ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ

|

Updated on: May 21, 2024 | 2:37 PM

ಪವಿತ್ರಾ ಗೌಡ ಅವರು ದರ್ಶನ್ ಅವರ ಜೊತೆಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿ, ‘ಒಂದು ದಶಕ ಕಳೆಯಿತು. ನಮ್ಮ ಸಂಬಂಧಕ್ಕೆ 10 ವರ್ಷ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, ತಿರುಗೇಟು ಕೊಟ್ಟಿದ್ದರು. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದಿತ್ತು. ಈಗ ಮತ್ತೆ ಇವರ ವಿಚಾರ ಚರ್ಚೆಗೆ ಬಂದಿದೆ.

ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ
ಪವಿತ್ರಾ, ವಿಜಯಲಕ್ಷ್ಮಿ, ದರ್ಶನ್
Follow us on

ನಟ ದರ್ಶನ್ (Darshan) ಹಾಗೂ ವಿಜಯಲಕ್ಷ್ಮಿ 2003ರ ಮೇ 19ರಂದು ಮದುವೆ ಆದರು. ಇವರ ದಾಂಪತ್ಯಕ್ಕೆ ಈಗ 21 ವರ್ಷ. ಮೇ 19ರಂದು ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದುಬೈಗೆ ತೆರಳಿ ಇವರು ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಮಧ್ಯೆ ನಟಿ ಪವಿತ್ರಾ ಗೌಡ ಅವರು ನಿಗೂಡಾರ್ಥದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಕ್ಕೂ, ಇದಕ್ಕೂ ಕೆಲವರು ಲಿಂಕ್ ಕಲ್ಪಿಸುತ್ತಿದ್ದಾರೆ.

ಪವಿತ್ರಾ ಗೌಡ ಹಾಗೂ ವಿಜಯಲಕ್ಷ್ಮಿ ಮಧ್ಯೆ ಕಿತ್ತಾಟ ನಡೆದಿದ್ದು ಗುಟ್ಟಾಗಿ ಏನು ಉಳಿದಿಲ್ಲ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಓಪನ್ ಆಗಿಯೇ ಕಿತ್ತಾಡಿಕೊಂಡಿದ್ದರು. ಪವಿತ್ರಾ ಗೌಡ ಅವರು ದರ್ಶನ್ ಅವರ ಜೊತೆಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿ, ‘ಒಂದು ದಶಕ ಕಳೆಯಿತು. ನಮ್ಮ ಸಂಬಂಧಕ್ಕೆ 10 ವರ್ಷ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, ತಿರುಗೇಟು ಕೊಟ್ಟಿದ್ದರು. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದಿತ್ತು.
ಇದನ್ನೂ ಓದಿ: ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್​-ವಿಜಯಲಕ್ಷ್ಮಿ

ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಇತ್ತೀಚೆಗೆ ದುಬೈಗೆ ತೆರಳಿದ್ದಾರೆ. ಅಲ್ಲಿ ವಿಜಯಲಕ್ಷ್ಮಿ ಅವರು ಪತಿ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರು ವೆಡ್ಡಿಂಗ್​ ದರ್ಶನ್​ ಹಾಗೂ ವಿಜಯಲಕ್ಷ್ಮಿ ಅವರಿಗೆ ಆ್ಯನಿವರ್ಸರಿಯ ಶುಭಾಶಯ ಕೋರಿದ್ದಾರೆ. ದರ್ಶನ್ ಅವರು ವಿಜಯಲಕ್ಷ್ಮಿಗೆ ಹೂಗುಚ್ಛ ಕೊಡುತ್ತಿರುವ ಫೋಟೋನ ವಿಜಯಲಕ್ಷ್ಮಿ ಸ್ಟೇಟಸ್​ನಲ್ಲಿ ಪೋಸ್ಟ್ ಮಾಡಿದ್ದರು. ಈ ಬೆನ್ನಲ್ಲೇ ದರ್ಶನ್ ಅವರು ಹೇಳಿದ್ದ ಕರ್ಮದ ಸಾಲುಗಳನ್ನು ಪವಿತ್ರಾ ಗೌಡ ಸ್ಟೇಟಸ್​ನಲ್ಲಿ ಹಾಕಿದ್ದಾರೆ.

‘ಕರ್ಮ ಅನ್ನೋದು ಹೊರೆ ಇದ್ದಂತೆ. ಸಣ್ಣವರಿದ್ದಾಗ ಹಿರಿಯರು ಹೇಳ್ತಿದ್ರು, ಹೀಗೆಲ್ಲ ಮಾಡ್ತಿದ್ದೀಯಾ ಅದು ಮುಂದಿನ ಜನ್ಮಕ್ಕೆ ಕ್ಯಾರಿ ಆಗುತ್ತದೆ ಎನ್ನುತ್ತಿದ್ದರು. ಈಗ ಹಾಗಿಲ್ಲ, ಅಲ್ಲೇ ಡ್ರಾ, ಅಲ್ಲೇ ಬಹುಮಾನ’ ಎಂದು ದರ್ಶನ್ ಸಂದರ್ಶನದಲ್ಲಿ ಹೇಳಿದ್ದರು. ಈ ವಿಡಿಯೋನ ಸ್ಟೇಟಸ್​ನಲ್ಲಿ ಹಾಕಿದ್ದಾರೆ ಪವಿತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.