AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ […]

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 28, 2020 | 3:44 PM

Share

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ ನಿರ್ದೇಶಕ ರಾಕೇಶ್​ಗೆ ಹಣ ಹಿಂದಿರುಗಿಸಲು ಒತ್ತಡ ಹೇರಿದ್ದಾರೆ.

ನೆಲಮಂಗಲ ಪೊಲೀಸ್​ ಠಾಣೆಗೆ ಕರೆಸಿಕೊಂಡು ಬೆದರಿಸಿ ಚೆಕ್​ಗೆ ಸಹಿ ಪಡೆದಿದ್ದರು. ಹೀಗಾಗಿ ಪೊಲೀಸರ ವಿರುದ್ಧ ರಾಕೇಶ್ ಖಾಸಗಿ ದೂರು ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಿದರೂ ಪೊಲೀಸರು ಕೋರ್ಟ್​ಗೆ ಹಾಜರಾಗಿರಲಿಲ್ಲ. ವಾರಂಟ್ ಜಾರಿಗೊಳಿಸುವಂತೆ ವಕೀಲ ವೇದಮೂರ್ತಿ ವಾದ ಮಂಡಿಸಿದ್ದರು. ಸಿವಿಲ್ ಕೇಸ್​ನಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಗರಂ ಆಗಿತ್ತು. ಸದ್ಯ ಈಗ ಎಸಿಎಂಎಂ ಕೋರ್ಟ್​ ಜಡ್ಜ್​ ಬಾಲಗೋಪಾಲಕೃಷ್ಣ 2021ರ ಜನವರಿ 29ರೊಳಗೆ ವಾರಂಟ್ ಜಾರಿಗೆ ಆದೇಶಿಸಿದ್ದಾರೆ.