AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ

ಕನ್ನಡದ ಚಿತ್ರಗಳಿಗೂ ಈಗ ಬೇಡಿಕೆ ಬರುತ್ತಿದೆ. ಕನ್ನಡದಲ್ಲಿ ಈ ಮೊದಲು ತೆರೆಕಂಡಿದ್ದ ಯು-ಟರ್ನ್​ ಸಿನಿಮಾ 8 ಭಾಷೆಗಳಿಗೆ ರಿಮೇಕ್​ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.

ರಿಮೇಕ್​ ವಿಚಾರದಲ್ಲಿ ದಾಖಲೆ ಬರೆದ ಪವನ್​ ಕುಮಾರ್​ ಯು-ಟರ್ನ್​ ಸಿನಿಮಾ
ಯು ಟರ್ನ್​ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on:Mar 30, 2021 | 8:20 PM

Share

ಕನ್ನಡ ಸಿನಿಮಾಗಳಿಗೆ ರಾಷ್ಟ್ರಮಟ್ಟದಲ್ಲಿ ಬೇಡಿಕೆ ಬರುತ್ತಿದೆ. ನಮ್ಮ ಚಿತ್ರಗಳನ್ನು ಮೆಚ್ಚಿಕೊಂಡು ಬೇರೆ ಬೇರೆ ಭಾಷೆಗೆ ಅದನ್ನು ಡಬ್​/ರಿಮೇಕ್​ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಈಗ ಪವನ್​ ಕುಮಾರ್​ ನಿರ್ದೇಶನದ ಯು-ಟರ್ನ್​ ಹೊಸ ದಾಖಲೆ ಸೃಷ್ಟಿ ಮಾಡಿದೆ. ಕನ್ನಡ ಸಿನಿಮಾಗಳು ಬೇರೆ ಭಾಷೆಗೆ ರಿಮೇಕ್​ ಆಗುವುದು ಅಥವಾ ಡಬ್​ ಆಗುವುದು ತುಂಬಾನೇ ವಿರಳವಾಗಿತ್ತು. ಒಮ್ಮೆ ಇವು ಡಬ್​ ಆದರೂ ಯಶಸ್ಸು ಕಂಡಿದ್ದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ಕಾಲ ಬದಲಾಗುತ್ತಿದೆ. ಕನ್ನಡದ ಚಿತ್ರಗಳಿಗೂ ಬೇಡಿಕೆ ಬರುತ್ತಿದೆ. ಕನ್ನಡದಲ್ಲಿ ಈ ಮೊದಲು ತೆರೆಕಂಡಿದ್ದ ಯು-ಟರ್ನ್​ ಸಿನಿಮಾ 8 ಭಾಷೆಗಳಿಗೆ ರಿಮೇಕ್​ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.

ಪವನ್​ ಕುಮಾರ್​ ನಿರ್ದೇಶನ ಮಾಡಿದ್ದ ಯು-ಟರ್ನ್​ 2016ರಲ್ಲಿ ರಿಲೀಸ್​ ಆಗಿತ್ತು. ವಿಮರ್ಶಕರಿಂದ ಸಿನಿಮಾ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲ, ತೆಲುಗು, ತಮಿಳು, ಮಲಯಾಳಂ, ಫಿಲಿಫಿನೋ, ಸಿಂಹಳಿ, ಹಿಂದಿ ಮತ್ತು ಬಂಗಾಳಿ ಭಾಷೆಗೆ ಈ ಚಿತ್ರ ರಿಮೇಕ್​ ಆಗಿರುವುದು ವಿಶೇಷ. ಈ ಮೊದಲು ಡಾ.ರಾಜ್​ಕುಮಾರ್​ ಅವರ ನಟನೆಯ ಅನುರಾಗ ಅರಳಿತು ಚಿತ್ರ ಅಂದಿನ ಕಾಲಕ್ಕೆ 6 ಭಾಷೆಗೆ ರಿಮೇಕ್​ ಆಗಿತ್ತು.

ಪವನ್​ ಕುಮಾರ್​ ನಿರ್ದೇಶನದಲ್ಲಿ ಮೂಡಿ ಬಂದ ಯು-ಟರ್ನ್​ ಚಿತ್ರ ರಸ್ತೆ ಸುರಕ್ಷತೆಯ ವಿಚಾರವನ್ನು ಇಟ್ಟುಕೊಂಡು ಹೆಣೆದ ಸಿನಿಮಾ. ರಸ್ತೆಯಲ್ಲಿ ಸಂಚರಿಸುವಾಗ ಎಲ್ಲೆಂದರಲ್ಲಿ ಯು ಟರ್ನ್​ ತೆಗೆದುಕೊಳ್ಳುವವರಿಗೆ ಎಚ್ಚರಿಕೆ ಸಂದೇಶ ನೀಡಿತ್ತು. ಎರಡುವರೆ ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ, ಬಾಕ್ಸ್​ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿತ್ತು. ಆದರೆ, ಈಗ ಈ ಸಿನಿಮಾ 8 ಭಾಷೆಗೆ ರಿಮೇಕ್​ ಆಗಿರುವುದು ಕನ್ನಡದ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ. ಪವನ್​ ಕುಮಾರ್​ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಶ್ರದ್ಧಾ ಶ್ರೀನಾಥ್, ರೋಜರ್​ ನಾರಾಯಣ್​, ರಾಧಿಕಾ ಚೇತನ್​, ದಿಲೀಪ್​ ರಾಜ್​ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರು ಯಾರಿಗೂ ಗೊತ್ತಿಲ್ಲದಂತೆ ಗಜಪತಿ ಗರ್ವಭಂಗ ಸಿನಿಮಾನ ನೋಡಿಕೊಂಡು ಬಂದಿದ್ರು : ಎಮ್.ಎಸ್.ಉಮೇಶ್

Published On - 7:55 pm, Tue, 30 March 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ