AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳು ಯಾವುವು? ವಿವರಿಸಿದ ವಕೀಲೆ

Pavithra Gowda got bail: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಜಾಮೀನು ದೊರೆತಿದೆ. ಹಿರಿಯ ವಕೀಲ ಸೆಬಾಸ್ಟಿಯನ್ ಅವರು ಪವಿತ್ರಾ ಪರವಾಗಿ ವಾದ ಮಾಡಿದ್ದರು. ಯಾವ ಅಂಶಗಳನ್ನು ಪರಿಗಣಿಸಿ ನ್ಯಾಯಾಲಯವು ಪವಿತ್ರಾ ಅವರಿಗೆ ಜಾಮೀನು ನೀಡಿದೆ ಎಂದು ವಕೀಲರು ವಿವರಿಸಿದ್ದಾರೆ.

ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳು ಯಾವುವು? ವಿವರಿಸಿದ ವಕೀಲೆ
Pavithra-Renuka
ಮಂಜುನಾಥ ಸಿ.
|

Updated on:Dec 13, 2024 | 3:27 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್​ಗೂ ಸಹ ಜಾಮೀನು ದೊರೆತಿದೆ. ದರ್ಶನ್​ ಈಗಾಗಲೇ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ. ಆದರೆ ಪವಿತ್ರಾ ಗೌಡ ಕಳೆದ ಆರು ತಿಂಗಳಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಪವಿತ್ರಾ ಗೌಡ ಪರವಾಗಿ ನ್ಯಾಯಾಲಯದಲ್ಲಿ ವಾದ ಮಾಡಿದ ವಕೀಲರ ತಂಡದ ಸದಸ್ಯೆ ಶಿಲ್ಪಾ ಅವರು ತಮ್ಮ ಕಕ್ಷಿಧಾರೆಗೆ ಜಾಮೀನು ಸಿಗಲು ಕಾರಣವಾದ ಅಂಶಗಳ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ.

ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲರಾದ ಸೆಬಾಸ್ಟಿಯನ್ ಅವರು ವಾದ ಮಂಡಿಸಿದ್ದರು. ವಾದದ ವೇಳೆ ಪವಿತ್ರಾ ಗೌಡ ಸಿಂಗಲ್ ಪೇರೆಂಟ್, ಆಕೆ ಒಬ್ಬ ಮಹಿಳೆ ಎಂಬುದರ ಜೊತೆಗೆ ಪ್ರಕರಣದಲ್ಲಿ ಅವರ ಪಾತ್ರ ಇರಲಿಲ್ಲವೆಂದು. ಅಪಹರಣಕ್ಕಾಗಲಿ ಕೊಲೆಗಾಗಲಿ ಅವರು ಕುಮ್ಮಕ್ಕು ನೀಡಿರಲಿಲ್ಲ ಎಂದು ವಾದಿಸಿದ್ದರು. ಇಂದು ಟಿವಿ9 ಜೊತೆ ಮಾತನಾಡಿದ ವಕೀಲೆ ಶಿಲ್ಪಾ, ‘ಪವಿತ್ರಾ ಅವರು ಸಿಂಗಲ್ ಪೇರೆಂಟ್ ಅಥವಾ ಮಹಿಳೆ ಎಂಬ ಅಂಶವನ್ನು ನ್ಯಾಯಾಲಯ ಪರಿಗಣಿಸಿಲ್ಲ, ಬದಲಿಗೆ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಅವರಿಗೆ ಜಾಮೀನು ನೀಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್​ನಲ್ಲಿ ಸಿಕ್ತು ಜಾಮೀನು

ನ್ಯಾಯಾಲಯವು ಏನೇನು ಷರತ್ತುಗಳನ್ನು ವಿಧಿಸಿದೆ ಎಂಬುದು ನಮಗೆ ಈಗ ತಿಳಿಯುವುದಿಲ್ಲ. ನ್ಯಾಯಾಲಯದ ಆದೇಶ ಬಂದ ನಂತರವೇ ಅದರ ಮಾಹಿತಿ ಲಭ್ಯ ಆಗಲಿದೆ ಎಂದ ವಕೀಲೆ ಶಿಲ್ಪಾ, ‘ಪವಿತ್ರಾ ಗೌಡ ಅವರು ಸೋಮವಾರದಂದು ಬಿಡುಗಡೆ ಆಗುವ ಸಾಧ್ಯತೆ ಇದೆ’ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಪವಿತ್ರಾ ಗೌಡ ಅವರ ತಾಯಿ, ‘ಮಗಳಿಗೆ ಜಾಮೀನು ಸಿಕ್ಕಿರುವುದು ಬಹಳ ಖುಷಿಯಾಗಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Fri, 13 December 24

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ