AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

Pavitra Gowda Bail Plea: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮಗಳ ಪರೀಕ್ಷೆ ಕಾರಣ ನೀಡಿ 25 ದಿನಗಳ ಜಾಮೀನು ಕೋರಿದ್ದರು. ಆದರೆ, ಕೋರ್ಟ್‌ನ ನಿರಾಕರಣೆಯಿಂದ ಅವರ ಜೈಲುವಾಸ ಮುಂದುವರಿಯಲಿದೆ.

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ
ಪವಿತ್ರಾ
ರಮೇಶ್​ ಎಮ್​.
| Edited By: |

Updated on: Feb 16, 2026 | 1:16 PM

Share

ರೇಣುಕಾ ಸ್ವಾಮಿ (Renukaswamy ) ಕೊಲೆ ಕೇಸ್​​ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್​ಶಿಪ್​​ನಲ್ಲಿ ಇದ್ದ ಬಗ್ಗೆ ಚಾರ್ಜ್​ಶಿಟ್​​ನಲ್ಲಿ ಉಲ್ಲೇಖಿಸಲಾಗಿದೆ. ಪವಿತ್ರಾಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಕಿರುಕುಳ ನೀಡಿದ್ದ. ಈ ವಿಷಯ ದರ್ಶನ್ ಕಿವಿಗೂ ಬಿತ್ತು. ಹೀಗಾಗಿ, ಆತನನ್ನು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆ ಶೆಡ್​​ನಲ್ಲಿ ಆತನ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ವೇಳೆ ಪವಿತ್ರಾ ಗೌಡ, ದರ್ಶನ್ ಕೂಡ ಸ್ಥಳದಲ್ಲಿ ಇದ್ದರು ಮತ್ತು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆಗಿದ್ದಾರೆ. ಪವಿತ್ರಾಗೆ ಇರೋದು ಎಂದರೆ ಮಗಳು ಮಾತ್ರ. ಅವಳಿಗೆ ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್​ ಅಲ್ಲಿ ಮನವಿ ಮಾಡಿದ್ದರು. ಆದರೆ, ಇದನ್ನು ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.

ಇದನ್ನೂ ಓದಿ: ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್

ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?