AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ

ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ ಇಡಲಾಗಿದೆ.

ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ರಾಜೇಶ್ ದುಗ್ಗುಮನೆ
|

Updated on: Jun 21, 2024 | 9:45 AM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ (Darshan), ಅವರ ಗೆಳೆತಿ ಪವಿತ್ರಾ ಗೌಡ ಸೇರಿ ಹಲವು ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಿ ದರ್ಶನ್, ಧನರಾಜ್, ವಿನಯ್, ಪ್ರದೋಶ್​ನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ಪವಿತ್ರಾ ಗೌಡ ಸೇರಿ ಅನೇಕರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರು ಜೈಲಲ್ಲಿ ಒಂದು ದಿನ ಕಳೆದಿದ್ದಾರೆ.

ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ ಇಡಲಾಗಿದೆ.

ಗುರುವಾರ (ಜೂನ್ 20) ಜೈಲಿಗೆ ಆರೋಪಿಗಳನ್ನು ತಡವಾಗಿ ಕರೆತರಲಾಗಿದೆ. ಹೀಗಾಗಿ, ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗುತ್ತದೆ. ಹತ್ತು ಗಂಟೆಯ ಬಳಿಕ ಜೈಲಾಧಿಕಾರಿಗಳು ಈ ಸಂಖ್ಯೆಯನ್ನು ನೀಡಲಿದ್ದಾರೆ.

ಪವಿತ್ರಾಗೆ ರಾತ್ರಿವೇಳೆ ನಿದ್ದೆ ಬಂದಿಲ್ಲವಂತೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ರೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದಾರೆ. ಹೊರಗೆ ಅವರು ಹೈಫೈ ಜೀವನ ನಡೆಸುತ್ತಿದ್ದರು. ನಿತ್ಯ ಹಾಯಾದ ಬೆಡ್​ನಲ್ಲಿ ಮಲಗುತ್ತಿದ್ದರು. ಆದರೆ, ಈಗ ಜೀವನ ಹಾಗಿಲ್ಲ.

ಇದನ್ನೂ ಓದಿ: ದರ್ಶನ್ ಜಾತಕದಲ್ಲಿನ ಸಮಸ್ಯೆ ಹದಿಮೂರು ವರ್ಷದ ಹಿಂದೆಯೇ ಎಚ್ಚರಿಸಲಾಗಿತ್ತೆ?

ಜೈಲಿನಲ್ಲಿದ್ದರೂ ಫಿಟ್ನೆಸ್ ಬಗ್ಗೆ ಅವರು ಗಮನ ಹರಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್​ನಲ್ಲಿ ವಾಕಿಂಗ್ ಮಾಡಿದ್ದಾರೆ. ಆ ಬಳಿಕ ಜೈಲಿನ ಸಿಬ್ಬಂದಿ ನೀಡಿದ ಕಾಫಿಯನ್ನು ಪವಿತ್ರಾ ಹೀರಿದ್ದಾರೆ. ಆ ಬಳಿಕ ಅವರು ಸುದ್ದಿ ಪತ್ರಿಕೆ ಓದಿದ್ದಾರೆ. ಜೈಲಿನ ಮೆನುವಿನಂತೆ ಕೈದಿಗಳಿಗೆ ಇಂದು ತಿಂಡಿಗೆ ಉಪ್ಪಿಟ್ಟು ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ