AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paatashaala Song: ‘ಪಾಠಶಾಲಾ’ ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ ‘ಯುವರತ್ನ’ ಹೊಸ ಗೀತೆ?

Yuvarathanaa : ಪುನೀತ್​ ರಾಜ್​ಕುಮಾರ್​ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಹೈಪ್​ ಸೃಷ್ಟಿಸಲಾಗುತ್ತಿದೆ. ಚಿತ್ರದ ಮೂರನೇ ಹಾಡು 'ಪಾಠಶಾಲಾ' ಈಗ ರಿಲೀಸ್​ ಆಗಿದೆ.

Paatashaala Song: 'ಪಾಠಶಾಲಾ' ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ 'ಯುವರತ್ನ' ಹೊಸ ಗೀತೆ?
ಪಾಠಶಾಲಾ ಲಿರಿಕಲ್​ ವಿಡಿಯೋ ಪೋಸ್ಟರ್​
Digi Tech Desk
| Edited By: |

Updated on:Mar 03, 2021 | 4:09 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಯುವರತ್ನ’ ಚಿತ್ರ ಕೂಡ ಇದೆ. ಪುನೀತ್ ರಾಜ್​ಕುಮಾರ್​ ನಟನೆಯ ಈ ಚಿತ್ರದ ಹಾಡುಗಳಿಗೆ ಥಮನ್​ ಎಸ್​. ಸಂಗೀತ ಸಂಯೋಜಿಸಿದ್ದು, ಮೂರನೇ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಪಾಠಶಾಲಾ’ ಎಂಬ ಈ ಹಾಡಿನ ಮೇಲೆ ಅಭಿಮಾನಿಗಳಿಗೆ ಭಾರಿ ಕಾತರವಿತ್ತು. ಮಾ.3ರ ಮಧ್ಯಾಹ್ನ 3.30ಕ್ಕೆ ರಿಲೀಸ್​ ಆಗಿರುವ ಈ ಗೀತೆ ಕೇಳಿ ಫ್ಯಾನ್ಸ್​ ತಲೆದೂಗುತ್ತಿದ್ದಾರೆ.

ಸಂತೋಷ್​ ಆನಂದ್​ರಾಮ್​ ಬರೆದ ಹಾಡಿಗೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ‘ಪಾಠಶಾಲಾ’ ಎಂಬ ಪದವೇ ಸೂಚಿಸುತ್ತಿರುವಂತೆ ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಲೆ, ಕಾಲೇಜು ಮತ್ತು ಪಾಠ ಕಲಿಸಿದ ಶಿಕ್ಷಕರ ಕುರಿತಾಗಿ ಹಾಡಿನಲ್ಲಿ ವಿವರಿಸಲಾಗಿದೆ. ಶಿಕ್ಷಣದ ಮಹತ್ವವನ್ನು ಚೆಂದದ ಸಾಹಿತ್ಯದ ಮೂಲಕ ಸಾರಿ ಹೇಳಿದ್ದಾರೆ ಸಂತೋಷ್​ ಆನಂದ್​ರಾಮ್​. ಹಾಡನ್ನು ಮೆಚ್ಚಿದ ಸಿನಿಪ್ರಿಯರಿಂದ ಪಾಸಿಟಿವ್​ ಕಾಮೆಂಟ್​ಗಳು ಬರುತ್ತಿವೆ.

ಪಾಠಶಾಲಾ ಕನ್ನಡ ಲಿರಿಕಲ್​ ವಿಡಿಯೋ

ಸಂತೋಷ್​ ಆನಂದ್​ರಾಮ್​ ನಿರ್ದೇಶನದಲ್ಲಿ ಮೂಡಿಬಂದಿರುವ ‘ಯುವರತ್ನ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಕಾಲೇಜು ವಿದ್ಯಾರ್ಥಿಯ ಪಾತ್ರ ಮಾಡಿದ್ದಾರೆ. ಹಲವು ವರ್ಷಗಳ ಬಳಿಕ ಅವರು ಈ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಈಗ ‘ಪಾಠಶಾಲಾ’ ಲಿರಿಕಲ್​ ವಿಡಿಯೋ ಬಿಡುಗಡೆ ಆಗಿದೆ. ಕನ್ನಡದ ಜೊತೆಗೆ ತೆಲುಗು ವರ್ಷನ್​ ಕೂಡ ರಿಲೀಸ್​ ಆಗಿದೆ.

ಪಾಠಶಾಲಾ ತೆಲುಗು ಲಿರಿಕಲ್ ವಿಡಿಯೋ

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ಆಗಿದ್ದರೆ 10 ದಿನಗಳ ಹಿಂದೆಯೇ ಈ ಸಾಂಗ್​ ಬಿಡುಗಡೆ ಆಗಿರಬೇಕಿತ್ತು. ಫೆ.21ರಂದು ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ತಾಂತ್ರಿಕ ಅಡಚಣೆಯಿಂದಾಗಿ ಅಂದು ರಿಲೀಸ್​ ಮಾಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಪುನೀತ್​ ರಾಜ್​ಕುಮಾರ್​, ಸಂತೋಷ್​ ಆನಂದ್​ರಾಮ್​, ಥಮನ್​ ಎಸ್​. ಸೇರಿದಂತೆ ಇಡೀ ಚಿತ್ರತಂಡವು ಅಭಿಮಾನಿಗಳಲ್ಲಿ ಕ್ಷಮೆ ಕೇಳಿತ್ತು. ಈಗ ಹಾಡು ರಿಲೀಸ್​ ಆಗಿದ್ದು, ಅಪ್ಪು ಅಭಿಮಾನಿಗಳ ಮೆಚ್ಚುಗೆ ಗಳಿಸುತ್ತಿದೆ.

ಇದನ್ನೂ ಓದಿ: Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Published On - 3:56 pm, Wed, 3 March 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್