AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavitra Lokesh: ‘ಮತ್ತೆ ಮದುವೆ’ ಆಗಲು ಭರ್ಜರಿ ಹಣ ಪಡೆದ್ರಾ ನಟಿ ಪವಿತ್ರಾ ಲೋಕೇಶ್​?

ತಮ್ಮ ಜೀವನದಲ್ಲಿ ನಡೆದ ಕೆಲವು ವಿಚಾರಗಳು ‘ಮತ್ತೆ ಮದುವೆ’ ಸಿನಿಮಾದಲ್ಲಿದೆ. ಈ ಚಿತ್ರಕ್ಕಾಗಿ ಪವಿತ್ರಾ ಲೋಕೇಶ್ ಭರ್ಜರಿ ಸಂಭಾವನೆ ಪಡೆದಿದ್ದಾರೆ.  

Pavitra Lokesh: ‘ಮತ್ತೆ ಮದುವೆ’ ಆಗಲು ಭರ್ಜರಿ ಹಣ ಪಡೆದ್ರಾ ನಟಿ ಪವಿತ್ರಾ ಲೋಕೇಶ್​?
ಪವಿತ್ರಾ ಲೋಕೇಶ್, ನರೇಶ್
ರಾಜೇಶ್ ದುಗ್ಗುಮನೆ
|

Updated on:May 27, 2023 | 12:18 PM

Share

ನಟಿ ಪವಿತ್ರಾ ಲೋಕೇಶ್ (Pavitra Lokesh) ಹೆಸರು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ. ಹಿರಿಯ ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಮಧ್ಯೆ ವಿಶೇಷ ಸಂಬಂಧ ಇದೆ. ಇವರಿಬ್ಬರು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಮಾತೂ ಇದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನರೇಶ್ (Naresh) ಅವರು ನಮ್ಮದು ಮನಸ್ಸುಗಳ ಮದುವೆ ಎಂದು ಹೇಳಿದ್ದರು. ಸದ್ಯ ಟ್ರೋಲ್‌ಗಳನ್ನು ಲೆಕ್ಕಿಸದೇ ಇವರು ಮುಂದೆ ಸಾಗುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ಮತ್ತೆ ಮದುವೆ’ ಸಿನಿಮಾಗಾಗಿ ಪವಿತ್ರಾ ಲೋಕೇಶ್ ದೊಡ್ಡ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ವಿಚಾರ ಇತ್ತೀಚೆಗೆ ಚರ್ಚೆ ಆಗುತ್ತಿದೆ. ನರೇಶ್ ಬೇರೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಆರೋಪಿಸಿದ್ದರು. ಮೈಸೂರಿನ ಹೋಟೆಲ್ ಒಂದರಲ್ಲಿ ಪವಿತ್ರಾ-ನರೇಶ್ ಜೊತೆಯಾಗಿ ಇದ್ದಾಗ ಅಲ್ಲಿಗೆ ಬಂದಿದ್ದ ರಮ್ಯಾ ರಘುಪತಿ ಅವರು ನರೇಶ್ ಅವರನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದರು. ಈ ವೇಳೆ ಕೇಕೆ ಹಾಕುತ್ತಾ ಸಾಗಿದ್ದರು ನರೇಶ್. ಈ ಎಲ್ಲಾ ವಿಚಾರಗಳು ‘ಮತ್ತೆ ಮದುವೆ’ ಸಿನಿಮಾದಲ್ಲಿದೆ. ಈ ಚಿತ್ರಕ್ಕಾಗಿ ಪವಿತ್ರಾ ಲೋಕೇಶ್ ಭರ್ಜರಿ ಸಂಭಾವನೆ ಪಡೆದಿದ್ದಾರೆ.

ವಿವಾದಗಳ ನಡುವೆಯೂ ಪವಿತ್ರಾ ಲೋಕೇಶ್​​ಗೆ ಸಿನಿಮಾ ಆಫರ್​​ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಎನ್ನಲಾಗಿದೆ. ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಚಿತ್ರಕ್ಕೆ ತೆಗೆದುಕೊಂಡಿರುವ ಸಂಭಾವನೆ ವಿಚಾರ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ. ಎಂ.ಎಸ್. ರಾಜು ನಿರ್ದೇಶನದ ಈ ಚಿತ್ರಕ್ಕೆ ನರೇಶ್ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಪವಿತ್ರಾ ಲೋಕೇಶ್ ಜೊತೆಗಿನ ಲಿಪ್​ಲಾಕ್ ಬಗ್ಗೆ ವಿವರಣೆ ನೀಡಿದ ನರೇಶ್: ಆ ದೃಶ್ಯದ ಹಿನ್ನೆಲೆ ಏನು?

ಪವಿತ್ರಾ ಲೋಕೇಶ್ ಈ ಮೊದಲು ದಿನಕ್ಕೆ 60 ಸಾವಿರ ಸಂಭಾವನೆ ಪಡೆಯುತ್ತಿದ್ದರು ಎನ್ನಲಾಗಿದೆ. ಈಗ ಅವರ ಸಂಭಾವನೆ ದಿನಕ್ಕೆ ಒಂದು ಲಕ್ಷ ರೂಪಾಯಿಗೆ ಏರಿದೆಯಂತೆ. ‘ಮತ್ತೆ ಮದುವೆ’ ಚಿತ್ರಕ್ಕೆ ಅವರು 10 ಕೋಟಿ ರೂ.ವರೆಗೆ ಪಡೆದಿದ್ದಾರೆ ಎಂದೂ ಹೇಳಲಾಗಿದೆ. ‘ಮತ್ತೆ ಮದುವೆ’ ಸಿನಿಮಾದಲ್ಲಿ ನರೇಶ್​ಗೆ ನಾಯಕಿಯಾಗಿ ಅವರು ನಟಿಸಿದ್ದಾರೆ.

‘ಮತ್ತೆ ಮದುವೆ’ ಸಿನಿಮಾ ತೆಲುಗಿನಲ್ಲಿ ಮೇ 26ರಂದು ರಿಲೀಸ್ ಆಗಿದೆ. ಸದ್ಯ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆಗಿಲ್ಲ. ಮುಂದಿನ ವಾರ ಈ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Sat, 27 May 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!