Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ

Pavithra Gowda: ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಅವರು ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಪವಿತ್ರಾ ಗೌಡ ಪರ ವಕೀಲೆ ಶಿಲ್ಪಾ ಅವರು ಪವಿತ್ರಾ ಗೌಡ ಅವರ ಜಾಮೀನು ಆದೇಶದ ಬಗ್ಗೆ ಮಾತನಾಡಿದ್ದಾರೆ. ಪವಿತ್ರಾ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ ಎಂದಿದ್ದಾರೆ ವಕೀಲೆ ಶಿಲ್ಪಾ.

ಪವಿತ್ರಾ ಗೌಡ ಜಾಮೀನು ಆದೇಶದ ಮಹತ್ವ ವಿವರಿಸಿದ ವಕೀಲೆ ಶಿಲ್ಪಾ
Pavithra Gowda
Follow us
ಮಂಜುನಾಥ ಸಿ.
|

Updated on: Dec 17, 2024 | 11:58 AM

ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ಶುಕ್ರವಾರವೇ ಅವರಿಗೆ ಜಾಮೀನು ದೊರೆತಿತ್ತು. ಸೋಮವಾರ ಅವರು ಜೈಲಿನಿಂದ ಹೊರಬರಲಿದ್ದಾರೆ ಎನ್ನಲಾಗಿತ್ತು. ಆದರೆ ಸೋಮವಾರ ಆರ್ಡರ್ ಕಾಪಿ ಬರುವುದು ತಡವಾದ ಕಾರಣ ಇಂದು ಮಂಗಳವಾರ ಅವರು ಜೈಲಿನಿಂದ ಹೊರಬಂದಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನಿಗೆ ಸಂಬಂಧಿಸಿದಂತೆ ಅವರ ಪರ ವಕೀಲೆ ಶಿಲ್ಪಾ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

ವಕೀಲೆ ಶಿಲ್ಪೆ ಅವರು ಹೇಳಿರುವಂತೆ, ಪವಿತ್ರಾ ಗೌಡ ಅವರ ಜಾಮೀನು ಆದೇಶ ‘ರಿಪೋರ್ಟೆಬಲ್ ಆರ್ಡರ್’ (ಕಾನೂನಿನ ಹೊಸ ತತ್ವ). ಅಂದರೆ ದೇಶದ ನ್ಯಾಯಾಲಯಗಳು ಯಾವುದೇ ಪ್ರಕರಣಗಳ ತೀರ್ಪು ಅಥವಾ ಆದೇಶ ನೀಡುವ ಸಮಯದಲ್ಲಿ ಅದೇ ರೀತಿಯ ಬೇರೆ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುತ್ತವೆ. ಪವಿತ್ರಾ ಗೌಡ ಅವರ ಜಾಮೀನು ಆದೇಶ ಅಂಥಹದ್ದೇ ಒಂದು ವಿಶೇಷ ಆದೇಶ ಆಗಿದೆ. ಅಂದರೆ ಬೇರೆ ಪ್ರಕರಣಗಳ ಆದೇಶಗಳನ್ನು ನೀಡುವಾಗ ಈ ಆದೇಶವನ್ನು ಗಣನೆಗೆ ತೆಗೆದುಕೊಂಡು ಆದೇಶ ನೀಡುವಂಥಹಾ ರಿಪೋರ್ಟೆಬಲ್ ಆರ್ಡರ್ ಇದಾಗಿದೆಯಂತೆ.

ಇದನ್ನೂ ಓದಿ:ಸೆಂಟ್ರಲ್ ಜೈಲಿಂದ ಹೊರಬಂದ ಪವಿತ್ರಾ ಗೌಡ ಮಾಧ್ಯಮದವರೊಂದಿಗೆ ಮಾತಾಡಲು ನಿರಾಕರಿಸಿದರು

ಪವಿತ್ರಾ ಗೌಡ ಪರವಾಗಿ ಹೈಕೋರ್ಟ್​ನಲ್ಲಿ ಹಿರಿಯ ವಕೀಲ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಶಿಲ್ಪಾ ಅವರು ಸಹ ಪವಿತ್ರಾ ಪರ ವಕೀಲರ ತಂಡದ ಸದಸ್ಯೆಯಾಗಿದ್ದಾರೆ. ರೇಣುಕಾ ಸ್ವಾಮಿ ಅಪಹರಣ ಹಾಗೂ ಕೊಲೆಯಲ್ಲಿ ಪವಿತ್ರಾ ಗೌಡ ಅವರ ಹಸ್ತಕ್ಷೇಪ ಇರಲಿಲ್ಲವೆಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಪವಿತ್ರಾ ಅವರ ಮೊಬೈಲ್​ನಿಂದ ಮೂರನೇ ಆರೋಪಿ ಪವನ್, ರೇಣುಕಾ ಸ್ವಾಮಿಗೆ ಮೆಸೇಜ್ ಮಾಡಿದ್ದ ಹಾಗೂ ರೇಣುಕಾ ಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಪವಿತ್ರಾ ಘಟನೆ ನಡೆದ ಸ್ಥಳದಿಂದ ಹೊರಟು ಹೋಗಿದ್ದರು ಎಂದು ವಾದ ಮಂಡಿಸಲಾಗಿತ್ತು.

ಪವಿತ್ರಾ ಗೌಡ ಇಂದು (ಡಿಸೆಂಬರ್ 17) ಜೈಲಿನಿಂದ ಹೊರಬಂದಿದ್ದು, ಹೊರಬಂದ ಕೂಡಲೇ ಮುನೇಶ್ವರ ಸ್ವಾಮಿಗೆ ನಮಿಸಿದ್ದಾರೆ. ಪವಿತ್ರಾ ಅವರ ತಾಯಿ ಅವರು ಮುನೇಶ್ವರ ದೇವರಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಪವಿತ್ರಾ ಅವರು ಜೈಲಿನಿಂದ ಬಂದ ಕೂಡಲೇ ಹರಕೆ ತೀರಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜುಲೈ 11 ರಂದು ಪವಿತ್ರಾ ಗೌಡ ಅವರ ಬಂಧನ ಆಗಿತ್ತು. ಮೊದಲ 14 ದಿನ ಪೊಲೀಸರ ವಶದಲ್ಲಿದ್ದ ಪವಿತ್ರಾ ಗೌಡ ಆ ನಂತರ ಸುಮಾರು ಆರು ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ