AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್

Parvathamma Rajkumar: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಅಪ್ಪು ಮೇಲೆ ವಿಶೇಷ ಪ್ರೀತಿ. ಅಣ್ಣಾವ್ರ ಮೂವರು ಮಕ್ಕಳಲ್ಲಿ ಅಪ್ಪು ತುಸು ಹೆಚ್ಚೇ ಕಪ್ಪು. ಅದೇ ಅವರಿಗೆ ಅಂದವೂ ಹೌದು. ಆದರೆ ಕೆಲವರು ಪುನೀತ್ ಅವರ ಬಣ್ಣದ ಬಗ್ಗೆ ಕಮೆಂಟ್ ಮಾಡಿದ್ದರು. ಆ ಸಮಯದಲ್ಲಿ ಪಾರ್ವತಮ್ಮ ಅವರು ಸೂಕ್ತ ಉತ್ತರವನ್ನೇ ನೀಡಿದ್ದರು. ಇಲ್ಲಿದೆ ಮಾಹಿತಿ...

ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Puneeth Parvathamma
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 16, 2025 | 4:50 PM

Share

ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ ಬಂದೇ ಬಿಟ್ಟಿದೆ. ಮಾರ್ಚ್ 17ರಂದು ಪುನೀತ್ ಬರ್ತ್​ಡೇನ ಫ್ಯಾನ್ಸ್ ಸಂಭ್ರಮದಿಂದ ಆಚರಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಅವರು ಮಾಡಿದ ಸಾಧನೆಯು ತುಂಬಾನೇ ದೊಡ್ಡದು. ಅವರ ಸಾಧನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅವರು ಇಲ್ಲ ಎಂಬ ಸತ್ಯವನ್ನು ಯಾರೂ ಒಪ್ಪಿಕೊಳ್ಳಲು ರೆಡಿ ಇಲ್ಲ. ಈಗ ಅವರ ಜನ್ಮದಿನದ ಸಂಭ್ರಮದ ಸಂದರ್ಭದಲ್ಲಿ ಅನೇಕ ವಿಡಿಯೋಗಳು ವೈರಲ್ ಆಗುತ್ತಿವೆ. ಆ ಪೈಕಿ ಒಂದು ವಿಡಿಯೋ ಗಮನ ಸೆಳೆದಿದೆ.

ಪುನೀತ್ ರಾಜ್​ಕುಮಾರ್ ಅವರು ಕಪ್ಪಿದ್ದಾರೆ ಎಂದು ಕೆಲವರು ಹೀಯಾಳಿಸಿದ್ದು ಇದೆ. ಆದರೆ, ಇದನ್ನು ರಾಜ್​ಕುಮಾರ್ ಅವರು ಬೇರೆಯದೇ ರೀತಿಯಲ್ಲಿ ಅರ್ಥೈಸಿದ್ದರು. ಈ ಬಗ್ಗೆ ಅವರು ಓಪನ್ ಆಗಿ ಮಾತನಾಡಿ ಗಮನ ಸೆಳೆದಿದ್ದರು. ಈ ಬಗ್ಗೆ ಪಾರ್ವತಮ್ಮ ಅವರು ಈ ಮೊದಲು ಮಾತನಾಡಿದ್ದರು.

ಪುನೀತ್ ತಾಯಿ ಪಾರ್ವತಮ್ಮ ಕಾರ್ಯಕ್ರಮ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ‘ರಾಮ ಕೃಷ್ಣ ಎಲ್ಲರೂ ಕಪ್ಪು. ಅದಕ್ಕೆ ಪುನೀತ್ ಕೂಡ ಕಪ್ಪಗೆ ಹುಟ್ಟಿದ್ದಾನೆ. ಅವನು ದೇವರು. ಏನು ಅಂದುಕೋಬೇಡ ಎಂದು ರಾಜ್​ಕುಮಾರ್ ನನ್ನ ಸಮಾಧಾನ ಮಾಡಿದ್ದರು’ ಎಂಬುದಾಗಿ ಪಾರ್ವತಮ್ಮ ಹೇಳಿದ್ದರು. ‘ಕಪ್ಪು ಕಸ್ತೂರಿ, ಕೆಂಪು ಕಿಸ್ಬಾಯಿ. ನನಗೇನೋ ಮಗನ ಬಣ್ಣ ಸಾಕಷ್ಟು ಇಷ್ಟ ಆಯ್ತು’ ಎಂಬುದು ರಾಜ್​ಕುಮಾರ್ ಅಭಿಪ್ರಾಯ ಆಗಿತ್ತು.

ಇದನ್ನೂ ಓದಿ:ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್ ರಾಜ್​ಕುಮಾರ್, ಕಾರಣ?

ಪುನೀತ್ ರಾಜ್​ಕುಮಾರ್ ಅವರನ್ನು ಬಾಲ ಕಲಾವಿದನಾಗಿ ಎಲ್ಲರೂ ಆರಂಭದಲ್ಲಿ ಒಪ್ಪಿಕೊಂಡರು. ಆ ಬಳಿಕ ಪುನೀತ್ ರಾಜ್​ಕುಮಾರ್ ‘ಅಪ್ಪು’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಆ ಸಮಯದಲ್ಲಿ ಅವರು ಮಾಡಿದ ಮೋಡಿ ತುಂಬಾನೇ ದೊಡ್ಡದು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿ ಅವರು ಭೇಷ್ ಎನಿಸಿಕೊಂಡಿದ್ದಾರೆ.

ಪುನೀತ್ ಜನ್ಮದಿನದ ಪ್ರಯುಕ್ತ ‘ಅಪ್ಪು’ ಸಿನಿಮಾ ರೀ-ರಿಲೀಸ್ ಆಗಿದೆ. ಪುನೀತ್ ಅವರನ್ನು ಈ ಮೂಲಕ ನೆನಪಿಸಿಕೊಳ್ಳಲಾಗಿದೆ. ಈ ಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಸಿನಿಮಾನ ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್