AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ

Pavithra Gowda: ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಅವರು ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಪವಿತ್ರಾ ಗೌಡ ಪರ ವಕೀಲೆ ಶಿಲ್ಪಾ ಅವರು ಪವಿತ್ರಾ ಗೌಡ ಅವರ ಜಾಮೀನು ಆದೇಶದ ಬಗ್ಗೆ ಮಾತನಾಡಿದ್ದಾರೆ. ಪವಿತ್ರಾ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ ಎಂದಿದ್ದಾರೆ ವಕೀಲೆ ಶಿಲ್ಪಾ.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ
Pavithra Gowda
ಮಂಜುನಾಥ ಸಿ.
|

Updated on: Dec 17, 2024 | 11:58 AM

Share

ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ಶುಕ್ರವಾರವೇ ಅವರಿಗೆ ಜಾಮೀನು ದೊರೆತಿತ್ತು. ಸೋಮವಾರ ಅವರು ಜೈಲಿನಿಂದ ಹೊರಬರಲಿದ್ದಾರೆ ಎನ್ನಲಾಗಿತ್ತು. ಆದರೆ ಸೋಮವಾರ ಆರ್ಡರ್ ಕಾಪಿ ಬರುವುದು ತಡವಾದ ಕಾರಣ ಇಂದು ಮಂಗಳವಾರ ಅವರು ಜೈಲಿನಿಂದ ಹೊರಬಂದಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನಿಗೆ ಸಂಬಂಧಿಸಿದಂತೆ ಅವರ ಪರ ವಕೀಲೆ ಶಿಲ್ಪಾ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

ವಕೀಲೆ ಶಿಲ್ಪೆ ಅವರು ಹೇಳಿರುವಂತೆ, ಪವಿತ್ರಾ ಗೌಡ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ (ಕಾನೂನಿನ ಹೊಸ ತತ್ವ). ಅಂದರೆ ದೇಶದ ನ್ಯಾಯಾಲಯಗಳು ಯಾವುದೇ ಪ್ರಕರಣಗಳ ತೀರ್ಪು ಅಥವಾ ಆದೇಶ ನೀಡುವ ಸಮಯದಲ್ಲಿ ಅದೇ ರೀತಿಯ ಬೇರೆ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುತ್ತವೆ. ಪವಿತ್ರಾ ಗೌಡ ಅವರ ಜಾಮೀನು ಆದೇಶ ಅಂಥಹದ್ದೇ ಒಂದು ವಿಶೇಷ ಆದೇಶ ಆಗಿದೆ. ಅಂದರೆ ಬೇರೆ ಪ್ರಕರಣಗಳ ಆದೇಶಗಳನ್ನು ನೀಡುವಾಗ ಈ ಆದೇಶವನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುವಂಥಹಾ ರಿಪೋರ್ಟೆಬಲ್ ಆರ್ಡರ್ ಇದಾಗಿದೆಯಂತೆ.

ಇದನ್ನೂ ಓದಿ:ಸೆಂಟ್ರಲ್ ಜೈಲಿಂದ ಹೊರಬಂದ ಪವಿತ್ರಾ ಗೌಡ ಮಾಧ್ಯಮದವರೊಂದಿಗೆ ಮಾತಾಡಲು ನಿರಾಕರಿಸಿದರು

ಪವಿತ್ರಾ ಗೌಡ ಪರವಾಗಿ ಹೈಕೋರ್ಟ್​ನಲ್ಲಿ ಹಿರಿಯ ವಕೀಲ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಶಿಲ್ಪಾ ಅವರು ಸಹ ಪವಿತ್ರಾ ಪರ ವಕೀಲರ ತಂಡದ ಸದಸ್ಯೆಯಾಗಿದ್ದಾರೆ. ರೇಣುಕಾ ಸ್ವಾಮಿ ಅಪಹರಣ ಹಾಗೂ ಕೊಲೆಯಲ್ಲಿ ಪವಿತ್ರಾ ಗೌಡ ಅವರ ಹಸ್ತಕ್ಷೇಪ ಇರಲಿಲ್ಲವೆಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಪವಿತ್ರಾ ಅವರ ಮೊಬೈಲ್​ನಿಂದ ಮೂರನೇ ಆರೋಪಿ ಪವನ್, ರೇಣುಕಾ ಸ್ವಾಮಿಗೆ ಮೆಸೇಜ್ ಮಾಡಿದ್ದ ಹಾಗೂ ರೇಣುಕಾ ಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಪವಿತ್ರಾ ಘಟನೆ ನಡೆದ ಸ್ಥಳದಿಂದ ಹೊರಟು ಹೋಗಿದ್ದರು ಎಂದು ವಾದ ಮಂಡಿಸಲಾಗಿತ್ತು.

ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜೈಲಿನಿಂದ ಹೊರಬಂದಿದ್ದು, ಹೊರಬಂದ ಕೂಡಲೇ ಮುನೇಶ್ವರ ಸ್ವಾಮಿಗೆ ನಮಿಸಿದ್ದಾರೆ. ಪವಿತ್ರಾ ಅವರ ತಾಯಿ ಅವರು ಮುನೇಶ್ವರ ದೇವರಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಪವಿತ್ರಾ ಅವರು ಜೈಲಿನಿಂದ ಬಂದ ಕೂಡಲೇ ಹರಕೆ ತೀರಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜುಲೈ 11 ರಂದು ಪವಿತ್ರಾ ಗೌಡ ಅವರ ಬಂಧನ ಆಗಿತ್ತು. ಮೊದಲ 14 ದಿನ ಪೊಲೀಸರ ವಶದಲ್ಲಿದ್ದ ಪವಿತ್ರಾ ಗೌಡ ಆ ನಂತರ ಸುಮಾರು ಆರು ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು