್ತಿದ್ದಾರೆ. ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್​​ಫುಲ್ ಪ್ರದರ್ಶನ ಆಗುತ್ತಾ ಇದೆ. ಜನ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಭಿನ್ನ ರೀತಿಯ ಚಿತ್ರವನ್ನು ಇಷ್ಟಪಡುತ್ತಾರೆ’ ಎಂಬುದು ಸಾಬೀತಾಗಿದೆ ಎಂದಿದ್ದಾರೆ.

‘ಬೇರೆ ಬೇರೆ ಭಾಷೆಗಳಿಂದ ಡಬ್ಬಿಂಗ್ ರೈಟ್ಸ್​ ಹಾಗೂ ರಿಮೇಕ್​​ಗೆ ಬೇಡಿಕೆ ಬರುತ್ತಿದೆ. ಮುಂದಿನ ವಾರದಲ್ಲಿ ಈ ಬಗ್ಗೆ ಮಾತುಕತೆ ನಡೆಯಲಿದೆ. ನಾವು ಬಹಳಷ್ಟು ಕಷ್ಟಪಟ್ಟು ಚಿತ್ರವನ್ನು ತಯಾರು ಮಾಡಿದ್ದೇವೆ. ಕೆಲ ವ್ಯಕ್ತಿಗಳು ಮೊಬೈಲ್​​ನಲ್ಲಿ ಶೂಟಿಂಗ್ ಮಾಡಿ ಪೈರಸಿ ಮಾಡಿ ಮಾಡಿಬಿಟ್ಟಿದ್ದಾರೆ. ಚಿತ್ರ ಬಿಡುಗಡೆಗೆ ಮುನ್ನವೇ ನಾವು ಕಾನೂನು ರೀತಿಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಪೈರಸಿ ಚಿತ್ರಗಳನ್ನು ನೋಡಬೇಡಿ. ಥಿಯೇಟರ್​​ಗೆ ಬಂದು ಶ್ರಮಕ್ಕೆ ಬೆಂಬಲ ಕೊಡಿ’ ಎಂದು ರಾಜ್ ಬಿ. ಶೆಟ್ಟಿ ಮನವಿ ಮಾಡಿದರು.

‘ಮುಂದಿನ ಪ್ರಾಜೆಕ್ಟ್ ಬಗ್ಗೆ ಸದ್ಯ ಯಾವುದೇ ಯೋಚನೆ ಇಲ್ಲ. ತಿರುಗಾಟ ಮುಗಿಸಿ 15 ದಿನ ರಿಲೀಫ್ ಮಾಡಿಕೊಳ್ಳಬೇಕಾಗಿದೆ. ಮಂಗಳೂರಿನಲ್ಲಿ ಗೆಳೆಯರ ಜೊತೆ ವಾಲಿಬಾಲ್ ಆಡುತ್ತೇನೆ’ ಎಂದು ರಾಜ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ‘ಪುನೀತ್‌ ರಾಜ್​​ಕುಮಾರ್‌ ಇಲ್ಲ ಅನ್ನೋದನ್ನ ನನಗೆ ನಂಬೋಕೆ ಆಗ್ತಿಲ್ಲ’: ರಿಷಬ್​ ಶೆಟ್ಟಿ

‘ರಿಷಬ್​ಗೆ ಹೀರೋಯಿನ್​ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್​ ಬಿ. ಶೆಟ್ಟಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ