AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸಿ ಶೇಖರ್ ಜೊತೆ ಕೈ ಜೋಡಿಸಿದ ‘ಲ್ಯಾಂಡ್‌ಲಾರ್ಡ್’ ನಿರ್ಮಾಪಕ ಕೆವಿ ಸತ್ಯಪ್ರಕಾಶ್

ಕನ್ನಡ ಚಿತ್ರರಂಗದಲ್ಲಿ ಯುಗಾದಿ ಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾಗಳು ಅನೌನ್ಸ್ ಆಗಲಿವೆ. ನಿರ್ದೇಶಕ ಪಿಸಿ ಶೇಖರ್ ಅವರು ಆ್ಯಕ್ಷನ್-ಕಟ್ ಹೇಳಲಿರುವ ಹೊಸ ಚಿತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಿನಿಮಾಗೆ ನಿರ್ಮಾಪಕ ಕೆವಿ ಸತ್ಯಪ್ರಕಾಶ್ ಅವರು ಬಂಡವಾಳ ಹೂಡಲಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಪಿಸಿ ಶೇಖರ್ ಜೊತೆ ಕೈ ಜೋಡಿಸಿದ ‘ಲ್ಯಾಂಡ್‌ಲಾರ್ಡ್’ ನಿರ್ಮಾಪಕ ಕೆವಿ ಸತ್ಯಪ್ರಕಾಶ್
Kv Sathyaprakash, Pc Shekar
ಮದನ್​ ಕುಮಾರ್​
|

Updated on:Mar 18, 2026 | 3:41 PM

Share

ಯುಗಾದಿ ಎಂದರೆ ಹೊಸ ವರ್ಷ. ಆ ಪ್ರಯುಕ್ತ ಚಿತ್ರರಂಗದಲ್ಲಿ (Kannada Film Industry) ಕೂಡ ಹೊಸ ಉತ್ಸಾಹ ಮೂಡುತ್ತಿದೆ. ಹೊಸ ವರ್ಷಕ್ಕೆ ಅನೇಕ ಹೊಸ ಸಿನಿಮಾಗಳ ಅನೌನ್ಸ್‌ ಆಗುತ್ತಿವೆ. ಯುಗಾದಿ ಸಂಭ್ರಮದಲ್ಲಿ ನಿರ್ದೇಶಕ ಪಿಸಿ ಶೇಖರ್‌ (PC Shekar) ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ರಾಗ’, ‘ರೊಮಿಯೋ’ ಮುಂತಾದ ಸಿನಿಮಾಗಳನ್ನು ಮಾಡಿರುವ ನಿರ್ದೇಶಕ ಪಿಸಿ ಶೇಖರ್ ಈಗ ತಮ್ಮ ಹೊಸ ಸಿನಿಮಾಗೆ ನಿರ್ದೇಶನ ಮಾಡಲು ತಯಾರಾಗಿದ್ದಾರೆ. ಈ ಬಾರಿ ಪಿಸಿ ಶೇಖರ್ ಜೊತೆ ‘ಸಾರಥಿ’, ‘ಲ್ಯಾಂಡ್‌ಲಾರ್ಡ್’ ಖ್ಯಾತಿಯ ನಿರ್ಮಾಪಕ ಕೆವಿ ಸತ್ಯಪ್ರಕಾಶ್ (KV Sathyaprakash) ಅವರು ಕೈ ಜೋಡಿಸಿದ್ದಾರೆ.

ಪಿಸಿ ಶೇಖರ್ ಮತ್ತು ಕೆವಿ ಸತ್ಯಪ್ರಕಾಶ್ ಅವರು ಒಂದಾಗುತ್ತಿರುವುದು ಕುತೂಹಲ ಮೂಡಿಸಿದೆ. ಈಗಾಗಲೇ ಈ ಚಿತ್ರಕ್ಕೆ ಎಲ್ಲ ತಯಾರಿ ಮುಗಿದಿದೆ. ಇನ್ನೇನು ಸಿನಿಮಾ ಸೆಟ್ಟೇರುವುಷ್ಟೇ ಬಾಕಿ ಇದೆ. ಸದ್ಯ ‘ಮಹಾನ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಇರುವ ಪಿಸಿ ಶೇಖರ್ ಅವರು ಆ ಸಿನಿಮಾದ ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ.

ಈ ಚಿತ್ರವು ದೊಡ್ಡ ಮಟ್ಟದಲ್ಲಿ ತಯಾರಾಗಲಿದೆ ಎಂದು ನಿರ್ದೇಶಕ ಪಿಸಿ ಶೇಖರ್ ಹೇಳಿದ್ದಾರೆ. ‘ಸಾರಥಿ, ಲ್ಯಾಂಡ್‌ಲಾರ್ಡ್ ರೀತಿಯ ದೊಡ್ಡ ಸಿನಿಮಾಗಳನ್ನು ಮಾಡಿರುವ ನಿರ್ಮಾಪಕರು ನನಗೆ ಅವಕಾಶ ಕೊಟ್ಟಿದ್ದು ಬಹಳ ಖುಷಿಯಾಗುತ್ತಿದೆ. ಸದ್ಯದಲ್ಲೇ ಸಿನಿಮಾದ ಟೈಟಲ್ ಮತ್ತು ಪಾತ್ರವರ್ಗದ ಬಗ್ಗೆ ಮಾಹಿತಿ ನೀಡುತ್ತೇವೆ’ ಎಂದು ಪಿಸಿ ಶೇಖರ್ ಅವರು ಹೇಳಿದ್ದಾರೆ.

ನಿರ್ಮಾಪಕ ಕೆವಿ ಸತ್ಯಪ್ರಕಾಶ್ ಹಾಗೂ ನಿರ್ದೇಶಕ ಪಿಸಿ ಶೇಖರ್ ಅವರ ಗೆಳೆಯ ನಟ-ನಿರ್ಮಾಪಕ ಮಿತ್ರ ಅವರು ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಪಿಸಿ ಶೇಖರ್ ನಿರ್ದೇಶನ ಮಾಡಿದ್ದ ‘ರಾಗ’ ಸಿನಿಮಾದಲ್ಲಿ ಮಿತ್ರ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದರು. ಆದರೆ ಈ ಹೊಸ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿ ಕ್ಯಾಮರಾ ಹಿಂದೆ ಕೆಲಸ ಮಾಡುತ್ತಿರುವುದು ವಿಶೇಷ.

ಇದನ್ನೂ ಓದಿ: ಭಾರತೀಯ ಚಿತ್ರರಂಗದ ಭವಿಷ್ಯ ಬದಲಿಸಲಿದೆ ಧುರಂಧರ್ 2: ರಣವೀರ್ ಸಿಂಗ್

‘ರಾಗ’ ಸಿನಿಮಾದಲ್ಲಿ ನಟ ಮಿತ್ರ ಮತ್ತು ಪಿಸಿ ಶೇಖರ್ ಅವರ ಕಾಂಬಿನೇಷನ್ ತುಂಬ ಚೆನ್ನಾಗಿ ವರ್ಕೌಟ್ ಆಗಿತ್ತು. ಹಾಗಾಗಿ ಇದೀಗ ಮತ್ತೆ ಒಟ್ಟಿಗೆ ಸೇರಿರುವುದರಿಂದ ಈ ಸಿನಿಮಾದ ಮೇಲೆ ನಿರೀಕ್ಷೆ ಮೂಡಿದೆ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಸಿನಿಮಾ ತಂಡ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:40 pm, Wed, 18 March 26

Follow Us
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು