AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

ಕನ್ನಡದ ಚಿತ್ರಗಳಿಗೂ ಈಗ ಬೇಡಿಕೆ ಬರುತ್ತಿದೆ. ಕನ್ನಡದಲ್ಲಿ ಈ ಮೊದಲು ತೆರೆಕಂಡಿದ್ದ ಯು-ಟರ್ನ್​ ಸಿನಿಮಾ 8 ಭಾಷೆಗಳಿಗೆ ರಿಮೇಕ್​ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.

ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ
ಯು ಟರ್ನ್​ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on:Mar 30, 2021 | 8:20 PM

Share

ಕನ್ನಡ ಸಿನಿಮಾಗಳಿಗೆ ರಾಷ್ಟ್ರಮಟ್ಟದಲ್ಲಿ ಬೇಡಿಕೆ ಬರುತ್ತಿದೆ. ನಮ್ಮ ಚಿತ್ರಗಳನ್ನು ಮೆಚ್ಚಿಕೊಂಡು ಬೇರೆ ಬೇರೆ ಭಾಷೆಗೆ ಅದನ್ನು ಡಬ್​/ರಿಮೇಕ್​ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಈಗ ಪವನ್​ ಕುಮಾರ್​ ನಿರ್ದೇಶನದ ಯು-ಟರ್ನ್​ ಹೊಸ ದಾಖಲೆ ಸೃಷ್ಟಿ ಮಾಡಿದೆ. ಕನ್ನಡ ಸಿನಿಮಾಗಳು ಬೇರೆ ಭಾಷೆಗೆ ರಿಮೇಕ್​ ಆಗುವುದು ಅಥವಾ ಡಬ್​ ಆಗುವುದು ತುಂಬಾನೇ ವಿರಳವಾಗಿತ್ತು. ಒಮ್ಮೆ ಇವು ಡಬ್​ ಆದರೂ ಯಶಸ್ಸು ಕಂಡಿದ್ದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ಕಾಲ ಬದಲಾಗುತ್ತಿದೆ. ಕನ್ನಡದ ಚಿತ್ರಗಳಿಗೂ ಬೇಡಿಕೆ ಬರುತ್ತಿದೆ. ಕನ್ನಡದಲ್ಲಿ ಈ ಮೊದಲು ತೆರೆಕಂಡಿದ್ದ ಯು-ಟರ್ನ್​ ಸಿನಿಮಾ 8 ಭಾಷೆಗಳಿಗೆ ರಿಮೇಕ್​ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.

ಪವನ್​ ಕುಮಾರ್​ ನಿರ್ದೇಶನ ಮಾಡಿದ್ದ ಯು-ಟರ್ನ್​ 2016ರಲ್ಲಿ ರಿಲೀಸ್​ ಆಗಿತ್ತು. ವಿಮರ್ಶಕರಿಂದ ಸಿನಿಮಾ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲ, ತೆಲುಗು, ತಮಿಳು, ಮಲಯಾಳಂ, ಫಿಲಿಫಿನೋ, ಸಿಂಹಳಿ, ಹಿಂದಿ ಮತ್ತು ಬಂಗಾಳಿ ಭಾಷೆಗೆ ಈ ಚಿತ್ರ ರಿಮೇಕ್​ ಆಗಿರುವುದು ವಿಶೇಷ. ಈ ಮೊದಲು ಡಾ.ರಾಜ್​ಕುಮಾರ್​ ಅವರ ನಟನೆಯ ಅನುರಾಗ ಅರಳಿತು ಚಿತ್ರ ಅಂದಿನ ಕಾಲಕ್ಕೆ 6 ಭಾಷೆಗೆ ರಿಮೇಕ್​ ಆಗಿತ್ತು.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​ ಚಿತ್ರ ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಎಚ್ಚರಿಕೆ ಸಂದೇಶ ನೀಡಿತ್ತು. ಎರಡುವರೆ ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ, ಬಾಕ್ಸ್​ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿತ್ತು. ಆದರೆ, ಈಗ ಈ ಸಿನಿಮಾ 8 ಭಾಷೆಗೆ ರಿಮೇಕ್​ ಆಗಿರುವುದು ಕನ್ನಡದ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ. ಪವನ್​ ಕುಮಾರ್​ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರು ಯಾರಿಗೂ ಗೊತ್ತಿಲ್ಲದಂತೆ ಗಜಪತಿ ಗರ್ವಭಂಗ ಸಿನಿಮಾನ ನೋಡಿಕೊಂಡು ಬಂದಿದ್ರು : ಎಮ್.ಎಸ್.ಉಮೇಶ್

Published On - 7:55 pm, Tue, 30 March 21

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು