ಮಗಳಿಗಾಗಿ ಮಧ್ಯರಾತ್ರಿ 1 ಗಂಟೆಗೆ ಊಟ ತಂದಿದ್ದ ನಟಿ ರಾಗಿಣಿ ಪೋಷಕರು, ಮುಂದೇನಾಯ್ತು?

ಬೆಂಗಳೂರು: ಸ್ಯಾಂಡಲ್ ವುಡ್​ ಡ್ರಗ್ಸ್ ಜಾಲ ಆರೋಪ ಪ್ರಕರಣದಲ್ಲಿ CCB ಇಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಹೀಗಾಗಿ ಮಧ್ಯರಾತ್ರಿ 1 ಗಂಟೆಗೆ ರಾಗಿಣಿ ಪೋಷಕರು ತಮ್ಮ ಮಗಳನ್ನು ಕಾಣಲು ಮಹಿಳಾ ಸಾಂತ್ವನ ಕೇಂದ್ರದ ಗೇಟ್ ಬಳಿ ಕಾದು ಕುಳಿತ್ತಿದ್ದರು. ನಟಿ ರಾಗಿಣಿ ದ್ವಿವೇದಿ ತಾಯಿ ರೋಹಿಣಿ ದ್ವಿವೇದಿ, ತಂದೆ ರಾಕೇಶ್ ದ್ವಿವೇದಿ ತಮ್ಮ ಮಗಳಿಗಾಗಿ ಬಟ್ಟೆಯ ಜೊತೆಗೆ ಊಟಕ್ಕಾಗಿ ಪಾಸ್ತಾ, ನೀರಿನ ಬಾಟಲ್ ತಂದಿದ್ದರು. ರಾಗಿಣಿ ಪೋಷಕರ ಬಳಿ ಇದಕ್ಕೆಲ್ಲಾ […]

ಮಗಳಿಗಾಗಿ ಮಧ್ಯರಾತ್ರಿ 1 ಗಂಟೆಗೆ ಊಟ ತಂದಿದ್ದ ನಟಿ ರಾಗಿಣಿ ಪೋಷಕರು, ಮುಂದೇನಾಯ್ತು?
ಸಾಧು ಶ್ರೀನಾಥ್​

Updated on: Sep 05, 2020 | 12:39 PM

ಬೆಂಗಳೂರು: ಸ್ಯಾಂಡಲ್ ವುಡ್​ ಡ್ರಗ್ಸ್ ಜಾಲ ಆರೋಪ ಪ್ರಕರಣದಲ್ಲಿ CCB ಇಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಹೀಗಾಗಿ ಮಧ್ಯರಾತ್ರಿ 1 ಗಂಟೆಗೆ ರಾಗಿಣಿ ಪೋಷಕರು ತಮ್ಮ ಮಗಳನ್ನು ಕಾಣಲು ಮಹಿಳಾ ಸಾಂತ್ವನ ಕೇಂದ್ರದ ಗೇಟ್ ಬಳಿ ಕಾದು ಕುಳಿತ್ತಿದ್ದರು. ನಟಿ ರಾಗಿಣಿ ದ್ವಿವೇದಿ ತಾಯಿ ರೋಹಿಣಿ ದ್ವಿವೇದಿ, ತಂದೆ ರಾಕೇಶ್ ದ್ವಿವೇದಿ ತಮ್ಮ ಮಗಳಿಗಾಗಿ ಬಟ್ಟೆಯ ಜೊತೆಗೆ ಊಟಕ್ಕಾಗಿ ಪಾಸ್ತಾ, ನೀರಿನ ಬಾಟಲ್ ತಂದಿದ್ದರು.

ರಾಗಿಣಿ ಪೋಷಕರ ಬಳಿ ಇದಕ್ಕೆಲ್ಲಾ ಅನುಮತಿ ಇಲ್ಲದಿರುವುದರಿಂದ ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿಗಳು ಇದಕ್ಕೆಲ್ಲಾ ಅವಕಾಶ ನೀಡಲಿಲ್ಲ. ಮಹಿಳಾ ಸಾಂತ್ವಾನ ಕೇಂದ್ರದ ಗೇಟ್ ಮುಂಬಾಗ ಅರ್ಧ ಗಂಟೆ ಕಾದು ನಿಂತಿದ್ದ ರಾಗಿಣಿ ಪೋಷಕರು, ಕೊನೆಗೆ ತಂದಿದ್ದ ಊಟ ಮತ್ತು ಬಟ್ಟೆಯನ್ನು ತೆಗೆದುಕೊಂಡು ಮನೆಗೆ ವಾಪಾಸ್ಸಾಗಿದ್ದಾರೆ.

ಇದನ್ನೂ ಓದಿ: CCB ಬಂಧನದಲ್ಲಿ ನಟಿ ರಾಗಿಣಿ: ಹೇಗಿತ್ತು ಮೊದಲ ರಾತ್ರಿ?

Published On - 9:16 am, Sat, 5 September 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us