AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್

Parvathamma Rajkumar: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಅಪ್ಪು ಮೇಲೆ ವಿಶೇಷ ಪ್ರೀತಿ. ಅಣ್ಣಾವ್ರ ಮೂವರು ಮಕ್ಕಳಲ್ಲಿ ಅಪ್ಪು ತುಸು ಹೆಚ್ಚೇ ಕಪ್ಪು. ಅದೇ ಅವರಿಗೆ ಅಂದವೂ ಹೌದು. ಆದರೆ ಕೆಲವರು ಪುನೀತ್ ಅವರ ಬಣ್ಣದ ಬಗ್ಗೆ ಕಮೆಂಟ್ ಮಾಡಿದ್ದರು. ಆ ಸಮಯದಲ್ಲಿ ಪಾರ್ವತಮ್ಮ ಅವರು ಸೂಕ್ತ ಉತ್ತರವನ್ನೇ ನೀಡಿದ್ದರು. ಇಲ್ಲಿದೆ ಮಾಹಿತಿ...

ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Puneeth Parvathamma
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 16, 2025 | 4:50 PM

Share

ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ ಬಂದೇ ಬಿಟ್ಟಿದೆ. ಮಾರ್ಚ್ 17ರಂದು ಪುನೀತ್ ಬರ್ತ್​ಡೇನ ಫ್ಯಾನ್ಸ್ ಸಂಭ್ರಮದಿಂದ ಆಚರಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಅವರು ಮಾಡಿದ ಸಾಧನೆಯು ತುಂಬಾನೇ ದೊಡ್ಡದು. ಅವರ ಸಾಧನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅವರು ಇಲ್ಲ ಎಂಬ ಸತ್ಯವನ್ನು ಯಾರೂ ಒಪ್ಪಿಕೊಳ್ಳಲು ರೆಡಿ ಇಲ್ಲ. ಈಗ ಅವರ ಜನ್ಮದಿನದ ಸಂಭ್ರಮದ ಸಂದರ್ಭದಲ್ಲಿ ಅನೇಕ ವಿಡಿಯೋಗಳು ವೈರಲ್ ಆಗುತ್ತಿವೆ. ಆ ಪೈಕಿ ಒಂದು ವಿಡಿಯೋ ಗಮನ ಸೆಳೆದಿದೆ.

ಪುನೀತ್ ರಾಜ್​ಕುಮಾರ್ ಅವರು ಕಪ್ಪಿದ್ದಾರೆ ಎಂದು ಕೆಲವರು ಹೀಯಾಳಿಸಿದ್ದು ಇದೆ. ಆದರೆ, ಇದನ್ನು ರಾಜ್​ಕುಮಾರ್ ಅವರು ಬೇರೆಯದೇ ರೀತಿಯಲ್ಲಿ ಅರ್ಥೈಸಿದ್ದರು. ಈ ಬಗ್ಗೆ ಅವರು ಓಪನ್ ಆಗಿ ಮಾತನಾಡಿ ಗಮನ ಸೆಳೆದಿದ್ದರು. ಈ ಬಗ್ಗೆ ಪಾರ್ವತಮ್ಮ ಅವರು ಈ ಮೊದಲು ಮಾತನಾಡಿದ್ದರು.

ಪುನೀತ್ ತಾಯಿ ಪಾರ್ವತಮ್ಮ ಕಾರ್ಯಕ್ರಮ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ‘ರಾಮ ಕೃಷ್ಣ ಎಲ್ಲರೂ ಕಪ್ಪು. ಅದಕ್ಕೆ ಪುನೀತ್ ಕೂಡ ಕಪ್ಪಗೆ ಹುಟ್ಟಿದ್ದಾನೆ. ಅವನು ದೇವರು. ಏನು ಅಂದುಕೋಬೇಡ ಎಂದು ರಾಜ್​ಕುಮಾರ್ ನನ್ನ ಸಮಾಧಾನ ಮಾಡಿದ್ದರು’ ಎಂಬುದಾಗಿ ಪಾರ್ವತಮ್ಮ ಹೇಳಿದ್ದರು. ‘ಕಪ್ಪು ಕಸ್ತೂರಿ, ಕೆಂಪು ಕಿಸ್ಬಾಯಿ. ನನಗೇನೋ ಮಗನ ಬಣ್ಣ ಸಾಕಷ್ಟು ಇಷ್ಟ ಆಯ್ತು’ ಎಂಬುದು ರಾಜ್​ಕುಮಾರ್ ಅಭಿಪ್ರಾಯ ಆಗಿತ್ತು.

ಇದನ್ನೂ ಓದಿ:ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್ ರಾಜ್​ಕುಮಾರ್, ಕಾರಣ?

ಪುನೀತ್ ರಾಜ್​ಕುಮಾರ್ ಅವರನ್ನು ಬಾಲ ಕಲಾವಿದನಾಗಿ ಎಲ್ಲರೂ ಆರಂಭದಲ್ಲಿ ಒಪ್ಪಿಕೊಂಡರು. ಆ ಬಳಿಕ ಪುನೀತ್ ರಾಜ್​ಕುಮಾರ್ ‘ಅಪ್ಪು’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಆ ಸಮಯದಲ್ಲಿ ಅವರು ಮಾಡಿದ ಮೋಡಿ ತುಂಬಾನೇ ದೊಡ್ಡದು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿ ಅವರು ಭೇಷ್ ಎನಿಸಿಕೊಂಡಿದ್ದಾರೆ.

ಪುನೀತ್ ಜನ್ಮದಿನದ ಪ್ರಯುಕ್ತ ‘ಅಪ್ಪು’ ಸಿನಿಮಾ ರೀ-ರಿಲೀಸ್ ಆಗಿದೆ. ಪುನೀತ್ ಅವರನ್ನು ಈ ಮೂಲಕ ನೆನಪಿಸಿಕೊಳ್ಳಲಾಗಿದೆ. ಈ ಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಸಿನಿಮಾನ ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ