AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ

ಪಂಕಜ್ ಅವರು ನಟನೆ ಕಲಿತಿದ್ದು ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ದಲ್ಲಿ. ಅವರು ಇದರಲ್ಲಿ ನಟನಾ ಶಿಕ್ಷಣ ಪಡೆಯುತ್ತಿರುವಾಗಲ ಕೆಲವು ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡಿದ್ದರು. ಅದರಲ್ಲಿ ‘ಚಿಗುರಿದ ಕನಸು’ ಕೂಡ ಒಂದು. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಗೆಳೆಯನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ
ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 05, 2024 | 7:53 AM

Share

ಪಂಕಜ್ ತ್ರಿಪಾಠಿಗೆ ಇಂದು (ಸೆಪ್ಟೆಂಬರ್ 5) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಇಂದು ಸ್ಟಾರ್ ಹೀರೋ ಆಗಿದ್ದಾರೆ. ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ಮಾತ್ರವಲ್ಲ ವೆಬ್​ ಸೀರಿಸ್​ನಲ್ಲೂ ಅವರು ನಟಿಸಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ಕನ್ನಡದ್ದು ಅನ್ನೋದು ಗೊತ್ತಾ? ಆ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಿದ್ದೇವೆ. ಕನ್ನಡದಲ್ಲಿ ಅವರು ಶಿವರಾಜ್​ಕುಮಾರ್ ಜೊತೆ ತೆರೆ ಹಂಚಿಕೊಂಡಿದ್ದರು.

ಪಂಕಜ್ ಅವರು ನಟನೆ ಕಲಿತಿದ್ದು ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ದಲ್ಲಿ. ಅವರು ಇದರಲ್ಲಿ ನಟನಾ ಶಿಕ್ಷಣ ಪಡೆಯುತ್ತಿರುವಾಗಲ ಕೆಲವು ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡಿದ್ದರು. ಅದರಲ್ಲಿ ‘ಚಿಗುರಿದ ಕನಸು’ ಕೂಡ ಒಂದು. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಗೆಳೆಯನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಆ ಬಗ್ಗೆ ನಾವು ಹೇಳುತ್ತೇವೆ.

‘ಚಿಗುರಿದ ಕನಸು’ ಚಿತ್ರದಲ್ಲಿ ಶಿವರಾಜ್​ಕುಮಾರ್ ಶಂಕರ್ ಹೆಸರಿನ ಪಾತ್ರ ಮಾಡಿದ್ದರು. ಶಂಕರ್ ಹುಟ್ಟಿ ಬೆಳೆದಿದ್ದು ದೆಹಲಿಯಲ್ಲಿ. ಆರಂಭದಲ್ಲಿ ದೆಹಲಿಯಲ್ಲೇ ಕಥೆ ಸಾಗುತ್ತದೆ. ಈ ಕಾರಣಕ್ಕೆ ಶಂಕರ್ ಕಾಲೇಜು ದಿನಗಳಲ್ಲಿ ಆತನ ಸುತ್ತ ಮುತ್ತ ಇರೋದೆಲ್ಲ ಹಿಂದಿ ಮಂದಿಯೇ. ಶಂಕರ್ ಗೆಳೆಯನ ಪಾತ್ರದಲ್ಲಿ ಪಂಕಜ್ ತ್ರಿಪಾಠಿ ಕಾಣಿಸಿಕೊಂಡಿದ್ದರು. ಅವರ ಪಾತ್ರದ ಹೆಸರೂ ಪಂಕಜ್ ಎಂದೇ ಇದೆ. ಶಿವಣ್ಣನ ಕಾಲೇಜು ದಿನಗಳನ್ನು ತೋರಿಸುವಾಗ ಪಂಕಜ್ ಜೊತೆಗೆ ಇದ್ದರು. ಈ ರೀತಿಯಲ್ಲಿ ಅವರ ಬಣ್ಣದ ಬದುಕು ಆರಂಭ ಆಯಿತು.

ಪಂಕಜ್ ತ್ರಿಪಾಠಿ ಅವರು ಖ್ಯಾತ ಹೀರೋ ಎನಿಸಿಕೊಂಡಿದ್ದಾರೆ. ಆಗ ಅವರಿನ್ನೂ ಬಣ್ಣದ ಲೋಕದಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಅವರು ಇಷ್ಟು ದೊಡ್ಡ ಮಟ್ಟದ ಹೆಸರು ಮಾಡುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ.

ಇದನ್ನೂ ಓದಿ: ಆ ಒಂದು ಘಟನೆ ನಡೆದಿದ್ದರೆ ಪಂಕಜ್ ತ್ರಿಪಾಠಿ ರೈತನಾಗಿರುತ್ತಿದ್ದರು 

ಟಿಎಸ್​ ನಾಗಾಭರಣ ಅವರು ‘ಚಿಗುರಿದ ಕನಸು’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಶಿವರಾಜ್​ಕುಮಾರ್, ಅನಂತ್ ನಾಗ್, ಅವಿನಾಶ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಪಾರ್ವತಮ್ಮ ರಾಜ್​ಕುಮಾರ್ ಅವರು ಈ ಚಿತ್ರವನ್ನು ‘ಶ್ರೀ ವಜ್ರೇಶ್ವರಿ ಕಂಬೈನ್ಸ್’ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಸಿನಿಮಾ 2003ರ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಆ ಬಳಿಕ ಪಂಕಹ್ ‘ರನ್’ ಹೆಸರಿನ ಸಿನಿಮಾ ಮಾಡಿದರು. ಆ ಬಳಿಕ ‘ಅಪರಹಣ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದರು. ‘ಗ್ಯಾಂಗ್ ಆಫ್​ ವಸೇಪುರ್’  ಚಿತ್ರದಲ್ಲಿ ನಟಿಸಿ ಅವರು ಫೇಮಸ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!