AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಸದಾ ಪ್ಲೇ ಆಗುತ್ತೆ ಪುನೀತ್ ಸಾಂಗ್

ಪಾಕಿಸ್ತಾನದ ಕ್ಯಾಬ್ ಡ್ರೈವರ್ ಒಬ್ಬರು ಪುನೀತ್ ರಾಜ್ ಕುಮಾರ್ ಅವರ ಹಾಡುಗಳನ್ನು ತುಂಬಾ ಇಷ್ಟಪಡುತ್ತಾರಂತೆ. ಕರ್ನಾಟಕ ಮೂಲದ ದುಬೈ ನಿವಾಸಿ ಈ ವಿಚಾರ ತಿಳಿಸಿದ್ದಾರೆ. ಭಾರತ-ಪಾಕಿಸ್ತಾನದ ಉದ್ವಿಗ್ನತೆಯ ನಡುವೆಯೂ ಸಂಗೀತದ ಅಭಿಮಾನವು ಗಡಿಗಳನ್ನು ದಾಟಿದೆ ಎಂಬುದಕ್ಕೆ ಇದು ಒಳ್ಳೆಯ ಉದಾಹರಣೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಸದಾ ಪ್ಲೇ ಆಗುತ್ತೆ ಪುನೀತ್ ಸಾಂಗ್
ಪುನೀತ್
ರಾಜೇಶ್ ದುಗ್ಗುಮನೆ
|

Updated on:Jun 26, 2025 | 7:08 AM

Share

ಇತ್ತೀಚೆಗೆ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯಾವುದೂ ಸರಿ ಇಲ್ಲ. ಎರಡೂ ದೇಶಗಳ ಮಧ್ಯೆ ಯುದ್ಧ ಭಿತಿ ಕೂಡ ಶುರುವಾಗಿತ್ತು. ಈ ಕಾರಣದಿಂದಲೇ ಪಾಕಿಸ್ತಾನದ ಕಲಾವಿದರನ್ನು ಹಾಗೂ ಅಲ್ಲಿನ ಸಿನಿಮಾಗಳನ್ನು ಭಾರತದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಪಾಕಿಸ್ತಾನದವರ ಸೋಶಿಯಲ್ ಮೀಡಿಯಾ ಖಾತೆಯನ್ನು ಭಾರತದಲ್ಲಿ ಆ್ಯಕ್ಸೆಸ್ ಮಾಡಲು ಸಾಧ್ಯವಿಲ್ಲ. ಆದರೆ, ಅಭಿಮಾನಿವನ್ನು ಎಂದಾದರೂ ತಡೆಯಲು ಸಾಧ್ಯವೇ? ಇದಕ್ಕೆ ಪಾಕಿಸ್ತಾನದ ಈ ಕ್ಯಾಬ್ ಡ್ರೈವರ್ ಒಳ್ಳೆಯ ಉದಾಹರಣೆ. ಇವರ ಕಾರಿನಲ್ಲಿ ಪುನೀತ್ (Puneeth Rajkumar) ಹಾಡುಗಳು ಪ್ಲೇ ಆಗುತ್ತವೆ. ಈ ವಿಚಾರವನ್ನು ಕನ್ನಡದವರೊಬ್ಬರು ರಿವೀಲ್ ಮಾಡಿದ್ದಾರೆ.

ಪ್ರಿಯಾಂಕಾ ಎಂಬುವವರು ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಕರ್ನಾಟಕದವರಾಗಿದ್ದು, ದುಬೈನಲ್ಲಿ ವಾಸವಾಗಿದ್ದಾರೆ. ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಒಂದು ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದಾರೆ. ಅವರು ಕ್ಯಾಬ್ ಏರುತ್ತಿದ್ದಂತೆ ಆ ವ್ಯಕ್ತಿ ನೀವು ಯಾವ ಊರಿನವರು ಎಂದು ಕೇಳಿದರಂತೆ. ಅದಕ್ಕೆ ಇವರು ಕರ್ನಾಟಕ, ಭಾರತ ಎಂದಿದ್ದಾರೆ. ಆ ಕ್ಷಣಕ್ಕೆ ಡ್ರೈವರ್ ಬಾಯಿಂದ ಬಂದಿದ್ದು ‘ಪುನೀತ್ ರಾಜ್​ಕುಮಾರ್’  ಹೆಸರು.

ಇದನ್ನೂ ಓದಿ
Image
‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್
Image
‘ಆನಂದ್’ ಸಿನಿಮಾದ ಸಾಂಗ್ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ
Image
‘ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಮಾತು
Image
ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಖಡಕ್ ಟೈಟಲ್

‘ಈ ವ್ಯಕ್ತಿ ಪಾಕಿಸ್ತಾನದವರು. ಆದರೆ, ಇವರಿಗೆ ಕನ್ನಡ ಹಾಡು ಅದರಲ್ಲೂ ಪುನೀತ್ ರಾಜ್​ಕುಮಾರ್ ಹಾಡನ್ನು ಅವರು ಸಾಕಷ್ಟು ಇಷ್ಟಪಡುತ್ತಾರೆ’ ಎಂದರು ಪ್ರಿಯಾಂಕಾ. ಇದಕ್ಕೆ ಕ್ಯಾಬ್ ಡ್ರೈವರ್, ‘ನನಗೆ ಈ ಸಾಂಗ್ ತುಂಬಾನೇ ಇಷ್ಟ. ಪುನೀತ್ ಸಿನಿಮಾದ ಹಾಡು ನನಗೆ ಇಷ್ಟ’ ಎಂದು ಅವರು ಹೇಳಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

‘ಸೂರ್ಯ ಚಂದ್ರ ಇರೋವರೆಗೂ ಅಪ್ಪು ಬಾಸ್ ಅಮರ’ ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರೀತಿಗೆ ಗಡಿ ಇಲ್ಲ’ ಎಂದಿದ್ದಾರೆ. ಇನ್ನೂ ಕೆಲವರು ಪುನೀತ್ ಅವರನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಪುನೀತ್ ರಾಜ್​ಕುಮಾರ್ ಕನ್ನಡ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅವರು ನಮ್ಮನ್ನು ಅಗಲಿದರೂ ಅವರನ್ನು ನೆನಪು ಮಾಡಿಕೊಳ್ಳುವ ಕೆಲಸ ಈಗಲೂ ಆಗುತ್ತಿದೆ. ಪುನೀತ್ ಹೆಸರಲ್ಲಿ ರಸ್ತೆಗಳು ನಿರ್ಮಾಣ ಆಗಿವೆ. ಪಾರ್ಕ್​ಗಳಿಗೆ ಪುನೀತ್ ಹೆಸರನ್ನು ಕೂಡ ಇಡಲಾಗಿದೆ.

ಇದನ್ನೂ ಓದಿ: ‘ಅವನಿರಬೇಕಿತ್ತು’ ಸಿನಿಮಾ ಟ್ರೇಲರ್ ನೋಡಿ ಮೆಚ್ಚಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಪುನೀತ್ ರಾಜ್​ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರು ಇಲ್ಲ ಎಂಬ ನೋವನ್ನು ಈಗಲೂ ಅಭಿಮಾನಿಗಳ ಬಳಿ ಮರೆಯಲು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:07 am, Thu, 26 June 25

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು