AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 31ಕ್ಕೆ ಪವಿತ್ರಾ ಗೌಡ ಜಾಮೀನು ಅರ್ಜಿ ಆದೇಶ, ಮಂಡಿಸಿದ ವಾದವೇನು?

Pavithra Gowda: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ವಿನಯ್, ಅನುಕುಮಾರ್, ಕೇಶವಮೂರ್ತಿ ಅವರುಗಳ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆದಿದೆ. ನ್ಯಾಯಾಲಯದಲ್ಲಿ ನಡೆದ ವಾದ ಏನು?

ಆಗಸ್ಟ್ 31ಕ್ಕೆ ಪವಿತ್ರಾ ಗೌಡ ಜಾಮೀನು ಅರ್ಜಿ ಆದೇಶ, ಮಂಡಿಸಿದ ವಾದವೇನು?
ಮಂಜುನಾಥ ಸಿ.
|

Updated on: Aug 28, 2024 | 4:40 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿಯಾಗಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಜೂನ್ 11 ರಂದು ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗಷ್ಟೆ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇಂದು (ಆಗಸ್ಟ್ 28) ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ವಿಚಾರಣೆ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದ್ದಾರೆ.

ಮೊದಲು ವಾದ ಮಂಡಿಸಿದ ಸರ್ಕಾರಿ ವಕೀಲ ಪ್ರಸನ್ನ ಕುಮಾರ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲವು ವಿಷಯಗಳನ್ನು ಬಿಚ್ಚಿಟ್ಟರು. ಅಲ್ಲದೆ ಪ್ರಕರಣದಲ್ಲಿ ಪವಿತ್ರಾ ಗೌಡರ ಪಾತ್ರವನ್ನು ವಿವರಿಸಿದರು. ಆರೋಪಿ 3, ಪವನ್ ಮೊಬೈಲ್​ ಮೂಲಕ ರೇಣುಕಾ ಸ್ವಾಮಿ ಜೊತೆಗೆ ಪವಿತ್ರಾ ಮಾತನಾಡಿದ್ದರು ಎಂಬ ಅಂಶವನ್ನು ನ್ಯಾಯಾಲಯಕ್ಕೆ ಹೇಳಿದ್ದಾರೆ. ಮುಂದುವರೆದು, ಮಹಳೆ ಎಂಬ ಕಾರಣಕ್ಕೆ ಪವಿತ್ರಾ ಗೌಡಗೆ ಜಾಮೀನು ನೀಡಬಾರದು ಎಂದು ಸುಪ್ರೀಂ ಕೋರ್ಟ್​ನ ಕೆಲವು ಆದೇಶಗಳನ್ನು ಉದಹಾರಣೆಯಾಗಿ ನೀಡಿದರು.

ಬಳಿಕ ಪವಿತ್ರಾ ಗೌಡ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸೆಬಾಸ್ಟಿಯನ್, ಪವಿತ್ರಾಗೌಡ ಗೂ ದರ್ಶನ್​ಗೆ ಒಂದು ರೀತಿಯ ಸಂಬಂಧ ಇರಬಹುದು ನಿಜವಿರಬಹುದು. ಆದರೆ ರೇಣುಕಾ ಸ್ವಾಮಿ ಕೊಲೆಯಲ್ಲ ‌ಪವಿತ್ರಾಗೌಡ ಯಾವುದೇ ಪಾತ್ರ ವಹಿಸಿಲ್ಲ. ರೇಣುಕಾ ಸ್ವಾಮಿ ಇನ್ ಸ್ಟಾಗ್ರಾಮ್ ನಲ್ಲಿ ಅಸಭ್ಯ ಫೋಟೋ ಕಳುಹಿಸಿದ್ದಾನೆ. ಸಹಜವಾಗೇ ಈ ವಿಷಯವನ್ನು ಸಹಾಯಕನಾಗಿರುವ ಎ 3 ಪವನ್​ಗೆ ಪವಿತ್ರಾಗೌಡ ತಿಳಿಸಿದ್ದಾಳೆ. ಎ 3 ಪವನ್, ದರ್ಶನ್ ಗೆ ವಿಷಯ ತಿಳಿಸಿದ್ದಾನೆ.

ಇದನ್ನೂ ಓದಿ:ದರ್ಶನ್​ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಹಿಂದೆ ರಾಜಕೀಯ ಉದ್ದೇಶವಿಲ್ಲ: ಎನ್ ಎಸ್ ಬೋಸರಾಜು

ರೇಣುಕಾ ಸ್ವಾಮಿ ಕೊಲೆ ಆದ ದಿನವೂ ಸಹ ದರ್ಶನ್ ಆಕೆಯನ್ನು ಷೆಡ್ ಕರೆದೊಯ್ದಿದ್ದಾನೆ. ಪವಿತ್ರಾಗೌಡ, ದರ್ಶನ್ ಜೊತೆಯಲ್ಲಿ ಹೋಗಿದ್ದರೂ ಸಹ ಕೊಲೆಯಲ್ಲಿ ಭಾಗಿಯಾಗಿಲ್ಲ. ಆಕೆ ಹಲ್ಲೆ ನಡೆಸಿದ್ದಾಳೆಂದೂ ಆರೋಪವಿಲ್ಲ. ‌ಹೀಗಿರುವಾಗ ಕೊಲೆಯಲ್ಲಿ ಪವಿತ್ರಾಗೌಡ ಪಾತ್ರವೇನು? ಎಂದು ವಕೀಲ ಸೆಬಾಸ್ಟಿಯನ್ ಪ್ರಶ್ನಿಸಿದರು.

ಪವಿತ್ರಾಗೌಡ ಕಪಾಳಮೋಕ್ಷ ನಡೆಸಿದ್ದರೆಂದು ಹೇಳಿದ್ದಾರೆ. ಆದರೆ ಕಪಾಳಮೋಕ್ಷದಿಂದ ಸಾವಾಗಿದೆ ಎಂಬ ವರದಿಯಿಲ್ಲ. ಎದೆಗೂಡಿನ‌ ಮೂಳೆ ಮುರಿದು ಅದು ಶ್ವಾಸಕೋಶಕ್ಕೆ ಚುಚ್ಚಿ ಸಾವಾಗಿದೆ. ಕಪಾಳಮೋಕ್ಷ ದಿಂದ ಸಾವಾಗಿರಲು ಸಾಧ್ಯವೇ ಇಲ್ಲ. ಎದೆಗೂಡಿನ‌ ಮೂಳೆ ಮುರಿತಕ್ಕೂ ಪವಿತ್ರಾಗೌಡಗೂ ಯಾವುದೇ ಸಂಬಂಧ ಇಲ್ಲ. ಪವಿತ್ರಾಗೌಡ ಕೂಡಾ ಮಹಿಳೆಯಾಗಿದ್ದು ಅಪ್ರಾಪ್ತ ಮಗಳಿದ್ದಾಳೆ…. ಆಕೆಗೆ‌ ಕ್ರಿಮಿನಲ್ ಹಿನ್ನೆಲೆ ಇಲ್ಲದಿರುವುದನ್ನು ಪರಿಗಣಿಸಿ ಜಾಮೀನು ನೀಡಬೇಕು’ ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಸಲ್ಲಿಸಿದ್ದರು.

ಪವಿತ್ರಾ ಗೌಡ ಮಾತ್ರವೇ ಅಲ್ಲದೆ, ಸ್ಟೋನಿ ಬ್ರೂಕ್ ಮಾಲೀಕ ಎ10 ಆರೋಪಿ ವಿನಯ್, ಕಾರು ಚಾಲಕ ಅನುಕುಮಾರ್, ಕೇಶವಮೂರ್ತಿ ಅವರುಗಳು ಸಹ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ಪರವಾಗಿಯೂ ಸಹ ವಕೀಲರು ವಾದ ಮಂಡಿಸಿದರು. ಎಲ್ಲರ ಜಾಮೀನು ಅರ್ಜಿಯ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ