AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿಯ ಈ ವಿಶೇಷ ದಿನದಂದು ರೆಡ್ ಕಾರ್ಪೆಟ್ ಸ್ಟುಡಿಯೋ ರೀ ಲಾಂಚ್ ಮಾಡಲಿದ್ದಾರೆ ಪವಿತ್ರಾ ಗೌಡ

ಪವಿತ್ರಾ ಗೌಡ ರವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನಂತರ ಜೈಲುವಾಸ ಅನುಭವಿಸಿದ್ದಾರೆ. ಈಗ 'ರೆಡ್ ಕಾರ್ಪೆಟ್ ಸ್ಟುಡಿಯೋ'ವನ್ನು ಫೆಬ್ರವರಿ 14 ರಂದು ರೀ ಲಾಂಚ್ ಮಾಡುತ್ತಿದ್ದಾರೆ. ಕೆಂಪು ಥೀಮ್‌ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಫೆಬ್ರವರಿಯ ಈ ವಿಶೇಷ ದಿನದಂದು ರೆಡ್ ಕಾರ್ಪೆಟ್ ಸ್ಟುಡಿಯೋ ರೀ ಲಾಂಚ್ ಮಾಡಲಿದ್ದಾರೆ ಪವಿತ್ರಾ ಗೌಡ
ಪವಿತ್ರಾ ಗೌಡ
TV9 Web
| Edited By: |

Updated on: Feb 12, 2025 | 7:27 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಸಾಕಷ್ಟು ತೊಂದರೆ ಅನುಭವಿಸಿ ಬಂದಿದ್ದಾರೆ ಪವಿತ್ರಾಗೌಡ. ಅವರು ಬರೋಬ್ಬರಿ 6 ತಿಂಗಳು ಜೈಲಿನಲ್ಲಿ ಇರಬೇಕಾಗಿ ಬಂದಿತ್ತು. ಈಗ ಎಲ್ಲವನ್ನೂ ಮರೆತು ಅವರು ಮುಂದೆ ಬಂದಿದ್ದಾರೆ. ಮತ್ತೆ ಸಾಮಾನ್ಯ ಜೀವನ ನಡೆಸೋ ತವಕದಲ್ಲಿ ಅವರಿದ್ದಾರೆ. ಈಗ ಅವರು ‘ರೆಡ್ ಕಾರ್ಪೆಟ್ ಸ್ಟುಡಿಯೋ’ ಲಾಂಚ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಫೆಬ್ರವರಿಯ ವಿಶೇಷ ದಿನದಂದು ಇದನ್ನು ರೀ ಲಾಂಚ್ ಮಾಡಲು ಪ್ಲ್ಯಾನ್ ನಡೆದಿದೆ.

ಪವಿತ್ರಾ ಗೌಡ ಅವರು ಈ ಮೊದಲೇ ‘ರೆಡ್ ಕಾರ್ಪೆಟ್’ ಸ್ಟುಡಿಯೋನ ಹೊಂದಿದ್ದರು. ಆದರೆ, ಕಾರಣಾಂತರಗಳಿಂದ ಇದು ಸರಿಯಾಗಿ ಕಾರ್ಯ ನಿರ್ವಹಿಸಿರಲಿಲ್ಲ. ಪವಿತ್ರಾ ಜೈಲಿನಲ್ಲಿ ಇದ್ದಾಗ ಇದನ್ನು ಸರಿಯಾಗಿ ನೋಡಿಕೊಳ್ಳುವವರು ಇರಲಿಲ್ಲ ಎನ್ನಲಾಗಿದೆ. ಈಗ ಫೆಬ್ರವರಿ 14ರಂದು ಇದನ್ನು ಅವರು ರೀಲಾಂಚ್ ಮಾಡುತ್ತಿದ್ದಾರೆ.

ಕೆಂಪು ಥೀಮ್

ಫೆಬ್ರವರಿ 14 ಎಂದರೆ ಪ್ರೇಮಿಗಳ ದಿನ. ಈ ವಿಶೇಷ ದಿನವೇ ಈ ಸ್ಟುಡಿಯೋ ರೀ ಲಾಂಚ್ ಮಾಡಲಿದ್ದಾರೆ. ರೆಡ್ ಥೀಮ್​ನಲ್ಲಿ ‘ರೆಡ್ ಕಾರ್ಪೆಟ್ ಸ್ಟುಡಿಯೋ’ ರೀ ಲಾಂಚ್ ಮಾಡಲಾಗುತ್ತಿದೆ ಅನ್ನೋದು ವಿಶೇಷ. ಈಗಾಗಲೇ ಇದರ ಪ್ರಮೋಷನ್ ಭರ್ಜರಿಯಾಗಿ ಸಾಗಿದೆ.

ಫೆಬ್ರವರಿ 16 ಅಂದುಕೊಂಡಿದ್ರು!

ದರ್ಶನ್ ಹಾಗೂ ಪವಿತ್ರಾ ಮಧ್ಯೆ ಒಳ್ಳೆಯ ಆಪ್ತತೆ ಇತ್ತು. ಈಗ ಇಬ್ಬರ ನಡುವೆ ಯಾವ ರೀತಿಯ ಒಡನಾಟ ಇದೆ ಎಂಬ ಬಗ್ಗೆ ಯಾರಿಗೂ ಸ್ಪಷ್ಟನೆ ಇಲ್ಲ. ಫೆಬ್ರವರಿ 16ರಂದು ದರ್ಶನ್ ಜನ್ಮದಿನ. ಆ ದಿನವೇ ಸ್ಟುಡಿಯೋ ರೀ ಲಾಂಚ್ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅವರ ಜನ್ಮದಿನಕ್ಕೂ ಎರಡು ದಿನ ಮೊದಲು ಈ ಸ್ಟುಡಿಯೋ ಲಾಂಚ್ ಆಗುತ್ತಿದೆ.

ಇದನ್ನೂ ಓದಿ: ದರ್ಶನ್ ಹುಟ್ಟುಹಬ್ಬಕ್ಕೆ ಬರಲಿದೆ ‘ಡೆವಿಲ್’ ಟೀಸರ್; ಸಿಹಿ ಸುದ್ದಿ ನೀಡಿದ ದಾಸ

ಸೆಲೆಬ್ರಿಟಿಗಳು

ಈಗಾಗಲೇ ಅನೇಕ ಸೆಲೆಬ್ರಿಟಿಗಳು ಹಾಗೂ ಸೆಲೆಬ್ರಿಟಿಗಳ ಮಕ್ಕಳ ಮೂಲಕ ‘ರೆಡ್ ಕಾರ್ಪೆಟ್ ಸ್ಟುಡಿಯೋ’ನ ಪ್ರಚಾರ ಮಾಡುವ ಕೆಲಸವನ್ನು ಪವಿತ್ರಾ ಮಾಡುತ್ತಿದ್ದಾರೆ. ರೀ ಲಾಂಚ್ ದಿನ ಯಾರೆಲ್ಲಾ ಆಗಮಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್