AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ

Pavithra Gowda: ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಅವರು ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಪವಿತ್ರಾ ಗೌಡ ಪರ ವಕೀಲೆ ಶಿಲ್ಪಾ ಅವರು ಪವಿತ್ರಾ ಗೌಡ ಅವರ ಜಾಮೀನು ಆದೇಶದ ಬಗ್ಗೆ ಮಾತನಾಡಿದ್ದಾರೆ. ಪವಿತ್ರಾ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ ಎಂದಿದ್ದಾರೆ ವಕೀಲೆ ಶಿಲ್ಪಾ.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ
Pavithra Gowda
ಮಂಜುನಾಥ ಸಿ.
|

Updated on: Dec 17, 2024 | 11:58 AM

Share

ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ಶುಕ್ರವಾರವೇ ಅವರಿಗೆ ಜಾಮೀನು ದೊರೆತಿತ್ತು. ಸೋಮವಾರ ಅವರು ಜೈಲಿನಿಂದ ಹೊರಬರಲಿದ್ದಾರೆ ಎನ್ನಲಾಗಿತ್ತು. ಆದರೆ ಸೋಮವಾರ ಆರ್ಡರ್ ಕಾಪಿ ಬರುವುದು ತಡವಾದ ಕಾರಣ ಇಂದು ಮಂಗಳವಾರ ಅವರು ಜೈಲಿನಿಂದ ಹೊರಬಂದಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನಿಗೆ ಸಂಬಂಧಿಸಿದಂತೆ ಅವರ ಪರ ವಕೀಲೆ ಶಿಲ್ಪಾ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

ವಕೀಲೆ ಶಿಲ್ಪೆ ಅವರು ಹೇಳಿರುವಂತೆ, ಪವಿತ್ರಾ ಗೌಡ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ (ಕಾನೂನಿನ ಹೊಸ ತತ್ವ). ಅಂದರೆ ದೇಶದ ನ್ಯಾಯಾಲಯಗಳು ಯಾವುದೇ ಪ್ರಕರಣಗಳ ತೀರ್ಪು ಅಥವಾ ಆದೇಶ ನೀಡುವ ಸಮಯದಲ್ಲಿ ಅದೇ ರೀತಿಯ ಬೇರೆ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುತ್ತವೆ. ಪವಿತ್ರಾ ಗೌಡ ಅವರ ಜಾಮೀನು ಆದೇಶ ಅಂಥಹದ್ದೇ ಒಂದು ವಿಶೇಷ ಆದೇಶ ಆಗಿದೆ. ಅಂದರೆ ಬೇರೆ ಪ್ರಕರಣಗಳ ಆದೇಶಗಳನ್ನು ನೀಡುವಾಗ ಈ ಆದೇಶವನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುವಂಥಹಾ ರಿಪೋರ್ಟೆಬಲ್ ಆರ್ಡರ್ ಇದಾಗಿದೆಯಂತೆ.

ಇದನ್ನೂ ಓದಿ:ಸೆಂಟ್ರಲ್ ಜೈಲಿಂದ ಹೊರಬಂದ ಪವಿತ್ರಾ ಗೌಡ ಮಾಧ್ಯಮದವರೊಂದಿಗೆ ಮಾತಾಡಲು ನಿರಾಕರಿಸಿದರು

ಪವಿತ್ರಾ ಗೌಡ ಪರವಾಗಿ ಹೈಕೋರ್ಟ್​ನಲ್ಲಿ ಹಿರಿಯ ವಕೀಲ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಶಿಲ್ಪಾ ಅವರು ಸಹ ಪವಿತ್ರಾ ಪರ ವಕೀಲರ ತಂಡದ ಸದಸ್ಯೆಯಾಗಿದ್ದಾರೆ. ರೇಣುಕಾ ಸ್ವಾಮಿ ಅಪಹರಣ ಹಾಗೂ ಕೊಲೆಯಲ್ಲಿ ಪವಿತ್ರಾ ಗೌಡ ಅವರ ಹಸ್ತಕ್ಷೇಪ ಇರಲಿಲ್ಲವೆಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಪವಿತ್ರಾ ಅವರ ಮೊಬೈಲ್​ನಿಂದ ಮೂರನೇ ಆರೋಪಿ ಪವನ್, ರೇಣುಕಾ ಸ್ವಾಮಿಗೆ ಮೆಸೇಜ್ ಮಾಡಿದ್ದ ಹಾಗೂ ರೇಣುಕಾ ಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಪವಿತ್ರಾ ಘಟನೆ ನಡೆದ ಸ್ಥಳದಿಂದ ಹೊರಟು ಹೋಗಿದ್ದರು ಎಂದು ವಾದ ಮಂಡಿಸಲಾಗಿತ್ತು.

ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜೈಲಿನಿಂದ ಹೊರಬಂದಿದ್ದು, ಹೊರಬಂದ ಕೂಡಲೇ ಮುನೇಶ್ವರ ಸ್ವಾಮಿಗೆ ನಮಿಸಿದ್ದಾರೆ. ಪವಿತ್ರಾ ಅವರ ತಾಯಿ ಅವರು ಮುನೇಶ್ವರ ದೇವರಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಪವಿತ್ರಾ ಅವರು ಜೈಲಿನಿಂದ ಬಂದ ಕೂಡಲೇ ಹರಕೆ ತೀರಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜುಲೈ 11 ರಂದು ಪವಿತ್ರಾ ಗೌಡ ಅವರ ಬಂಧನ ಆಗಿತ್ತು. ಮೊದಲ 14 ದಿನ ಪೊಲೀಸರ ವಶದಲ್ಲಿದ್ದ ಪವಿತ್ರಾ ಗೌಡ ಆ ನಂತರ ಸುಮಾರು ಆರು ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ