AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜಾಮೀನು ವಿಚಾರಣೆ ಮುಂದೂಡಿಕೆ, ಇಂದು ನಡೆದ ವಾದವೇನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯ ವಿಚಾರಣೆ ಇಂದು (ಸೆಪ್ಟೆಂಬರ್ 27) ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಇಂದು ಪವಿತ್ರಾ ಗೌಡ ಪರ ವಕೀಲರು ಮಂಡಿಸಿದ ವಾದವೇನು?

ಪವಿತ್ರಾ ಗೌಡ ಜಾಮೀನು ವಿಚಾರಣೆ ಮುಂದೂಡಿಕೆ, ಇಂದು ನಡೆದ ವಾದವೇನು?
ರೇಣುಕಾಸ್ವಾಮಿ, ಪವಿತ್ರಾ ಗೌಡ
ಮಂಜುನಾಥ ಸಿ.
|

Updated on: Sep 27, 2024 | 4:28 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಲಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 30ಕ್ಕೆ ನಡೆಯಲಿದೆ. ಇದೇ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯೂ ಸಹ ಸೆಪ್ಟೆಂಬರ್ 30ರಂದೇ ನಡೆಯಲಿದೆ. ಇಂದು ಪವಿತ್ರಾ ಗೌಡ ಪರ ವಕೀಲರಾದ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದರು. ಪವಿತ್ರಾ ಅವರಿಗೆ ಕೊಲ್ಲುವ ಉದ್ದೇಶವೇ ಇರಲಿಲ್ಲ, ಆಕೆ ಈ ಪ್ರಕರಣದಲ್ಲಿ ಷಡ್ಯಂತ್ರವನ್ನೂ ಮಾಡಿರಲಿಲ್ಲ ಎಂದು ಸೆಬಾಸ್ಟಿಯನ್ ವಾದಿಸಿದರು.

ಪವಿತ್ರಾ ಅವರ ಜಾಮೀನು ಅರ್ಜಿಗೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ ಬಳಿಕ ವಾದ ಮಂಡನೆ ಆರಂಭಿಸಿದ ಟಾಮಿ ಸೆಬಾಸ್ಟಿಯನ್, ಮೊದಲಿಗೆ ಆಕ್ಷೇಪಣೆಯಲ್ಲಿನ ಅಂಶಗಳನ್ನು ಓದಿದರು. ರೇಣುಕಾ ಸ್ವಾಮಿಯನ್ನು ಷೆಡ್​ಗೆ ಕರೆದೊಯ್ದು ಇತರರೊಂದಿಗೆ ಸೇರಿ ಹಲ್ಲೆ ನಡೆಸಿದ ಆರೋಪವಿದೆ, ಹಲ್ಲೆಯಿಂದಾಗಿ ರೇಣುಕಾಸ್ವಾಮಿ ಮೃತಪಟ್ಟಿದ್ದಾರೆಂದು ಹೇಳಲಾಗಿದೆ. ತುಂಬಾ ಕ್ರೂರವಾಗಿ ಹಲ್ಲೆ ನಡೆಸಿದ್ದರೆಂದು ಆರೋಪಿಸಲಾಗಿದೆ. ನಾಲ್ಕು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ, ಷೆಡ್ ಒಳಗೆ ಏನಾಯಿತೆಂಬುದನ್ನು ಇಬ್ಬರು ಸಾಕ್ಷಿಗಳು ಹೇಳಿಕೆ ದಾಖಲಿಸಿದ್ದಾರೆ’ ಎಂದು ಪವಿತ್ರಾ ಮೇಲಿನ ಆರೋಪದ ಔಟ್​ಲೈನ್ ನೀಡಿದರು.

ಇದನ್ನೂ ಓದಿ:ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ: ಕಾರಣ?

‘ದರ್ಶನ್ ಜೊತೆ ಪವಿತ್ರಾ ಬಂದು ರೇಣುಕಾ ಸ್ವಾಮಿ ಕಪಾಳಕ್ಕೆ ಹೊಡೆದಳು. ಹೀಗೆಂದು ಸಾಕ್ಷಿ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಕಪಾಳಕ್ಕೆ ಹೊಡೆದಿರುವುದನ್ನು ಬಿಟ್ಟರೆ ಬೇರೆ ಆರೋಪವಿಲ್ಲ, ನಂತರ ಆಕೆಯನ್ನು ಮನೆಗೆ ಡ್ರಾಪ್ ಮಾಡಲಾಗಿದೆ. ಆರೋಪಪಟ್ಟಿಯಲ್ಲಿ ಪದೇ ಪದೇ ಪವಿತ್ರಾ ಗೌಡ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಷಡ್ಯಂತ್ರ ಏನೆಂದು ಸ್ಪಷ್ಟವಾಗಿಲ್ಲ. ಮೃತ ರೇಣುಕಾ ಸ್ವಾಮಿ ಪವಿತ್ರಾ ಗೌಡ ಇಮೇಜ್​ಗೆ ಧಕ್ಕೆ ತಂದಿದ್ದ, ಹೀಗಾಗಿ ಆಕೆಗೆ ಆತನನ್ನು ದೂಷಿಸುವ ಹಕ್ಕಿದೆ, ಆಕೆ ರೇಣುಕಾಸ್ವಾಮಿ ಮಾಡಿರುವ ಕೃತ್ಯವನ್ನು ದರ್ಶನ್, ಪವನ್​ಗೆ ಹೇಳಿದ್ದಾಳೆ. ಆಕೆ ಹೀಗೆ ಹೇಳುವುದರಲ್ಲಿ ತಪ್ಪೇನಿದೆ? ಕಪಾಳಕ್ಕೆ ಹೊಡೆದದ್ದನ್ನು ಬಿಟ್ಟರೆ ಪವಿತ್ರಾ ಗೌಡ ಅವರದ್ದು ಈ ಪ್ರಕರಣದಲ್ಲಿ ಬೇರೆ ಪಾತ್ರವಿಲ್ಲ. ಪವಿತ್ರಾ ಮಾಸ್ಟರ್ ಮೈಂಡ್ ಎಂದು ಹೇಳುವುದು ಸರಿಯಲ್ಲ. ಕೊಲೆಯಲ್ಲಿ ಆಕೆಯ ಯಾವುದೇ ಪಾತ್ರವಿಲ್ಲ. ಆಕೆಗೆ ಕೊಲೆಯ ಉದ್ದೇಶವಿತ್ತೆಂದು ಹೇಳಲಾಗುವುದಿಲ್ಲ, ಹೀಗಾಗಿ ಪವಿತ್ರಾಗೆ ಜಾಮೀನು ನೀಡಬೇಕು ಎಂದು ಟಾಮಿ ಸೆಬಾಸ್ಟಿಯನ್ ನ್ಯಾಯಾಧೀಶರ ಮುಂದೆ ವಾದಿಸಿದರು.

ಇದೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಂಟನೇ ಆರೋಪಿ ರವಿ ಅಲಿಯಾಸ್ ರವಿಶಂಕರ್ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯಿತು. ರವಿಶಂಕರ್ ಪರ ವಾದಿಸಿದ ವಕೀಲ ರಂಗನಾಥ ರೆಡ್ಡಿ, ರೇಣುಕಾಸ್ವಾಮಿ ಅಪಹರಣ, ಕೊಲೆಯಲ್ಲಿ ರವಿಶಂಕರ್ ಪಾತ್ರವಿಲ್ಲ, ಕಾರು ಬಾಡಿಗೆಗೆ ತೆಗೆದುಕೊಂಡಿದ್ದು ಬಿಟ್ಟರೆ ಘಟನೆ ಬಗ್ಗೆ ಗೊತ್ತಿಲ್ಲ, ಅಪಹರಣದ ಷಡ್ಯಂತ್ರದಲ್ಲೂ ಪಾತ್ರವಿಲ್ಲ, ಕೊಲೆಯಲ್ಲೂ ರವಿಶಂಕರ್ ಇಲ್ಲ, ರವಿಶಂಕರ್ ಕಾರು ಚಾಲಕನಾಗಿ ತನ್ನ ಕಾರನ್ನು ಬಾಡಿಗೆಗೆ ನೀಡಿದ್ದ, ಸೆಕ್ಷನ್ 364 ಆಗಲೀ, 302 ಆಗಲೀ ಅನ್ವಯವಾಗಲ್ಲವೆಂದು ವಾದ ಮಂಡಿಸಿದರು. ಇಬ್ಬರೂ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ