AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ […]

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್
ಆಯೇಷಾ ಬಾನು
| Edited By: |

Updated on: Oct 28, 2020 | 3:44 PM

Share

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ ನಿರ್ದೇಶಕ ರಾಕೇಶ್​ಗೆ ಹಣ ಹಿಂದಿರುಗಿಸಲು ಒತ್ತಡ ಹೇರಿದ್ದಾರೆ.

ನೆಲಮಂಗಲ ಪೊಲೀಸ್​ ಠಾಣೆಗೆ ಕರೆಸಿಕೊಂಡು ಬೆದರಿಸಿ ಚೆಕ್​ಗೆ ಸಹಿ ಪಡೆದಿದ್ದರು. ಹೀಗಾಗಿ ಪೊಲೀಸರ ವಿರುದ್ಧ ರಾಕೇಶ್ ಖಾಸಗಿ ದೂರು ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಿದರೂ ಪೊಲೀಸರು ಕೋರ್ಟ್​ಗೆ ಹಾಜರಾಗಿರಲಿಲ್ಲ. ವಾರಂಟ್ ಜಾರಿಗೊಳಿಸುವಂತೆ ವಕೀಲ ವೇದಮೂರ್ತಿ ವಾದ ಮಂಡಿಸಿದ್ದರು. ಸಿವಿಲ್ ಕೇಸ್​ನಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಗರಂ ಆಗಿತ್ತು. ಸದ್ಯ ಈಗ ಎಸಿಎಂಎಂ ಕೋರ್ಟ್​ ಜಡ್ಜ್​ ಬಾಲಗೋಪಾಲಕೃಷ್ಣ 2021ರ ಜನವರಿ 29ರೊಳಗೆ ವಾರಂಟ್ ಜಾರಿಗೆ ಆದೇಶಿಸಿದ್ದಾರೆ.

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್