AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್​; ಜೈಲುವಾಸವೇ ಗತಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಆಗಿದೆ. ಇಂದು (ಅ.14) 57ನೇ ಸಿಸಿಹೆಚ್​ ಕೋರ್ಟ್​ ಆದೇಶ ನೀಡಿದೆ. 120ಕ್ಕೂ ಹೆಚ್ಚು ದಿನಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ ಪವಿತ್ರಾ ಗೌಡ ಅವರ ಜೈಲು ವಾಸ ಮುಂದುವರಿಯಲಿದೆ. ಜಾಮೀನಿಗಾಗಿ ಅವರು ಹೈಕೋರ್ಟ್​ ಮೊರೆ ಹೋಗಲಿದ್ದಾರೆ.

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್​; ಜೈಲುವಾಸವೇ ಗತಿ
ರೇಣುಕಾಸ್ವಾಮಿ, ಪವಿತ್ರಾ ಗೌಡ
Follow us
ಮದನ್​ ಕುಮಾರ್​
|

Updated on:Oct 14, 2024 | 5:58 PM

ಜಾಮೀನು ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದ ಪವಿತ್ರಾ ಗೌಡ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ದರ್ಶನ್​ ಎ2 ಆಗಿದ್ದಾರೆ. ಈ ಕೇಸ್​ನಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅವರ ವಿಚಾರಣೆ ನಡೆದಿದ್ದು, ಇಂದು (ಅ.14) ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ ಆದೇಶ ನೀಡಿದೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಹಾಗಾಗಿ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುವುದು ಅನಿವಾರ್ಯ ಆಗಿದೆ.

ಈಗ ಜಾಮೀನು ಸಿಗದೇ ಇರುವ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಹೈಕೋರ್ಟ್​ ಮೊರೆ ಹೋಗಬೇಕಿದೆ. ಇದೇ ಕೇಸ್​ನ ಇನ್ನೋರ್ವ ಪ್ರಮುಖ ಆರೋಪಿ ಆಗಿರುವ ದರ್ಶನ್​ ಅವರಿಗೂ ಜಾಮೀನು ನಿರಾಕರಣೆ ಮಾಡಲಾಗಿದೆ. ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅವರಿಗೆ ಬೆನ್ನು ನೋವಿನ ಸಮಸ್ಯೆ ಎದುರಾಗಿದೆ. ಜಾಮೀನು ಅರ್ಜಿ ವಜಾ ಆಗಿದ್ದರಿಂದ ಅವರಿಗೆ ಸಂಕಷ್ಟ ಹೆಚ್ಚಾಗಿದೆ.

ಇದನ್ನೂ ಓದಿ: ದರ್ಶನ್​ಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್; ದಾಸನಿಗೆ ಜೈಲೇ ಗತಿ

ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆಯೇ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನ ಮೊದಲ ಆರೋಪಿ ಪವಿತ್ರಾ ಈಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಅವರು ಜೈಲಿನಲ್ಲಿ ಟಿವಿ ನೋಡುತ್ತಿದ್ದರು. ಆದರೆ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಅವರು ಕಣ್ಣೀರು ಹಾಕುತ್ತಾ ಮೌನಕ್ಕೆ ಶರಣಾದರು.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ದರ್ಶನ್​ ಸಹಚರರು ಅಪಹರಿಸಿ ಬೆಂಗಳೂರಿಗೆ ಕರೆತಂದಿದ್ದರು. ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಯಿತು. ಆತನ ಪ್ರಾಣ ಹೋದ ಬಳಿಕ ರಾಜಕಾಲುವೆಗೆ ಶವ ಎಸೆಯಲಾಯಿತು. ಈ ಕೇಸ್​ನಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ದರ್ಶನ್​, ವಿನಯ್​, ಪ್ರದೋಶ್​ ಸೇರಿದಂತೆ ಹಲವರು ಮೇಲೆ ಆರೋಪ ಎದುರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:34 pm, Mon, 14 October 24

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ