AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗಿಣಿ ತುಂಬಾ ಸುಸ್ತಾಗಿದ್ದೀಯಾ, ಮೊದ್ಲು ಊಟ ಮಾಡಮ್ಮಾ’ ಅಂದ್ರು ವೈದ್ಯೆ!

ಆನೇಕಲ್: ಸರ್ಕಾರಿ ಸಾಂತ್ವನ ಕೇಂದ್ರದಿಂದ ಸೀದಾ ಪರಪ್ಪನ ಅಗ್ರಹಾರ ಜೈಲಿಗೆ ತಲುಪಿ ‘ಪಂಜರದ ಗಿಣಿ’ಯಾಗಿರುವ ರಾಗಿಣಿ ದ್ವಿವೇದಿಗೆ ಅಲ್ಲಿನ ಜೈಲು ವಾತಾವರಣ ಸುತರಾಂ ಇಷ್ಟವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಮೊದಲು ಆಹಾರ ಸೇವನೆ ಅಷ್ಟಕ್ಕಷ್ಟೇ ಅಂತಾ ಬಲವಂತಕ್ಕೆ ಒಂದಷ್ಟು ತಿನ್ನುವ ಶಾಸ್ತ್ರ ಮುಗಿಸಿದ್ದಾರೆ ರಾಗಿಣಿ. ಮನೆಯಿಂದ, ಸ್ವತಃ ಸಿಸಿಬಿಯಿಂದ ಬಂದ ಆಹಾರ ಸೇವನೆಗೆ ಕ್ವಾರಂಟೈನ್ ನಿಯಮ ಬ್ರೇಕ್ ಹಾಕಿದೆ. ಇಷ್ಟಾನುಸಾರ ತಿನ್ನುವ ಹಾಗಿಲ್ಲ ಅನ್ನುತ್ತಿದೆ ಜೈಲಿನ ಕೊರೊನಾ ಕ್ವಾರಂಟೈನ್ ನಿಯಮ. ಇದರಿಂದ ರಾಗಿಣಿ ನಿತ್ರಾಣಗೊಂಡಿದ್ದಾಳೆ. ಇಂದು ಚೆಕಪ್​ಗೆ ಬಂದ […]

‘ರಾಗಿಣಿ ತುಂಬಾ ಸುಸ್ತಾಗಿದ್ದೀಯಾ, ಮೊದ್ಲು ಊಟ ಮಾಡಮ್ಮಾ’ ಅಂದ್ರು ವೈದ್ಯೆ!
ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 15, 2020 | 1:50 PM

Share

ಆನೇಕಲ್: ಸರ್ಕಾರಿ ಸಾಂತ್ವನ ಕೇಂದ್ರದಿಂದ ಸೀದಾ ಪರಪ್ಪನ ಅಗ್ರಹಾರ ಜೈಲಿಗೆ ತಲುಪಿ ‘ಪಂಜರದ ಗಿಣಿ’ಯಾಗಿರುವ ರಾಗಿಣಿ ದ್ವಿವೇದಿಗೆ ಅಲ್ಲಿನ ಜೈಲು ವಾತಾವರಣ ಸುತರಾಂ ಇಷ್ಟವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಮೊದಲು ಆಹಾರ ಸೇವನೆ ಅಷ್ಟಕ್ಕಷ್ಟೇ ಅಂತಾ ಬಲವಂತಕ್ಕೆ ಒಂದಷ್ಟು ತಿನ್ನುವ ಶಾಸ್ತ್ರ ಮುಗಿಸಿದ್ದಾರೆ ರಾಗಿಣಿ.

ಮನೆಯಿಂದ, ಸ್ವತಃ ಸಿಸಿಬಿಯಿಂದ ಬಂದ ಆಹಾರ ಸೇವನೆಗೆ ಕ್ವಾರಂಟೈನ್ ನಿಯಮ ಬ್ರೇಕ್ ಹಾಕಿದೆ. ಇಷ್ಟಾನುಸಾರ ತಿನ್ನುವ ಹಾಗಿಲ್ಲ ಅನ್ನುತ್ತಿದೆ ಜೈಲಿನ ಕೊರೊನಾ ಕ್ವಾರಂಟೈನ್ ನಿಯಮ. ಇದರಿಂದ ರಾಗಿಣಿ ನಿತ್ರಾಣಗೊಂಡಿದ್ದಾಳೆ. ಇಂದು ಚೆಕಪ್​ಗೆ ಬಂದ ವೈದ್ಯರ ಬಳಿ ಮತ್ತದೇ ರಾಗ ತೆಗೆದಿದ್ದಾಳೆ ರಾಗಿಣಿ.. ನನಗೆ ಅಸ್ತಮಾ, ಬೆನ್ನು ನೋವು ಅಂತೆಲ್ಲಾ ಹೇಳಿಕೊಂಡಿದ್ದಾರೆ. ಅಂದಹಾಗೆ, ಜೈಲು ವೈದ್ಯೆ ಉಮಾ ಅವರು ರಾಗಿಣಿ ಚಿಕಿತ್ಸೆಗೆ ಬಂದಿದ್ರು. ರಾಗಿಣಿಯನ್ನು ನೋಡಿದವರೇ ‘ರಾಗಿಣಿ ತುಂಬಾ ಸುಸ್ತಾಗಿದ್ದೀಯಾ, ಮೊದ್ಲು ಊಟ ಮಾಡಮ್ಮಾ’ ಅಂತಾ ಮಾತೃ ಅಂತಃಕರಣದ ವೈದ್ಯೆ ಗದರಿಕೊಂಡಿದ್ದಾರೆ.

ಆಗಷ್ಟೇ ರಾಗಿಣಿ ಸೆಂಟ್ರಲ್​ ಜೈಲಿನಲ್ಲಿ ಮಧ್ಯಾಹ್ನದ ಊಟ ಸೇವಿಸಿದ್ದಾರೆ. ಜೈಲು ಸಿಬ್ಬಂದಿ ನೀಡಿದ ಚಪಾತಿ, ಪಲ್ಯ, ಅನ್ನ, ಸಾಂಬಾರ್​ ಅನ್ನೇ ತಿಂದುಮುಗಿಸಿದ್ದಾರೆ. ಊಟೋಪಚಾರದ ಬಳಿಕ, ವೈದ್ಯರು ರಾಗಿಣಿಗೆ ವೈದ್ಯೋಪಚಾರ ನೀಡಲು ಮುಂದಾಗಿದ್ದಾರೆ.

Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್