AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ 2ಗೆ ಬಂತು 255 ಕೋಟಿ ಆಫರ್​?  ದಯವಿಟ್ಟು ಒಪ್ಪಬೇಡಿ ಎಂದ ಫ್ಯಾನ್ಸ್​

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೆಜಿಎಫ್​ 2’ ರಿಲೀಸ್​ ಆಗಿ ವರ್ಷವೇ ಕಳೆದಿರುತ್ತಿತ್ತು. ಆದರೆ, ಕೊವಿಡ್ ಮೊದಲ ಅಲೆ ಕಾಣಿಸಿಕೊಂಡ ಕಾರಣ ಹಲವು ತಿಂಗಳ ಕಾಲ ಚಿತ್ರದ ಕೆಲಸಗಳು ನಿಂತವು.

ಕೆಜಿಎಫ್​ 2ಗೆ ಬಂತು 255 ಕೋಟಿ ಆಫರ್​?  ದಯವಿಟ್ಟು ಒಪ್ಪಬೇಡಿ ಎಂದ ಫ್ಯಾನ್ಸ್​
ನಟ ಯಶ್
TV9 Web
| Edited By: |

Updated on: Aug 12, 2021 | 7:46 PM

Share

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಒಟಿಟಿ ವ್ಯಾಪ್ತಿ ವಿಸ್ತರಣೆ ಆಗಿದೆ. ಅನೇಕ ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್​ ಆಗುತ್ತಿವೆ. ಚಿತ್ರಮಂದಿರಗಳಿಗೆ ಅನಿಶ್ಚಿತತೆ ಕಾಡುತ್ತಿರುವುದರಿಂದ ಸ್ಟಾರ್​ ನಟರ ಚಿತ್ರಗಳೂ ಒಟಿಟಿಯತ್ತ ಮುಖ ಮಾಡುತ್ತಿವೆ. ಯಶ್​ ನಟನೆಯ ಕೆಜಿಎಫ್​ 2 ಚಿತ್ರಕ್ಕೂ ಕೊರೊನಾ ವೈರಸ್​ ಎರಡನೇ ಅಲೆಯ ಕಾಟ ತಟ್ಟಿದ್ದು, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇದರ ಲಾಭ ಪಡೆಯೋಕೆ ಒಟಿಟಿಯವರು ಪ್ರಯತ್ನಿಸಿದ್ದಾರೆ. ಅಲ್ಲದೆ, ಕೆಜಿಎಫ್​ ನಿರ್ಮಾಪಕರಿಗೆ ದೊಡ್ಡ ಮೊತ್ತದ ಆಫರ್​ ಕೂಡ ನೀಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೆಜಿಎಫ್​ 2’ ರಿಲೀಸ್​ ಆಗಿ ವರ್ಷವೇ ಕಳೆದಿರುತ್ತಿತ್ತು. ಆದರೆ, ಕೊವಿಡ್ ಮೊದಲ ಅಲೆ ಕಾಣಿಸಿಕೊಂಡ ಕಾರಣ ಹಲವು ತಿಂಗಳ ಕಾಲ ಚಿತ್ರದ ಕೆಲಸಗಳು ನಿಂತವು. ಎಲ್ಲವೂ ಸರಿ ಆಯಿತು ಎನ್ನುವಾಗಲೇ ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿತ್ತು. ಈ ಎಲ್ಲಾ ಕಾರಣದಿಂದ ‘ಕೆಜಿಎಫ್​ 2’ ಕೆಲಸಗಳು ನಿಧಾನವಾದವು. ಜುಲೈ ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡಲು ಚಿತ್ರತಂಡ ನಿರ್ಧರಿಸಿತ್ತಾದರೂ ಅದು ಸಾಧ್ಯವಾಗಿಲ್ಲ. ಹೊಸ ರಿಲೀಸ್​ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.

ಈಗ ‘ಕೆಜಿಎಫ್​ 2’ಗೆ ಒಟಿಟಿ ಅವರು ನೀಡಿದ ಆಫರ್​ ಬಗ್ಗೆ ಹೊಸ ವಿಚಾರವೊಂದು ಕೇಳಿ ಬಂದಿದೆ. ಚಿತ್ರಮಂದಿರಗಳಲ್ಲಿ ‘ಕೆಜಿಎಫ್​ 2’ ರಿಲೀಸ್​ ಮಾಡದೇ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಮಾಡಿದರೆ 255 ಕೋಟಿ ಕೊಡುವುದಾಗಿ ಒಟಿಟಿ ಪ್ಲಾಟ್​ಫಾರ್ಮ್​ ಒಂದು ಬೇಡಿಕೆ ಇಟ್ಟಿದೆ ಎನ್ನಲಾಗಿದೆ.

ಆದರೆ, ಇದನ್ನು ಚಿತ್ರತಂಡ ಒಪ್ಪಿಕೊಳ್ಳೋ ಸಾಧ್ಯತೆ ತುಂಬಾನೆ ಕಡಿಮೆ. ಇದಕ್ಕೆ ಹಲವು ಕಾರಣಗಳಿವೆ. ಕೆಜಿಎಫ್​ 2 ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಒಂದೊಮ್ಮೆ ಈ ಚಿತ್ರ ಚಿತ್ರಮಂದಿರಗಳಲ್ಲಿ ರಿಲೀಸ್​ ಆದರೆ ಐದು ಭಾಷೆಗಳಿಂದ ಆಗುವ ಗಳಿಕೆ 255 ಕೋಟಿ ರೂಪಾಯಿಯನ್ನು ಸುಲಭವಾಗಿ ದಾಟುತ್ತದೆ. ಇನ್ನು, ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್​ ಆದರೆ, ಅಭಿಮಾನಿಗಳ ಪಾಲಿಗೆ ಅದು ಹಬ್ಬವೇ ಸರಿ. ಈ ಎಲ್ಲಾ ಕಾರಣಕ್ಕೆ ಸಿನಿಮಾ ತಂಡದವರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡೋ ಸಾಧ್ಯತೆ ಕಡಿಮೆ ಎನ್ನಬಹುದು.  ಅಭಿಮಾನಿಗಳು ಕೂಡ ಈ ಆಫರ್​ ಒಪ್ಪಬೇಡಿ ಎಂದಿದ್ದಾರೆ.

ಇದನ್ನೂ ಓದಿ: ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?