AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ

ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ ಇಡಲಾಗಿದೆ.

ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ರಾಜೇಶ್ ದುಗ್ಗುಮನೆ
|

Updated on: Jun 21, 2024 | 9:45 AM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ (Darshan), ಅವರ ಗೆಳೆತಿ ಪವಿತ್ರಾ ಗೌಡ ಸೇರಿ ಹಲವು ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಿ ದರ್ಶನ್, ಧನರಾಜ್, ವಿನಯ್, ಪ್ರದೋಶ್​ನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ಪವಿತ್ರಾ ಗೌಡ ಸೇರಿ ಅನೇಕರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರು ಜೈಲಲ್ಲಿ ಒಂದು ದಿನ ಕಳೆದಿದ್ದಾರೆ.

ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ ಇಡಲಾಗಿದೆ.

ಗುರುವಾರ (ಜೂನ್ 20) ಜೈಲಿಗೆ ಆರೋಪಿಗಳನ್ನು ತಡವಾಗಿ ಕರೆತರಲಾಗಿದೆ. ಹೀಗಾಗಿ, ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗುತ್ತದೆ. ಹತ್ತು ಗಂಟೆಯ ಬಳಿಕ ಜೈಲಾಧಿಕಾರಿಗಳು ಈ ಸಂಖ್ಯೆಯನ್ನು ನೀಡಲಿದ್ದಾರೆ.

ಪವಿತ್ರಾಗೆ ರಾತ್ರಿವೇಳೆ ನಿದ್ದೆ ಬಂದಿಲ್ಲವಂತೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ರೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದಾರೆ. ಹೊರಗೆ ಅವರು ಹೈಫೈ ಜೀವನ ನಡೆಸುತ್ತಿದ್ದರು. ನಿತ್ಯ ಹಾಯಾದ ಬೆಡ್​ನಲ್ಲಿ ಮಲಗುತ್ತಿದ್ದರು. ಆದರೆ, ಈಗ ಜೀವನ ಹಾಗಿಲ್ಲ.

ಇದನ್ನೂ ಓದಿ: ದರ್ಶನ್ ಜಾತಕದಲ್ಲಿನ ಸಮಸ್ಯೆ ಹದಿಮೂರು ವರ್ಷದ ಹಿಂದೆಯೇ ಎಚ್ಚರಿಸಲಾಗಿತ್ತೆ?

ಜೈಲಿನಲ್ಲಿದ್ದರೂ ಫಿಟ್ನೆಸ್ ಬಗ್ಗೆ ಅವರು ಗಮನ ಹರಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್​ನಲ್ಲಿ ವಾಕಿಂಗ್ ಮಾಡಿದ್ದಾರೆ. ಆ ಬಳಿಕ ಜೈಲಿನ ಸಿಬ್ಬಂದಿ ನೀಡಿದ ಕಾಫಿಯನ್ನು ಪವಿತ್ರಾ ಹೀರಿದ್ದಾರೆ. ಆ ಬಳಿಕ ಅವರು ಸುದ್ದಿ ಪತ್ರಿಕೆ ಓದಿದ್ದಾರೆ. ಜೈಲಿನ ಮೆನುವಿನಂತೆ ಕೈದಿಗಳಿಗೆ ಇಂದು ತಿಂಡಿಗೆ ಉಪ್ಪಿಟ್ಟು ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ