AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavitra Lokesh: ‘ಮತ್ತೆ ಮದುವೆ’ ಆಗಲು ಭರ್ಜರಿ ಹಣ ಪಡೆದ್ರಾ ನಟಿ ಪವಿತ್ರಾ ಲೋಕೇಶ್​?

ತಮ್ಮ ಜೀವನದಲ್ಲಿ ನಡೆದ ಕೆಲವು ವಿಚಾರಗಳು ‘ಮತ್ತೆ ಮದುವೆ’ ಸಿನಿಮಾದಲ್ಲಿದೆ. ಈ ಚಿತ್ರಕ್ಕಾಗಿ ಪವಿತ್ರಾ ಲೋಕೇಶ್ ಭರ್ಜರಿ ಸಂಭಾವನೆ ಪಡೆದಿದ್ದಾರೆ.  

Pavitra Lokesh: ‘ಮತ್ತೆ ಮದುವೆ’ ಆಗಲು ಭರ್ಜರಿ ಹಣ ಪಡೆದ್ರಾ ನಟಿ ಪವಿತ್ರಾ ಲೋಕೇಶ್​?
ಪವಿತ್ರಾ ಲೋಕೇಶ್, ನರೇಶ್
ರಾಜೇಶ್ ದುಗ್ಗುಮನೆ
|

Updated on:May 27, 2023 | 12:18 PM

Share

ನಟಿ ಪವಿತ್ರಾ ಲೋಕೇಶ್ (Pavitra Lokesh) ಹೆಸರು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ. ಹಿರಿಯ ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಮಧ್ಯೆ ವಿಶೇಷ ಸಂಬಂಧ ಇದೆ. ಇವರಿಬ್ಬರು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಮಾತೂ ಇದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನರೇಶ್ (Naresh) ಅವರು ನಮ್ಮದು ಮನಸ್ಸುಗಳ ಮದುವೆ ಎಂದು ಹೇಳಿದ್ದರು. ಸದ್ಯ ಟ್ರೋಲ್‌ಗಳನ್ನು ಲೆಕ್ಕಿಸದೇ ಇವರು ಮುಂದೆ ಸಾಗುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ಮತ್ತೆ ಮದುವೆ’ ಸಿನಿಮಾಗಾಗಿ ಪವಿತ್ರಾ ಲೋಕೇಶ್ ದೊಡ್ಡ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ವಿಚಾರ ಇತ್ತೀಚೆಗೆ ಚರ್ಚೆ ಆಗುತ್ತಿದೆ. ನರೇಶ್ ಬೇರೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಆರೋಪಿಸಿದ್ದರು. ಮೈಸೂರಿನ ಹೋಟೆಲ್ ಒಂದರಲ್ಲಿ ಪವಿತ್ರಾ-ನರೇಶ್ ಜೊತೆಯಾಗಿ ಇದ್ದಾಗ ಅಲ್ಲಿಗೆ ಬಂದಿದ್ದ ರಮ್ಯಾ ರಘುಪತಿ ಅವರು ನರೇಶ್ ಅವರನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದರು. ಈ ವೇಳೆ ಕೇಕೆ ಹಾಕುತ್ತಾ ಸಾಗಿದ್ದರು ನರೇಶ್. ಈ ಎಲ್ಲಾ ವಿಚಾರಗಳು ‘ಮತ್ತೆ ಮದುವೆ’ ಸಿನಿಮಾದಲ್ಲಿದೆ. ಈ ಚಿತ್ರಕ್ಕಾಗಿ ಪವಿತ್ರಾ ಲೋಕೇಶ್ ಭರ್ಜರಿ ಸಂಭಾವನೆ ಪಡೆದಿದ್ದಾರೆ.

ವಿವಾದಗಳ ನಡುವೆಯೂ ಪವಿತ್ರಾ ಲೋಕೇಶ್​​ಗೆ ಸಿನಿಮಾ ಆಫರ್​​ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಎನ್ನಲಾಗಿದೆ. ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಚಿತ್ರಕ್ಕೆ ತೆಗೆದುಕೊಂಡಿರುವ ಸಂಭಾವನೆ ವಿಚಾರ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ. ಎಂ.ಎಸ್. ರಾಜು ನಿರ್ದೇಶನದ ಈ ಚಿತ್ರಕ್ಕೆ ನರೇಶ್ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಪವಿತ್ರಾ ಲೋಕೇಶ್ ಜೊತೆಗಿನ ಲಿಪ್​ಲಾಕ್ ಬಗ್ಗೆ ವಿವರಣೆ ನೀಡಿದ ನರೇಶ್: ಆ ದೃಶ್ಯದ ಹಿನ್ನೆಲೆ ಏನು?

ಪವಿತ್ರಾ ಲೋಕೇಶ್ ಈ ಮೊದಲು ದಿನಕ್ಕೆ 60 ಸಾವಿರ ಸಂಭಾವನೆ ಪಡೆಯುತ್ತಿದ್ದರು ಎನ್ನಲಾಗಿದೆ. ಈಗ ಅವರ ಸಂಭಾವನೆ ದಿನಕ್ಕೆ ಒಂದು ಲಕ್ಷ ರೂಪಾಯಿಗೆ ಏರಿದೆಯಂತೆ. ‘ಮತ್ತೆ ಮದುವೆ’ ಚಿತ್ರಕ್ಕೆ ಅವರು 10 ಕೋಟಿ ರೂ.ವರೆಗೆ ಪಡೆದಿದ್ದಾರೆ ಎಂದೂ ಹೇಳಲಾಗಿದೆ. ‘ಮತ್ತೆ ಮದುವೆ’ ಸಿನಿಮಾದಲ್ಲಿ ನರೇಶ್​ಗೆ ನಾಯಕಿಯಾಗಿ ಅವರು ನಟಿಸಿದ್ದಾರೆ.

‘ಮತ್ತೆ ಮದುವೆ’ ಸಿನಿಮಾ ತೆಲುಗಿನಲ್ಲಿ ಮೇ 26ರಂದು ರಿಲೀಸ್ ಆಗಿದೆ. ಸದ್ಯ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆಗಿಲ್ಲ. ಮುಂದಿನ ವಾರ ಈ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Sat, 27 May 23

Follow Us
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ