AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಿಗಿಂತಲೂ ಕಡೆಯಾ ದರ್ಶನ್? ನ್ಯಾಯಾಲಯದಲ್ಲಿ ವಕೀಲರ ವಾದ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ದರ್ಶನ್ ಅವರಿಗೆ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್​​ಶೀಟ್ ಕೊಡುವ ವಿಚಾರಕ್ಕೆ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳು ನಡೆದಿದ್ದು, ನ್ಯಾಯಾಲಯದಲ್ಲಿ ನಡೆದ ವಾದದ ಮಾಹಿತಿ ಇಲ್ಲಿದೆ...

ಅತ್ಯಾಚಾರಿಗಿಂತಲೂ ಕಡೆಯಾ ದರ್ಶನ್? ನ್ಯಾಯಾಲಯದಲ್ಲಿ ವಕೀಲರ ವಾದ
Darshan Thoogudeepa
ಮಂಜುನಾಥ ಸಿ.
|

Updated on: Sep 30, 2025 | 3:59 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಅವರಿಗೆ ಕೆಲ ಸೌಲಭ್ಯಗಳನ್ನು ಕೊಡಿಸಲು ವಕೀಲರು ಸತತ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ನಟ ದರ್ಶನ್​​ಗೆ ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ ಶೀಟ್​​ ಕೊಡಿಸಲು ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳು ನಡೆಯುತ್ತಿವೆ. ದರ್ಶನ್​​ಗೆ ಜೈಲಿನಲ್ಲಿ ಕೆಲವು ಸಾಮಾನ್ಯ ಸೌಲಭ್ಯಗಳನ್ನು ಕೊಡಿಸುವ ವಿಚಾರದಲ್ಲಿ ಜೈಲು ಅಧೀಕ್ಷಕರು ಇಂದು ನ್ಯಾಯಾಲಯಕ್ಕೆ ಹಾಜರಾಗಿ ವರದಿ ಸಲ್ಲಿಕೆ ಮಾಡಿದರು.

ದರ್ಶನ್ ಪರ ವಾದ ಮಂಡಿಸಿದ ವಕೀಲ ಸುನಿಲ್, ‘ಇಡೀ ದೇಶದ ಯಾವ ಜೈಲಿನಲ್ಲಿಯೂ ಇಲ್ಲದ ನಿಯಮಗಳನ್ನು ದರ್ಶನ್ ಮೇಲೆ ಹೇರಲಾಗಿದೆ. ಅದೇ ಜೈಲಿನಲ್ಲಿರುವ ಅತ್ಯಾಚಾರ ಆರೋಪಿ ಉಮೇಶ್ ರೆಡ್ಡಿಗೆ ಕಲರ್ ಟಿವಿ ಕೊಟ್ಟಿದ್ದಾರೆ, ಆದರೆ ದರ್ಶನ್​​ಗೆ ಅಗತ್ಯ ಸೌಲಭ್ಯಗಳನ್ನು ಸಹ ಕೊಡುತ್ತಿಲ್ಲ. ಬೇಕಾದರೆ ಆ ಬಗ್ಗೆ ಸಾಕ್ಷ್ಯ ನೀಡಲು ತಯಾರಿದ್ದೇವೆ’ ಎಂದು ಏರಿದ ದನಿಯಲ್ಲಿ ವಾದಿಸಿದರು.

ಜೈಲು ಅಧೀಕ್ಷಕರ ಪರವಾಗಿ ವಾದಿಸಿದ ಎಸ್​​ಪಿಪಿ ಪ್ರಸನ್ನ ಅವರು, ‘ನಿಯಮಗಳ ಅನುಸಾರವಾಗಿ ದರ್ಶನ್​​ಗೆ ಏನು ಕೊಡಬೇಕೊ ಅದನ್ನು ನೀಡಲಾಗಿದೆ. ಬೆಳಿಗ್ಗೆ, ಸಂಜೆ ವಾಕಿಂಗ್​​ಗೆ ಅವಕಾಶ ನೀಡಲಾಗಿದೆ. ಬಿಸಿಲು ಬರುವಲ್ಲಿ ಬ್ಯಾರಕ್ ಬೇಕು, ಮಲಗಲು ಪಲ್ಲಂಗ ಬೇಕು ಎಂದರೆ ಕೊಡಲಾಗುವುದಿಲ್ಲ. ನಿಯಮ ಇದೆ ಎಂದ ಮಾತ್ರಕ್ಕೆ ಇಲ್ಲದ್ದನ್ನೆಲ್ಲ ಕೇಳಲು ಆಗುವುದಿಲ್ಲ’ ಎಂದು ಖಾರವಾಗಿಯೇ ವಾದ ಮಂಡಿಸಿದರು.

ಇದನ್ನೂ ಓದಿ:ದರ್ಶನ್ ಕೇಸ್: ಆರೋಪಿಗಳ ನಡುವೆ ವೈಮನಸ್ಸು; ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ

ದರ್ಶನ್ ಪರ ವಕೀಲರ ಸುನಿಲ್ ವಾದಿಸಿ, ‘ಇತರೆ ಖೈದಿಗಳನ್ನು ಕೇವಲ 14 ದಿನಕ್ಕೆ ಕ್ವಾರಂಟೈನ್ ಬ್ಯಾರಕ್​​ನಿಂದ ಬೇರೆ ಬ್ಯಾರಕ್​​ಗೆ ವರ್ಗಾವಣೆ ಮಾಡಲಾಗುತ್ತದೆ. ಆದರೆ ದರ್ಶನ್ ಅನ್ನು ಮಾತ್ರ ಇನ್ನೂ ಕ್ವಾರಂಟೈನ್ ಬ್ಯಾರಕ್​​ನಲ್ಲಿಯೇ ಇರಿಸಲಾಗಿದೆ’ ಎಂದರು. ಎಸ್​​ಪಿಪಿ ಪ್ರತಿವಾದಿಸಿ, ‘ಕ್ಯಾರಂಟೈನ್ ಸೆಲ್ ಸಹ ಜೈಲಿನ ಭಾಗ. ಅಲ್ಲದೆ ಖೈದಿಗಳನ್ನು ಯಾರನ್ನು ಎಲ್ಲಿ ಇಡಬೇಕು ಎಂಬುದು ಜೈಲು ಅಧೀಕ್ಷಕರ ವಿವೇಚನೆಗೆ ಬಿಟ್ಟ ವಿಚಾರ. ಖೈದಿಗಳ ಭದ್ರತೆ ದೃಷ್ಟಿಯಿಂದ ಅವರನ್ನು ನಿಗದಿತ ಸೆಲ್​​ಗಳಲ್ಲಿ ಇಡಲಾಗುತ್ತದೆ’ ಎಂದಿದ್ದಾರೆ.

ಸುನಿಲ್ ವಾದ ಮಂಡಿಸಿ, ‘ದರ್ಶನ್ ಅನ್ನು ಬೇರೆ ಬ್ಯಾರಕ್​​ಗೆ ಬಿಡಲು ಜೈಲಧಿಕಾರಿಗಳು ಹೆದರುತ್ತಿದ್ದಾರೆ. ಈ ಹಿಂದೆ ಅವರ ಲೋಪದಿಂದ ದರ್ಶನ್ ಫೋಟೊ ವೈರಲ್ ಆಗಿ ಅವರ ವಿರುದ್ಧವೇ ಎಫ್​​ಐಆರ್ ದಾಖಲಾಗಿತ್ತು. ಈ ಬೇರೆ ಬ್ಯಾರಕ್​​ಗೆ ವರ್ಗ ಮಾಡಿದರೆ, ಮತ್ತೆ ಅದೇ ಪುನರಾವರ್ತನೆ ಆಗುವ ಭಯ ಅವರಲ್ಲಿ ಕಾಡುತ್ತಿದೆ’ ಎಂದಿದ್ದಾರೆ ಸುನಿಲ್. ಇಂದು ನ್ಯಾಯಾಲಯದಲ್ಲಿ ಇಬ್ಬರು ವಕೀಲರ ನಡುವೆ ಏರಿದ ದನಿಯ ವಾದ-ಪ್ರತಿವಾದ ನಡೆಯಿತು. ಎಲ್ಲವನ್ನೂ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 09ಕ್ಕೆ ಕಾಯ್ದಿರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ