Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪವಿತ್ರಾ ಗೌಡ ಸಲುವಾಗಿ ಹರಕೆ ಹೊತ್ತಿದ್ದೇನೆ’: ಮಾಜಿ ಪತಿ ಸಂಜಯ್ ಸಿಂಗ್

ಕೊಲೆ ಆರೋಪಿ ಪವಿತ್ರಾ ಗೌಡ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. 6 ತಿಂಗಳಿಗೂ ಅಧಿಕ ಕಾಲ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಅನುಭವಿಸಿದ್ದಾರೆ. ಈಗ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಟಿವಿ9 ಜೊತೆ ಮಾತನಾಡಿದ್ದಾರೆ. ಪವಿತ್ರಾ ಗೌಡ ಹಾಗೂ ಪುತ್ರಿ ಖುಷಿ ಗೌಡ ಬಗ್ಗೆ ಅವರು ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ.

‘ಪವಿತ್ರಾ ಗೌಡ ಸಲುವಾಗಿ ಹರಕೆ ಹೊತ್ತಿದ್ದೇನೆ’: ಮಾಜಿ ಪತಿ ಸಂಜಯ್ ಸಿಂಗ್
Sanjay Singh Darshan Pavithra Gowda
Follow us
Malatesh Jaggin
| Updated By: ಮದನ್​ ಕುಮಾರ್​

Updated on: Dec 17, 2024 | 3:40 PM

ಪವಿತ್ರಾ ಗೌಡ ಅವರಿಗೆ ಈ ಸಂಕಷ್ಟದ ಕಾಲ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ1 ಆಗಿರುವ ಅವರಿಗೆ ಸದ್ಯಕ್ಕೆ ಜಾಮೀನು ಸಿಕ್ಕಿದೆ. ಇಂದು (ಡಿಸೆಂಬರ್​ 17) ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದಿದ್ದಾರೆ. ಕಾಕತಾಳೀಯ ಎಂಬಂತೆ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಅವರು ಕೂಡ ಬೆಂಗಳೂರಿಗೆ ಬಂದಿದ್ದು, ಕೆಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿರುವುದಕ್ಕೆ ಸಂಜಯ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ಮಾಜಿ ಪತ್ನಿ ಸಲುವಾಗಿ ತಾವು ಹರಕೆ ಹೊತ್ತಿರುವುದಾಗಿ ತಿಳಿಸಿದ್ದಾರೆ.

‘ನಾನು ಬೆಂಗಳೂರಿಗೆ ಬಂದಿರುವುದು ಪವಿತ್ರಾ ಗೌಡ ಮೇಲಿನ ಒಲಿವಿನಿಂದ. ಬೇರೆ ಕೆಲಸದ ಮೇಲೆ ನಾನು ಬಂದಿದ್ದೇನೆ. ಆದರೆ ವಿಮಾನ ನಿಲ್ದಾಣಕ್ಕೆ ಬಂದಾಗ ಪವಿತ್ರಾ ಗೌಡಗೆ ಜಾಮೀನು ಸಿಕ್ಕಿದೆ ಎಂಬುದು ತಿಳಿಯಿತು. ಆ ದೇವರೇ ನನ್ನನ್ನು ಈ ಸಮಯದಲ್ಲಿ ಇಲ್ಲಿಗೆ ಕಳಿಸಿರುವುದು. ಇದನ್ನೆಲ್ಲ ಮಾಡಲು ನನಗೆ ಇಷ್ಟ ಇಲ್ಲ. ಮಾಧ್ಯಮದವರು ನನ್ನನ್ನು ಹುಡುಕಿಕೊಂಡು ಬರುತ್ತಾರೆ’ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

‘ಮಾಜಿ ಪತಿ ಎಂಬ ಶಬ್ದಿ ಬಿಡಿ. ಪತಿ ಅಲ್ವಾ.. ಹಾಗಾಗಿ ಪವಿತ್ರಾ ಗೌಡಗೆ ಜಾಮೀನು ಸಿಕ್ಕಿದ್ದಕ್ಕೆ ಸಂತೋಷ ಆಗುತ್ತದೆ. ಹೇಗಾದರೂ ಅವರು ಹೊರಗೆ ಬರಲಿ ಅಂತ ನಾನು ಪ್ರತಿ ದಿನ ದೇವರಲ್ಲಿ ಬೇಡಿಕೊಳ್ಳುತ್ತಿದ್ದೆ. ಪವಿತ್ರಾ ಗೌಡ ಈ ಕೇಸ್​ನಿಂದ ಶಾಶ್ವತವಾಗಿ ಹೊರಗೆ ಬರಲಿ ಅಂತ ಹರಕೆ ಹೊತ್ತುಕೊಂಡಿದ್ದೇನೆ’ ಎಂದಿದ್ದಾರೆ ಪವಿತ್ರಾ ಮಾಜಿ ಪತಿ ಸಂಜಯ್ ಸಿಂಗ್​.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ

2007ರ ಜುಲೈ ತಿಂಗಳಲ್ಲಿ ಪವಿತ್ರಾ ಗೌಡ ಮತ್ತು ಸಂಜಯ್ ಸಿಂಗ್ ಮದುವೆ ಆಗಿತ್ತು. ಈ ಜೋಡಿಗೆ ಹೆಣ್ಣು ಮಗು ಜನಿಸಿತ್ತು. 2013ರ ಆಗಸ್ಟ್​ ತಿಂಗಳಲ್ಲಿ ಅವರು ವಿಚ್ಛೇದನ ಪಡೆದರು. ‘ಟೈಮಿಂಗ್ ಮತ್ತು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದೇ ನಮ್ಮ ವಿಚ್ಛೇದನ ಆಯಿತು. ಅದನ್ನು ಹೊರತುಪಡಿಸಿ ಬೇರೆ ಏನೂ ಕಾರಣ ಇರಲಿಲ್ಲ’ ಎಂದು ಸಂಜಯ್ ಸಿಂಗ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ