AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ

ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ ಇಡಲಾಗಿದೆ.

ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ರಾಜೇಶ್ ದುಗ್ಗುಮನೆ
|

Updated on: Jun 21, 2024 | 9:45 AM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ (Darshan), ಅವರ ಗೆಳೆತಿ ಪವಿತ್ರಾ ಗೌಡ ಸೇರಿ ಹಲವು ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಿ ದರ್ಶನ್, ಧನರಾಜ್, ವಿನಯ್, ಪ್ರದೋಶ್​ನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ಪವಿತ್ರಾ ಗೌಡ ಸೇರಿ ಅನೇಕರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರು ಜೈಲಲ್ಲಿ ಒಂದು ದಿನ ಕಳೆದಿದ್ದಾರೆ.

ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ ಇಡಲಾಗಿದೆ.

ಗುರುವಾರ (ಜೂನ್ 20) ಜೈಲಿಗೆ ಆರೋಪಿಗಳನ್ನು ತಡವಾಗಿ ಕರೆತರಲಾಗಿದೆ. ಹೀಗಾಗಿ, ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗುತ್ತದೆ. ಹತ್ತು ಗಂಟೆಯ ಬಳಿಕ ಜೈಲಾಧಿಕಾರಿಗಳು ಈ ಸಂಖ್ಯೆಯನ್ನು ನೀಡಲಿದ್ದಾರೆ.

ಪವಿತ್ರಾಗೆ ರಾತ್ರಿವೇಳೆ ನಿದ್ದೆ ಬಂದಿಲ್ಲವಂತೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ರೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದಾರೆ. ಹೊರಗೆ ಅವರು ಹೈಫೈ ಜೀವನ ನಡೆಸುತ್ತಿದ್ದರು. ನಿತ್ಯ ಹಾಯಾದ ಬೆಡ್​ನಲ್ಲಿ ಮಲಗುತ್ತಿದ್ದರು. ಆದರೆ, ಈಗ ಜೀವನ ಹಾಗಿಲ್ಲ.

ಇದನ್ನೂ ಓದಿ: ದರ್ಶನ್ ಜಾತಕದಲ್ಲಿನ ಸಮಸ್ಯೆ ಹದಿಮೂರು ವರ್ಷದ ಹಿಂದೆಯೇ ಎಚ್ಚರಿಸಲಾಗಿತ್ತೆ?

ಜೈಲಿನಲ್ಲಿದ್ದರೂ ಫಿಟ್ನೆಸ್ ಬಗ್ಗೆ ಅವರು ಗಮನ ಹರಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್​ನಲ್ಲಿ ವಾಕಿಂಗ್ ಮಾಡಿದ್ದಾರೆ. ಆ ಬಳಿಕ ಜೈಲಿನ ಸಿಬ್ಬಂದಿ ನೀಡಿದ ಕಾಫಿಯನ್ನು ಪವಿತ್ರಾ ಹೀರಿದ್ದಾರೆ. ಆ ಬಳಿಕ ಅವರು ಸುದ್ದಿ ಪತ್ರಿಕೆ ಓದಿದ್ದಾರೆ. ಜೈಲಿನ ಮೆನುವಿನಂತೆ ಕೈದಿಗಳಿಗೆ ಇಂದು ತಿಂಡಿಗೆ ಉಪ್ಪಿಟ್ಟು ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು