AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paatashaala Song: ‘ಪಾಠಶಾಲಾ’ ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ ‘ಯುವರತ್ನ’ ಹೊಸ ಗೀತೆ?

Yuvarathanaa : ಪುನೀತ್​ ರಾಜ್​ಕುಮಾರ್​ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಹೈಪ್​ ಸೃಷ್ಟಿಸಲಾಗುತ್ತಿದೆ. ಚಿತ್ರದ ಮೂರನೇ ಹಾಡು 'ಪಾಠಶಾಲಾ' ಈಗ ರಿಲೀಸ್​ ಆಗಿದೆ.

Paatashaala Song: 'ಪಾಠಶಾಲಾ' ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ 'ಯುವರತ್ನ' ಹೊಸ ಗೀತೆ?
ಪಾಠಶಾಲಾ ಲಿರಿಕಲ್​ ವಿಡಿಯೋ ಪೋಸ್ಟರ್​
Digi Tech Desk
| Edited By: |

Updated on:Mar 03, 2021 | 4:09 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಯುವರತ್ನ’ ಚಿತ್ರ ಕೂಡ ಇದೆ. ಪುನೀತ್ ರಾಜ್​ಕುಮಾರ್​ ನಟನೆಯ ಈ ಚಿತ್ರದ ಹಾಡುಗಳಿಗೆ ಥಮನ್​ ಎಸ್​. ಸಂಗೀತ ಸಂಯೋಜಿಸಿದ್ದು, ಮೂರನೇ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಪಾಠಶಾಲಾ’ ಎಂಬ ಈ ಹಾಡಿನ ಮೇಲೆ ಅಭಿಮಾನಿಗಳಿಗೆ ಭಾರಿ ಕಾತರವಿತ್ತು. ಮಾ.3ರ ಮಧ್ಯಾಹ್ನ 3.30ಕ್ಕೆ ರಿಲೀಸ್​ ಆಗಿರುವ ಈ ಗೀತೆ ಕೇಳಿ ಫ್ಯಾನ್ಸ್​ ತಲೆದೂಗುತ್ತಿದ್ದಾರೆ.

ಸಂತೋಷ್​ ಆನಂದ್​ರಾಮ್​ ಬರೆದ ಹಾಡಿಗೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ‘ಪಾಠಶಾಲಾ’ ಎಂಬ ಪದವೇ ಸೂಚಿಸುತ್ತಿರುವಂತೆ ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಲೆ, ಕಾಲೇಜು ಮತ್ತು ಪಾಠ ಕಲಿಸಿದ ಶಿಕ್ಷಕರ ಕುರಿತಾಗಿ ಹಾಡಿನಲ್ಲಿ ವಿವರಿಸಲಾಗಿದೆ. ಶಿಕ್ಷಣದ ಮಹತ್ವವನ್ನು ಚೆಂದದ ಸಾಹಿತ್ಯದ ಮೂಲಕ ಸಾರಿ ಹೇಳಿದ್ದಾರೆ ಸಂತೋಷ್​ ಆನಂದ್​ರಾಮ್​. ಹಾಡನ್ನು ಮೆಚ್ಚಿದ ಸಿನಿಪ್ರಿಯರಿಂದ ಪಾಸಿಟಿವ್​ ಕಾಮೆಂಟ್​ಗಳು ಬರುತ್ತಿವೆ.

ಪಾಠಶಾಲಾ ಕನ್ನಡ ಲಿರಿಕಲ್​ ವಿಡಿಯೋ

ಸಂತೋಷ್​ ಆನಂದ್​ರಾಮ್​ ನಿರ್ದೇಶನದಲ್ಲಿ ಮೂಡಿಬಂದಿರುವ ‘ಯುವರತ್ನ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಕಾಲೇಜು ವಿದ್ಯಾರ್ಥಿಯ ಪಾತ್ರ ಮಾಡಿದ್ದಾರೆ. ಹಲವು ವರ್ಷಗಳ ಬಳಿಕ ಅವರು ಈ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಈಗ ‘ಪಾಠಶಾಲಾ’ ಲಿರಿಕಲ್​ ವಿಡಿಯೋ ಬಿಡುಗಡೆ ಆಗಿದೆ. ಕನ್ನಡದ ಜೊತೆಗೆ ತೆಲುಗು ವರ್ಷನ್​ ಕೂಡ ರಿಲೀಸ್​ ಆಗಿದೆ.

ಪಾಠಶಾಲಾ ತೆಲುಗು ಲಿರಿಕಲ್ ವಿಡಿಯೋ

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ಆಗಿದ್ದರೆ 10 ದಿನಗಳ ಹಿಂದೆಯೇ ಈ ಸಾಂಗ್​ ಬಿಡುಗಡೆ ಆಗಿರಬೇಕಿತ್ತು. ಫೆ.21ರಂದು ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ತಾಂತ್ರಿಕ ಅಡಚಣೆಯಿಂದಾಗಿ ಅಂದು ರಿಲೀಸ್​ ಮಾಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಪುನೀತ್​ ರಾಜ್​ಕುಮಾರ್​, ಸಂತೋಷ್​ ಆನಂದ್​ರಾಮ್​, ಥಮನ್​ ಎಸ್​. ಸೇರಿದಂತೆ ಇಡೀ ಚಿತ್ರತಂಡವು ಅಭಿಮಾನಿಗಳಲ್ಲಿ ಕ್ಷಮೆ ಕೇಳಿತ್ತು. ಈಗ ಹಾಡು ರಿಲೀಸ್​ ಆಗಿದ್ದು, ಅಪ್ಪು ಅಭಿಮಾನಿಗಳ ಮೆಚ್ಚುಗೆ ಗಳಿಸುತ್ತಿದೆ.

ಇದನ್ನೂ ಓದಿ: Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Published On - 3:56 pm, Wed, 3 March 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್