ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪವಿತ್ರಾ ಗೌಡ ಜೈಲು ಸೇರಿದ್ದು, ಅಲ್ಲಿನ ವಾತಾವರಣ ಅವರಿಗೆ ಕಷ್ಟವಾಗುತ್ತಿದೆ. ಹೆಚ್ಚು ಉಪ್ಪು, ಖಾರ ಇಲ್ಲದ ಜೈಲಿನ ಆಹಾರ ಸೇವಿಸುವುದು ಪವಿತ್ರಾ ಗೌಡಗೆ ಕಷ್ಟ ಆಗಿದೆ. ಚಾಪೆಯಲ್ಲಿ ಮಲಗುವುದು ಅವರಿಗೆ ಸಾಧ್ಯವಾಗುತ್ತಿಲ್ಲ. ಸೊಳ್ಳೆ ಕಾಟ ಸಹ ಇರುವುದರಿಂದ ಪವಿತ್ರಾ ಗೌಡ ಮತ್ತಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಅವರು ಮತ್ತೆ ಮತ್ತೆ ಎಚ್ಚರಕೊಳ್ಳುತ್ತಿದ್ದರು.

ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು
ಪವಿತ್ರಾ ಗೌಡ
Follow us
| Updated By: ಮದನ್​ ಕುಮಾರ್​

Updated on: Jun 24, 2024 | 9:36 AM

ಸಖತ್​ ಹೈಫೈ ಜೀವನ ನಡೆಸುತ್ತಿದ್ದ ನಟಿ ಪವಿತ್ರಾ ಗೌಡ (Pavithra Gowda) ಅವರು ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಕೊಲೆ ಕೇಸ್​ನಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದು, ಪರಪ್ಪನ ಅಗ್ರಹಾರದಲ್ಲಿ (Parappana Agrahara) ಜೈಲು ವಾಸ ಅನುಭವಿಸುತ್ತಿದ್ದಾರೆ. ಇಷ್ಟು ದಿನ ದರ್ಶನ್​ ಸ್ನೇಹಿತೆಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಪವಿತ್ರಾ ಗೌಡಗೆ ಜೈಲಿನ ವಾತಾವರಣ ನರಕದಂತೆ ಆಗಿದೆ. ಸರಿಯಾಗಿ ಊಟ ಸೇರದೇ, ನಿದ್ರೆ ಬಾರದೇ ಅವರು ಒದ್ದಾಡುತ್ತಿದ್ದಾರೆ. ಮಂಕಾಗಿ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ (Darshan) ಕೂಡ ಈಗ ಜೈಲಿನಲ್ಲಿದ್ದಾರೆ.

ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿಕೊಂಡು ಬಂದು, ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್​, ಪವಿತ್ರಾ ಗೌಡ ಹಾಗೂ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೊರಗಡೆ ಇದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದ ಅವರಿಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ.

ಸಹಕೈದಿಗಳ ಜೊತೆ ಪವಿತ್ರಾ ಗೌಡ ಬೆರೆಯುತ್ತಿಲ್ಲ. ಅಲ್ಲದೇ ಅವರು ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇಂದು (ಜೂನ್​ 24) ಬೆಳಗ್ಗೆ ಬೇಗ ಎದ್ದ ಅವರು ಕಾಫಿ ಕುಡಿದು, ಪೇಪರ್ ಓದಿದ್ದಾರೆ. ನಿನ್ನೆ ರಾತ್ರಿ ಜೈಲಿನ ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆ ಊಟವನ್ನು ಅವರು ಒಲ್ಲದ ಮನಸ್ಸಿನಿಂದ ಸೇವಿಸಿದ್ದಾರೆ ಎನ್ನಲಾಗಿದೆ.

ಸರಿಯಾಗಿ ಉಪ್ಪು ಖಾರ ಇಲ್ಲದ ಜೈಲಿನ ಊಟ ಸೇವಿಸುವುದು ಪವಿತ್ರಾ ಗೌಡ ಅವರಿಗೆ ಸಖತ್​ ಕಷ್ಟ ಆಗಿದೆ. ಅಷ್ಟೇ ಅಲ್ಲದೇ, ಚಾಪೆಯಲ್ಲಿ ಮಲಗಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದರ ಜೊತೆಗೆ ಸೊಳ್ಳೆ ಕಾಟ ಕೂಡ ಇರುವುದರಿಂದ ಅವರು ಇನ್ನಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಕೂಡ ಅವರು ಪದೇ ಪದೇ ಎಚ್ಚರಕೊಳ್ಳುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದರ್ಶನ್​ ನ್ಯಾಯಾಂಗ ಬಂಧನ: ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದ ರೇಣುಕಾಸ್ವಾಮಿ ತಂದೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣ ದೇಶಾದ್ಯಂತ ಸುದ್ದಿ ಆಗಿದೆ. ಸ್ಟಾರ್​ ನಟ ದರ್ಶನ್​ ಮೇಲೆ ಕೊಲೆ ಆರೋಪ ಬಂದಿರುವುದರಿಂದ ಎಲ್ಲರ ಕಣ್ಣು ಈ ಕೇಸ್​ನ ಮೇಲಿದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ. ದರ್ಶನ್​ ಮೇಲೆ ಗಂಭೀರ ಆರೋಪ ಎದುರಾದ ಕಾರಣ ಅವರ ಆಪ್ತರಿಗೆ ಬೇಸರ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ