AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ವತಮ್ಮ ರಾಜ್​ಕುಮಾರ್ ಸಹೋದರಿ ಎಸ್​.ಎ. ನಾಗಮ್ಮ ನಿಧನ

ನಾಗಮ್ಮ ಅವರಿಗೆ ವಯಸ್ಸಾಗಿತ್ತು. ಹೀಗಾಗಿ, ಅನೇಕ ಕಾಯಿಲೆಗಳು ಅವರನ್ನು ಸುತ್ತಿಕೊಂಡಿದ್ದವು. ಕಳೆದ ಎರಡು ವಾರಗಳಿಂದ ಅನಾರೋಗ್ಯ ಹದಗೆಟ್ಟಿತ್ತು. ಬಸವೇಶ್ವರ ನಗರದಲ್ಲಿರುವ ತಮ್ಮ ಮಗನ ಮನೆಯಲ್ಲಿ ಇಂದು ಬೆಳಿಗ್ಗೆ ಅವರು ಕೊನೆ ಉಸಿರೆಳೆದಿದ್ದಾರೆ.

ಪಾರ್ವತಮ್ಮ ರಾಜ್​ಕುಮಾರ್ ಸಹೋದರಿ ಎಸ್​.ಎ. ನಾಗಮ್ಮ ನಿಧನ
ನಾಗಮ್ಮ-ಪಾರ್ವತಮ್ಮ
TV9 Web
| Edited By: |

Updated on:May 14, 2022 | 4:43 PM

Share

ರಾಜ್​ಕುಮಾರ್ ಅವರ (Rajkumar) ಪತ್ನಿ ಪಾರ್ವತಮ್ಮ (Parvathamma) ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಹಲವು ಸಿನಿಮಾಗಳನ್ನು ನಿರ್ಮಿಸಿ ಅವರು ಭೇಷ್ ಎನಿಸಿಕೊಂಡವರು. ಅವರ ಸಹೋದರಿ ಎಸ್.ಎ. ನಾಗಮ್ಮ ಅವರು (SA Nagamma)ಇಂದು (ಮೇ 14) ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ. ಚಿನ್ನೇಗೌಡ ಅವರು ಸ್ಯಾಂಡಲ್​ವುಡ್​ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ನಾಗಮ್ಮ ಅವರು ಚಿನ್ನೇಗೌಡ ಅವರಿಗೂ ಸಹೋದರಿ. ನಾಗಮ್ಮ ಅವರ ಸಾವಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಾಗಮ್ಮ ಅವರಿಗೆ ವಯಸ್ಸಾಗಿತ್ತು. ಹೀಗಾಗಿ, ಅನೇಕ ಕಾಯಿಲೆಗಳು ಅವರನ್ನು ಸುತ್ತಿಕೊಂಡಿದ್ದವು. ಕಳೆದ ಎರಡು ವಾರಗಳಿಂದ ಅನಾರೋಗ್ಯ ಹದಗೆಟ್ಟಿತ್ತು. ಬಸವೇಶ್ವರ ನಗರದಲ್ಲಿರುವ ತಮ್ಮ ಮಗನ ಮನೆಯಲ್ಲಿ ಇಂದು ಬೆಳಿಗ್ಗೆ ಅವರು ಕೊನೆ ಉಸಿರೆಳೆದಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಹೋದರ ಎಸ್.ಎ. ಚಿನ್ನೇಗೌಡ, ಎಸ್.ಎ. ಗೋವಿಂದರಾಜು, ಎಸ್.ಎ. ಶ್ರೀನಿವಾಸ್ ಹಾಗೂ ತಂಗಿ ಜಯಮ್ಮ, ಮಗ ಮಹೇಶ್ ಹಾಗೂ ಮೊಮ್ಮಕ್ಕಳನ್ನು ಅವರು ಅಗಲಿದ್ದಾರೆ.

ನಾಗಮ್ಮ ಅವರ ಅಂತ್ಯಕ್ರಿಯೆ ಇಂದೇ ನೆರವೇರಲಿದೆ. ಸಂಜೆ ಇಳಂದೂರಿನ ಕೆಸ್ತೂರಿನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಈ ಕಾರ್ಯದಲ್ಲಿ ಕುಟುಂಬ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಅವರ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ
Image
ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ
Image
ಪಾರ್ವತಮ್ಮ, ಪುನೀತ್ ಹೆಸರಲ್ಲಿ 2 ಬಂಗಾರದ ಪದಕ ಘೋಷಿಸಿದ ಅಶ್ವಿನಿ; ‘ದೊಡ್ಮನೆ ಯಾವತ್ತಿಗೂ ದೊಡ್ಮನೆ’ ಎಂದ ಅಭಿಮಾನಿಗಳು
Image
ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ನಮಿಸಿದ ಅಲ್ಲು ಅರ್ಜುನ್​; ಇಲ್ಲಿದೆ ವಿಡಿಯೋ
Image
ಅಣ್ಣಾವ್ರ ಮನೆ 2 ಭಾಗ ಆದಾಗ ಪಾರ್ವತಮ್ಮ ಹೇಳಿದ್ದೇನು? ಮುಖ್ಯವಾದ ವಿಚಾರ ತಿಳಿಸಿದ ರಾಘಣ್ಣ

ರಾಜ್​ಕುಮಾರ್ ಕುಟುಂಬಕ್ಕೆ ಕಳೆದ ವರ್ಷ ಆಘಾತ ಎದುರಾಗಿತ್ತು. ಪುನೀತ್ ರಾಜ್​ಕುಮಾರ್ ಅವರ ನಿಧನ ವಾರ್ತೆಯಿಂದ ಫ್ಯಾನ್ಸ್ ತುಂಬಾನೇ ಅಪ್ಸೆಟ್ ಆದರು. ಅವರು ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಅವರಿಗೆ ಈಗಲೂ ಸಾಧ್ಯವಾಗುತ್ತಿಲ್ಲ. ಇಂದಿಗೂ ಅಪ್ಪು ಅವರನ್ನೂ ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಹೀಗಿರುವಾಗಲೇ ಪಾರ್ವತಮ್ಮ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಿಸಿರುವುದು ಬೇಸರದ ಸಂಗತಿ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:33 pm, Sat, 14 May 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್