AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ […]

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್
ಆಯೇಷಾ ಬಾನು
| Edited By: |

Updated on: Oct 28, 2020 | 3:44 PM

Share

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ ನಿರ್ದೇಶಕ ರಾಕೇಶ್​ಗೆ ಹಣ ಹಿಂದಿರುಗಿಸಲು ಒತ್ತಡ ಹೇರಿದ್ದಾರೆ.

ನೆಲಮಂಗಲ ಪೊಲೀಸ್​ ಠಾಣೆಗೆ ಕರೆಸಿಕೊಂಡು ಬೆದರಿಸಿ ಚೆಕ್​ಗೆ ಸಹಿ ಪಡೆದಿದ್ದರು. ಹೀಗಾಗಿ ಪೊಲೀಸರ ವಿರುದ್ಧ ರಾಕೇಶ್ ಖಾಸಗಿ ದೂರು ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಿದರೂ ಪೊಲೀಸರು ಕೋರ್ಟ್​ಗೆ ಹಾಜರಾಗಿರಲಿಲ್ಲ. ವಾರಂಟ್ ಜಾರಿಗೊಳಿಸುವಂತೆ ವಕೀಲ ವೇದಮೂರ್ತಿ ವಾದ ಮಂಡಿಸಿದ್ದರು. ಸಿವಿಲ್ ಕೇಸ್​ನಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಗರಂ ಆಗಿತ್ತು. ಸದ್ಯ ಈಗ ಎಸಿಎಂಎಂ ಕೋರ್ಟ್​ ಜಡ್ಜ್​ ಬಾಲಗೋಪಾಲಕೃಷ್ಣ 2021ರ ಜನವರಿ 29ರೊಳಗೆ ವಾರಂಟ್ ಜಾರಿಗೆ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ