AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್ ವೇಳೆ ಸರ್ಕಾರಿ ಕಾರನ್ನು ದುರ್ಬಳಕೆ ಮಾಡಿಕೊಂಡ ನಿರ್ದೇಶಕ ಪನ್ನಗಭರಣ?

ಪನ್ನಗಭರಣ ತಂದೆ ಟಿ.ಎಸ್. ನಾಗಾಭರಣ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು. ಹೀಗಾಗಿ, ಅವರಿಗೆ ಸರ್ಕಾರಿ ಕಾರನ್ನು ನೀಡಿದೆ. ಆದರೆ, ಅಧ್ಯಕ್ಷರಿಗೆ ಕೊಟ್ಟಿರುವ ಕಾರನ್ನು ಪನ್ನಗಭರಣ ಸ್ವಂತಕ್ಕೆ ಬಳಸಿಕೊಂಡಿದ್ದಾರೆ.

ಲಾಕ್ ಡೌನ್ ವೇಳೆ ಸರ್ಕಾರಿ ಕಾರನ್ನು ದುರ್ಬಳಕೆ ಮಾಡಿಕೊಂಡ ನಿರ್ದೇಶಕ ಪನ್ನಗಭರಣ?
ನಾಗಾಭರಣ-ಪನ್ನಗಭರಣ
Follow us
TV9 Web
| Updated By: ಮದನ್​ ಕುಮಾರ್​

Updated on: Jun 07, 2021 | 3:45 PM

ಇಂದು (ಜೂನ್ 7) ಚಿರಂಜೀವಿ ಸರ್ಜಾ ಅವರ ಪುಣ್ಯ ತಿಥಿ. ಅವರು ಹೃದಯಾಘಾತದಿಂದ ಮೃತಪಟ್ಟು ಒಂದು ವರ್ಷ ಕಳೆದಿದೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಹಾಗೂ ಆಪ್ತರು ಪೂಜೆ ಸಲ್ಲಿಸಿದ್ದಾರೆ. ಅಲ್ಲಿಗೆ ತೆರಳಲು ನಿರ್ದೇಶಕ ಪನ್ನಗಭರಣ ಅವರು ಸರ್ಕಾರಿ ಕಾರನ್ನು ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ಪನ್ನಗಭರಣ ಅವರು ಚಿರುಗೆ ತುಂಬಾನೇ ಆಪ್ತರಾಗಿದ್ದರು. ಸಮಯ ಸಿಕ್ಕಾಗೆಲ್ಲ ಇಬ್ಬರೂ ಒಟ್ಟಾಗಿ ಸಮಯ ಕಳೆಯುತ್ತಿದ್ದರು. ಚಿರು ಮೃತಪಟ್ಟ ನಂತರ ಪನ್ನಗಭರಣ ಅವರು ತುಂಬಾನೇ ದುಃಖಪಟ್ಟಿದ್ದರು. ಆಪ್ತ ಸ್ನೇಹಿತನನ್ನು ಕಳೆದುಕೊಂಡಿದ್ದು ಅವರಿಗೆ ತೀವ್ರ ನೋವಾಗಿತ್ತು. ಇಂದು ಚಿರು ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಬೃಂದಾವನ ಫಾರ್ಮ್​ಹೌಸ್​ಗೆ ಪನ್ನಗಾಭರಣ ತೆರಳಿದ್ದರು.  ಇದಕ್ಕೆ ಅವರು ಬಳಕೆ ಮಾಡಿಕೊಂಡಿದ್ದು ಸರ್ಕಾರಿ ಕಾರನ್ನು.

ಪನ್ನಗಭರಣ ತಂದೆ ಟಿ.ಎಸ್. ನಾಗಾಭರಣ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು. ಹೀಗಾಗಿ, ಅವರಿಗೆ ಸರ್ಕಾರಿ ಕಾರನ್ನು ನೀಡಿದೆ. ಆದರೆ, ಅಧ್ಯಕ್ಷರಿಗೆ ಕೊಟ್ಟಿರುವ ಕಾರನ್ನು ಪನ್ನಗಭರಣ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಬೆಂಗಳೂರಿನ ನಗರ ಭಾಗದಿಂದ 25 ಕಿ.ಮೀ ದೂರದಲ್ಲಿರುವ ಬೃಂದಾವನ ಫಾರ್ಮ್​ಹೌಸ್​ಗೆ ಸರ್ಕಾರಿ ಕಾರಿನಲ್ಲೇ ಬಂದಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಗೂಗಲ್​ನಲ್ಲಿ ಕನ್ನಡಕ್ಕೆ ಅವಮಾನವಾಗಿತ್ತು. ಅನೇಕ ಸೆಲೆಬ್ರಿಟಿಗಳು ಈ ಬೆಳವಣಿಗೆ ಬಗ್ಗೆ ಸಿಡಿದೆದ್ದಿದ್ದರು. ಇದಕ್ಕೆ ಧ್ವನಿಗೂಡಿಸಿದ್ದ ನಿರ್ದೇಶಕ ಪನ್ನಗಭರಣ, ಕ್ವೀನ್ಸ್​ ಆಫ್​ ಆಲ್​ ದಿ ಲ್ಯಾಂಗ್ವೇಜಸ್ ಅನ್ನೋದನ್ನು ಸರ್ಚ್​ ಮಾಡಿ. #QueenOfLanguagesKannada ಬಳಕೆ ಮಾಡಿ. ಈ ಮೂಲಕ ಕನ್ನಡಿಗರ ಶಕ್ತಿಯನ್ನು ತೋರಿಸೋಣ ಎಂದಿದ್ದರು.

ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್