AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ

Pavithra Gowda: ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಅವರು ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಪವಿತ್ರಾ ಗೌಡ ಪರ ವಕೀಲೆ ಶಿಲ್ಪಾ ಅವರು ಪವಿತ್ರಾ ಗೌಡ ಅವರ ಜಾಮೀನು ಆದೇಶದ ಬಗ್ಗೆ ಮಾತನಾಡಿದ್ದಾರೆ. ಪವಿತ್ರಾ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ ಎಂದಿದ್ದಾರೆ ವಕೀಲೆ ಶಿಲ್ಪಾ.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ
Pavithra Gowda
ಮಂಜುನಾಥ ಸಿ.
|

Updated on: Dec 17, 2024 | 11:58 AM

Share

ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ಶುಕ್ರವಾರವೇ ಅವರಿಗೆ ಜಾಮೀನು ದೊರೆತಿತ್ತು. ಸೋಮವಾರ ಅವರು ಜೈಲಿನಿಂದ ಹೊರಬರಲಿದ್ದಾರೆ ಎನ್ನಲಾಗಿತ್ತು. ಆದರೆ ಸೋಮವಾರ ಆರ್ಡರ್ ಕಾಪಿ ಬರುವುದು ತಡವಾದ ಕಾರಣ ಇಂದು ಮಂಗಳವಾರ ಅವರು ಜೈಲಿನಿಂದ ಹೊರಬಂದಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನಿಗೆ ಸಂಬಂಧಿಸಿದಂತೆ ಅವರ ಪರ ವಕೀಲೆ ಶಿಲ್ಪಾ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

ವಕೀಲೆ ಶಿಲ್ಪೆ ಅವರು ಹೇಳಿರುವಂತೆ, ಪವಿತ್ರಾ ಗೌಡ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ (ಕಾನೂನಿನ ಹೊಸ ತತ್ವ). ಅಂದರೆ ದೇಶದ ನ್ಯಾಯಾಲಯಗಳು ಯಾವುದೇ ಪ್ರಕರಣಗಳ ತೀರ್ಪು ಅಥವಾ ಆದೇಶ ನೀಡುವ ಸಮಯದಲ್ಲಿ ಅದೇ ರೀತಿಯ ಬೇರೆ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುತ್ತವೆ. ಪವಿತ್ರಾ ಗೌಡ ಅವರ ಜಾಮೀನು ಆದೇಶ ಅಂಥಹದ್ದೇ ಒಂದು ವಿಶೇಷ ಆದೇಶ ಆಗಿದೆ. ಅಂದರೆ ಬೇರೆ ಪ್ರಕರಣಗಳ ಆದೇಶಗಳನ್ನು ನೀಡುವಾಗ ಈ ಆದೇಶವನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುವಂಥಹಾ ರಿಪೋರ್ಟೆಬಲ್ ಆರ್ಡರ್ ಇದಾಗಿದೆಯಂತೆ.

ಇದನ್ನೂ ಓದಿ:ಸೆಂಟ್ರಲ್ ಜೈಲಿಂದ ಹೊರಬಂದ ಪವಿತ್ರಾ ಗೌಡ ಮಾಧ್ಯಮದವರೊಂದಿಗೆ ಮಾತಾಡಲು ನಿರಾಕರಿಸಿದರು

ಪವಿತ್ರಾ ಗೌಡ ಪರವಾಗಿ ಹೈಕೋರ್ಟ್​ನಲ್ಲಿ ಹಿರಿಯ ವಕೀಲ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಶಿಲ್ಪಾ ಅವರು ಸಹ ಪವಿತ್ರಾ ಪರ ವಕೀಲರ ತಂಡದ ಸದಸ್ಯೆಯಾಗಿದ್ದಾರೆ. ರೇಣುಕಾ ಸ್ವಾಮಿ ಅಪಹರಣ ಹಾಗೂ ಕೊಲೆಯಲ್ಲಿ ಪವಿತ್ರಾ ಗೌಡ ಅವರ ಹಸ್ತಕ್ಷೇಪ ಇರಲಿಲ್ಲವೆಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಪವಿತ್ರಾ ಅವರ ಮೊಬೈಲ್​ನಿಂದ ಮೂರನೇ ಆರೋಪಿ ಪವನ್, ರೇಣುಕಾ ಸ್ವಾಮಿಗೆ ಮೆಸೇಜ್ ಮಾಡಿದ್ದ ಹಾಗೂ ರೇಣುಕಾ ಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಪವಿತ್ರಾ ಘಟನೆ ನಡೆದ ಸ್ಥಳದಿಂದ ಹೊರಟು ಹೋಗಿದ್ದರು ಎಂದು ವಾದ ಮಂಡಿಸಲಾಗಿತ್ತು.

ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜೈಲಿನಿಂದ ಹೊರಬಂದಿದ್ದು, ಹೊರಬಂದ ಕೂಡಲೇ ಮುನೇಶ್ವರ ಸ್ವಾಮಿಗೆ ನಮಿಸಿದ್ದಾರೆ. ಪವಿತ್ರಾ ಅವರ ತಾಯಿ ಅವರು ಮುನೇಶ್ವರ ದೇವರಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಪವಿತ್ರಾ ಅವರು ಜೈಲಿನಿಂದ ಬಂದ ಕೂಡಲೇ ಹರಕೆ ತೀರಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜುಲೈ 11 ರಂದು ಪವಿತ್ರಾ ಗೌಡ ಅವರ ಬಂಧನ ಆಗಿತ್ತು. ಮೊದಲ 14 ದಿನ ಪೊಲೀಸರ ವಶದಲ್ಲಿದ್ದ ಪವಿತ್ರಾ ಗೌಡ ಆ ನಂತರ ಸುಮಾರು ಆರು ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!