ಪ್ರಜಾಕೀಯದ ಹೈಕಮಾಂಡ್​ ಯಾರು ಎಂಬುದನ್ನು ಬಹಿರಂಗಪಡಿಸಿದ ಉಪೇಂದ್ರ
ಉಪೇಂದ್ರ

ಪ್ರಜಾಕೀಯದ ಹೈಕಮಾಂಡ್​ ಯಾರು ಎಂಬುದನ್ನು ಬಹಿರಂಗಪಡಿಸಿದ ಉಪೇಂದ್ರ

Edited By:

Updated on: Jul 10, 2021 | 6:32 PM

ನಟ ಉಪೇಂದ್ರ ಪ್ರಜಾಕೀಯ ಪಕ್ಷ ಸ್ಥಾಪಿಸಿ ಅದರ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲಿ ಹೊಸ ಬದಲಾವಣೆ ತರಬೇಕು ಎನ್ನುವ ಕನಸನ್ನು ಅವರು ಕಂಡಿದ್ದಾರೆ.

ನಟ ಉಪೇಂದ್ರ ಪ್ರಜಾಕೀಯ ಪಕ್ಷ ಸ್ಥಾಪಿಸಿ ಅದರ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲಿ ಹೊಸ ಬದಲಾವಣೆ ತರಬೇಕು ಎನ್ನುವ ಕನಸನ್ನು ಅವರು ಕಂಡಿದ್ದಾರೆ. ಈಗ ಜನರೊಂದಿಗೆ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಫೇಸ್ಬುಕ್ ಲೈವ್ ಬಂದಿದ್ದರು. ಈ ವೇಳೆ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಪ್ರಜಾಕೀಯ ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳಿದರು. ಈ ಪ್ರಶ್ನೆಗೆ ಉಪೇಂದ್ರ ಉತ್ತರಿಸಿದ್ದಾರೆ. ‘ನಾವು ಅಧಿಕಾರಕ್ಕೆ ಬಂದರೆ ಜನರೇ ಸಿಎಂ ಆಗುತ್ತಾರೆ. ಜನಸಾಮಾನ್ಯನೇ ಸಿಎಂ. ಅವರೆ ಹೈಕಮಾಂಡ್​’ ಎಂದು ಹೇಳುವ ಮೂಲಕ ಜನರ ಮಾತಿಗೆ ಬೆಲೆ ಕೊಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದರು.

ಇದನ್ನೂ ಓದಿ: ‘ಜನರನ್ನು ಮಕ್ಕಳ ರೀತಿಯಲ್ಲಿ ನೋಡಬೇಕು’; ಆಲೋಚನೆಗಳನ್ನು ಹಂಚಿಕೊಂಡ ಉಪೇಂದ್ರ

Follow Us
Web contact

TV9 Kannada

Read More