AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

ಕನ್ನಡದ ಚಿತ್ರಗಳಿಗೂ ಈಗ ಬೇಡಿಕೆ ಬರುತ್ತಿದೆ. ಕನ್ನಡದಲ್ಲಿ ಈ ಮೊದಲು ತೆರೆಕಂಡಿದ್ದ ಯು-ಟರ್ನ್​ ಸಿನಿಮಾ 8 ಭಾಷೆಗಳಿಗೆ ರಿಮೇಕ್​ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.

ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ
ಯು ಟರ್ನ್​ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on:Mar 30, 2021 | 8:20 PM

Share

ಕನ್ನಡ ಸಿನಿಮಾಗಳಿಗೆ ರಾಷ್ಟ್ರಮಟ್ಟದಲ್ಲಿ ಬೇಡಿಕೆ ಬರುತ್ತಿದೆ. ನಮ್ಮ ಚಿತ್ರಗಳನ್ನು ಮೆಚ್ಚಿಕೊಂಡು ಬೇರೆ ಬೇರೆ ಭಾಷೆಗೆ ಅದನ್ನು ಡಬ್​/ರಿಮೇಕ್​ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಈಗ ಪವನ್​ ಕುಮಾರ್​ ನಿರ್ದೇಶನದ ಯು-ಟರ್ನ್​ ಹೊಸ ದಾಖಲೆ ಸೃಷ್ಟಿ ಮಾಡಿದೆ. ಕನ್ನಡ ಸಿನಿಮಾಗಳು ಬೇರೆ ಭಾಷೆಗೆ ರಿಮೇಕ್​ ಆಗುವುದು ಅಥವಾ ಡಬ್​ ಆಗುವುದು ತುಂಬಾನೇ ವಿರಳವಾಗಿತ್ತು. ಒಮ್ಮೆ ಇವು ಡಬ್​ ಆದರೂ ಯಶಸ್ಸು ಕಂಡಿದ್ದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ಕಾಲ ಬದಲಾಗುತ್ತಿದೆ. ಕನ್ನಡದ ಚಿತ್ರಗಳಿಗೂ ಬೇಡಿಕೆ ಬರುತ್ತಿದೆ. ಕನ್ನಡದಲ್ಲಿ ಈ ಮೊದಲು ತೆರೆಕಂಡಿದ್ದ ಯು-ಟರ್ನ್​ ಸಿನಿಮಾ 8 ಭಾಷೆಗಳಿಗೆ ರಿಮೇಕ್​ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.

ಪವನ್​ ಕುಮಾರ್​ ನಿರ್ದೇಶನ ಮಾಡಿದ್ದ ಯು-ಟರ್ನ್​ 2016ರಲ್ಲಿ ರಿಲೀಸ್​ ಆಗಿತ್ತು. ವಿಮರ್ಶಕರಿಂದ ಸಿನಿಮಾ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲ, ತೆಲುಗು, ತಮಿಳು, ಮಲಯಾಳಂ, ಫಿಲಿಫಿನೋ, ಸಿಂಹಳಿ, ಹಿಂದಿ ಮತ್ತು ಬಂಗಾಳಿ ಭಾಷೆಗೆ ಈ ಚಿತ್ರ ರಿಮೇಕ್​ ಆಗಿರುವುದು ವಿಶೇಷ. ಈ ಮೊದಲು ಡಾ.ರಾಜ್​ಕುಮಾರ್​ ಅವರ ನಟನೆಯ ಅನುರಾಗ ಅರಳಿತು ಚಿತ್ರ ಅಂದಿನ ಕಾಲಕ್ಕೆ 6 ಭಾಷೆಗೆ ರಿಮೇಕ್​ ಆಗಿತ್ತು.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​ ಚಿತ್ರ ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಎಚ್ಚರಿಕೆ ಸಂದೇಶ ನೀಡಿತ್ತು. ಎರಡುವರೆ ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ, ಬಾಕ್ಸ್​ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿತ್ತು. ಆದರೆ, ಈಗ ಈ ಸಿನಿಮಾ 8 ಭಾಷೆಗೆ ರಿಮೇಕ್​ ಆಗಿರುವುದು ಕನ್ನಡದ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ. ಪವನ್​ ಕುಮಾರ್​ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರು ಯಾರಿಗೂ ಗೊತ್ತಿಲ್ಲದಂತೆ ಗಜಪತಿ ಗರ್ವಭಂಗ ಸಿನಿಮಾನ ನೋಡಿಕೊಂಡು ಬಂದಿದ್ರು : ಎಮ್.ಎಸ್.ಉಮೇಶ್

Published On - 7:55 pm, Tue, 30 March 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?