AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ

ಪವಿತ್ರಾ ಗೌಡ ಅವರು ದರ್ಶನ್ ಅವರ ಜೊತೆಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿ, ‘ಒಂದು ದಶಕ ಕಳೆಯಿತು. ನಮ್ಮ ಸಂಬಂಧಕ್ಕೆ 10 ವರ್ಷ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, ತಿರುಗೇಟು ಕೊಟ್ಟಿದ್ದರು. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದಿತ್ತು. ಈಗ ಮತ್ತೆ ಇವರ ವಿಚಾರ ಚರ್ಚೆಗೆ ಬಂದಿದೆ.

ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ
ಪವಿತ್ರಾ, ವಿಜಯಲಕ್ಷ್ಮಿ, ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 21, 2024 | 2:37 PM

Share

ನಟ ದರ್ಶನ್ (Darshan) ಹಾಗೂ ವಿಜಯಲಕ್ಷ್ಮಿ 2003ರ ಮೇ 19ರಂದು ಮದುವೆ ಆದರು. ಇವರ ದಾಂಪತ್ಯಕ್ಕೆ ಈಗ 21 ವರ್ಷ. ಮೇ 19ರಂದು ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದುಬೈಗೆ ತೆರಳಿ ಇವರು ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಮಧ್ಯೆ ನಟಿ ಪವಿತ್ರಾ ಗೌಡ ಅವರು ನಿಗೂಡಾರ್ಥದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಕ್ಕೂ, ಇದಕ್ಕೂ ಕೆಲವರು ಲಿಂಕ್ ಕಲ್ಪಿಸುತ್ತಿದ್ದಾರೆ.

ಪವಿತ್ರಾ ಗೌಡ ಹಾಗೂ ವಿಜಯಲಕ್ಷ್ಮಿ ಮಧ್ಯೆ ಕಿತ್ತಾಟ ನಡೆದಿದ್ದು ಗುಟ್ಟಾಗಿ ಏನು ಉಳಿದಿಲ್ಲ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಓಪನ್ ಆಗಿಯೇ ಕಿತ್ತಾಡಿಕೊಂಡಿದ್ದರು. ಪವಿತ್ರಾ ಗೌಡ ಅವರು ದರ್ಶನ್ ಅವರ ಜೊತೆಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿ, ‘ಒಂದು ದಶಕ ಕಳೆಯಿತು. ನಮ್ಮ ಸಂಬಂಧಕ್ಕೆ 10 ವರ್ಷ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, ತಿರುಗೇಟು ಕೊಟ್ಟಿದ್ದರು. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದಿತ್ತು. ಇದನ್ನೂ ಓದಿ: ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್​-ವಿಜಯಲಕ್ಷ್ಮಿ

ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಇತ್ತೀಚೆಗೆ ದುಬೈಗೆ ತೆರಳಿದ್ದಾರೆ. ಅಲ್ಲಿ ವಿಜಯಲಕ್ಷ್ಮಿ ಅವರು ಪತಿ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರು ವೆಡ್ಡಿಂಗ್​ ದರ್ಶನ್​ ಹಾಗೂ ವಿಜಯಲಕ್ಷ್ಮಿ ಅವರಿಗೆ ಆ್ಯನಿವರ್ಸರಿಯ ಶುಭಾಶಯ ಕೋರಿದ್ದಾರೆ. ದರ್ಶನ್ ಅವರು ವಿಜಯಲಕ್ಷ್ಮಿಗೆ ಹೂಗುಚ್ಛ ಕೊಡುತ್ತಿರುವ ಫೋಟೋನ ವಿಜಯಲಕ್ಷ್ಮಿ ಸ್ಟೇಟಸ್​ನಲ್ಲಿ ಪೋಸ್ಟ್ ಮಾಡಿದ್ದರು. ಈ ಬೆನ್ನಲ್ಲೇ ದರ್ಶನ್ ಅವರು ಹೇಳಿದ್ದ ಕರ್ಮದ ಸಾಲುಗಳನ್ನು ಪವಿತ್ರಾ ಗೌಡ ಸ್ಟೇಟಸ್​ನಲ್ಲಿ ಹಾಕಿದ್ದಾರೆ.

‘ಕರ್ಮ ಅನ್ನೋದು ಹೊರೆ ಇದ್ದಂತೆ. ಸಣ್ಣವರಿದ್ದಾಗ ಹಿರಿಯರು ಹೇಳ್ತಿದ್ರು, ಹೀಗೆಲ್ಲ ಮಾಡ್ತಿದ್ದೀಯಾ ಅದು ಮುಂದಿನ ಜನ್ಮಕ್ಕೆ ಕ್ಯಾರಿ ಆಗುತ್ತದೆ ಎನ್ನುತ್ತಿದ್ದರು. ಈಗ ಹಾಗಿಲ್ಲ, ಅಲ್ಲೇ ಡ್ರಾ, ಅಲ್ಲೇ ಬಹುಮಾನ’ ಎಂದು ದರ್ಶನ್ ಸಂದರ್ಶನದಲ್ಲಿ ಹೇಳಿದ್ದರು. ಈ ವಿಡಿಯೋನ ಸ್ಟೇಟಸ್​ನಲ್ಲಿ ಹಾಕಿದ್ದಾರೆ ಪವಿತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್