AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777’ ಎಂದು ಟ್ಯಾಟೂ ಹಾಕಿಸಿಕೊಂಡ ಪವಿತ್ರಾ ಗೌಡ; ಇದಕ್ಕಿದೆ ದರ್ಶನ್ ಲಿಂಕ್?

ನೀತು ಟ್ಯಾಟೂ ಸ್ಟುಡಿಯೋಗೆ ಬಂದಿದ್ದು ನಟಿ ಪವಿತ್ರಾ ಗೌಡ. ನಟನೆಯಿಂದ ದೂರವೇ ಇದ್ದು, ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಪವಿತ್ರಾ. ಈಗ ಅವರು ವಿಶೇಷ ಟ್ಯಾಟೂ ಹಾಕಿಸಿಕೊಂಡಿದ್ದಾರೆ. 777 ಎಂದು ಟ್ಯಾಟೂ ಬರೆಸಿಕೊಂಡಿದ್ದಾರೆ. ಸಣ್ಣ ಹಾರ್ಟ್ ಮಾರ್ಕ್ ಕೂಡ ಇದೆ.

‘777’ ಎಂದು ಟ್ಯಾಟೂ ಹಾಕಿಸಿಕೊಂಡ ಪವಿತ್ರಾ ಗೌಡ; ಇದಕ್ಕಿದೆ ದರ್ಶನ್ ಲಿಂಕ್?
ಪವಿತ್ರಾ
TV9 Web
| Edited By: |

Updated on:Mar 13, 2024 | 8:53 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಮೂಲಕ ನೀತು ವನಜಾಕ್ಷಿ ಫೇಮಸ್ ಆಗಿದ್ದಾರೆ. ತೃತೀಯಲಿಂಗಿಗಳ ಬಗ್ಗೆ ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಬದಲಿಸುವ ರೀತಿಯಲ್ಲಿ ಅವರು ಬದುಕಿ ತೋರಿಸುತ್ತಿದ್ದಾರೆ. ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಅವರು ತಮ್ಮದೇ ಆದ ಟ್ಯಾಟೂ ಸ್ಟುಡಿಯೋ ಹೊಂದಿದ್ದಾರೆ. ಜೊತೆಗೆ ಹೋಟೆಲ್ ಉದ್ಯಮ ಕೂಡ ಇದೆ. ಈಗ ಅವರ ಟ್ಯಾಟೂ ಸ್ಟುಡಿಯೋಗೆ ವಿಶೇಷ ಅತಿಥಿಯ ಆಗಮನ ಆಗಿದೆ. ಈ ವಿಡಿಯೋನ ನೀತು ಹಂಚಿಕೊಂಡಿದ್ದಾರೆ.

ನೀತು ಟ್ಯಾಟೂ ಸ್ಟುಡಿಯೋಗೆ ಬಂದಿದ್ದು ನಟಿ ಪವಿತ್ರಾ ಗೌಡ. ನಟನೆಯಿಂದ ದೂರವೇ ಇದ್ದು, ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಪವಿತ್ರಾ. ಈಗ ಅವರು ವಿಶೇಷ ಟ್ಯಾಟೂ ಹಾಕಿಸಿಕೊಂಡಿದ್ದಾರೆ. 777 ಎಂದು ಟ್ಯಾಟೂ ಬರೆಸಿಕೊಂಡಿದ್ದಾರೆ. ಸಣ್ಣ ಹಾರ್ಟ್ ಮಾರ್ಕ್ ಕೂಡ ಇದೆ. ಇದಕ್ಕೆ ಫ್ಯಾನ್ಸ್ ನಾನಾ ಅರ್ಥ ಕಲ್ಪಿಸುತ್ತಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಟ್ಯಾಟೂ ಅರ್ಥ ಏನು ಇರಬಹುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ವಿಜಯಲಕ್ಷ್ಮಿ ದರ್ಶನ್​ಗೆ ಪ್ರತಿಕ್ರಿಯೆ: ಹಳೆ ವಿಷಯ ಕೆದಕಿದ ಪವಿತ್ರಾ ಗೌಡ

ನಟ ದರ್ಶನ್ ಜೊತೆ ಪವಿತ್ರಾ ಗೌಡ ಅವರು ಆಪ್ತತೆ ಬೆಳೆಸಿಕೊಂಡಿದ್ದಾರೆ. ದರ್ಶನ್ ಅವರ ಹುಟ್ಟಿದ ವರ್ಷ 1977. ಪವಿತ್ರಾ ಮಗಳು ಹುಟ್ಟಿದ್ದು ನವೆಂಬರ್ 7. ಹೀಗಾಗಿ, 777 ಎಂದು ಅವರು ಟ್ಯಾಟೂ ಹಾಕಿಸಿಕೊಂಡಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ. ಇನ್ನೂ ಕೆಲವರು ಇದು ‘ದರ್ಶನ್ ಕಾರ್ ನಂಬರ್’ ಎಂದು ಹೇಳಿದ್ದಾರೆ. ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

ಪವಿತ್ರಾ ಗೌಡ ಅವರು ಇತ್ತೀಚೆಗೆ ದರ್ಶನ್ ಜೊತೆ ಇರೋ ಫೋಟೋಗಳನ್ನು ಸೇರಿಸಿ ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಇದಕ್ಕೆ ಕ್ಯಾಪ್ಶನ್ ನೀಡಿದ್ದರು. ಇದಾದ ಬಳಿಕ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಪವಿತ್ರಾ ಗೌಡಗೆ ವಾರ್ನ್ ಮಾಡಿದ್ದರು.  ಇವರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆದಿತ್ತು. ಆರೋಪ ಪ್ರತ್ಯಾರೋಪಗಳನ್ನು ಇವರು ಮಾಡಿಕೊಂಡಿದ್ದರು. ಈಗ ಪವಿತ್ರಾ ಟ್ಯಾಟೂ ಹಾಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಇದರ ನಿಜವಾದ ಅರ್ಥವನ್ನು ಅವರೇ ವಿವರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:47 am, Wed, 13 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್